Skip to main content

ಮನುಷ್ಯನ ದೀರ್ಘಾಯಸ್ಸು 120 ವರ್ಷಗಳು

ಮನುಷ್ಯನ ದೀರ್ಘಾಯಸ್ಸು 120 ವರ್ಷಗಳು * ಮಂಡಗದ್ದೆ ಪ್ರಕಾಶ ಬಾಬು ಕೆ.ಆರ್. ಮಹಾಭಾರತದಲ್ಲಿ ಬರುವ ವಿಧುರ ನೀತಿ ಹೇಗೆ ಹೇಳುತ್ತದೆ, ಪೂರ್ವ ವಯಸ್ಸಿನ ನಮ್ಮ ಕಾರ್ಯ ಚಟುವಟಿಕೆಗಳು ಹೇಗೆ ಇರಬೇಕೆಂದರೆ ಬದುಕಿನ ಪ್ರಾರಂಭದಲ್ಲೇ ನಾವು ವೃದ್ಧಾಪ್ಯವನ್ನು ಎದುರಿಸಲು ಮನಸ್ಸನ್ನು ಸಿದ್ಧಗೊಳಿಸಬೇಕು. ಮನುಷ್ಯನು ನಿಷ್ಕ್ರಯನಾಗಿದ್ದರೆ ನಾನಾ ರೋಗಗಳು ಆಹ್ವಾನಿಸುತ್ತದೆ. ಆದ್ದರಿಂದ ಅಂಗಾಂಗಗಳೆಲ್ಲವೂ ಲವಲವಿಕೆಯಂದಿರುವಂತೆ ಕಾರ್ಯ ನಿರತರಾಗಿರಬೇಕು. ಆಗ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 120 ವರ್ಷಗಳ ಕಾಲ ಜೀವಿಸಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿ ಒಂದೊಂದು ಗ್ರಹಕ್ಕೂ ದಶ ವರ್ಷ ಮತ್ತು 3 ನಕ್ಷತ್ರಕ್ಕೆ ಒಂದು ಗ್ರಹ ಅಧಿಪತಿ ಎಂದು ನಿಗದಿ ಮಾಡಿರುವರು. ಅವು ಯಾವುವು ಎಂದರೆ, * ಅಶ್ವಿನಿ, ಮಖ ಮತ್ತು ಮೂಲ ನಕ್ಷತ್ರಕ್ಕೆ ಕೇತು ಗ್ರಹ ಅಧಿಪತಿ ಇದ್ದರೆ ದೆಸೆ 7 ವರ್ಷಗಳು. * ಭರಣಿ, ಪುಬ್ಬೆ ಮತ್ತು ಪೂರ್ವಾಷಾಢ ನಕ್ಷತ್ರಕ್ಕೆ ಶುಕ್ರ ಗ್ರಹ ಅಧಿಪತಿ ಇದರ ದೆಸೆ 20 ವರ್ಷಗಳು. * ಕೃತ್ತಿಕಾ, ಉತ್ತರೆ ಮತ್ತು ಉತ್ತರಾಷಾಢ ನಕ್ಷತ್ರಕ್ಕೆ ರವಿ ಗ್ರಹ ಅಧಿಪತಿ ಇದ್ರ ದೆಸೆ6 ವರ್ಷಗಳು. * ರೋಹಿಣಿ, ಹಸ್ತ ಮತ್ತು ಶ್ರವಣ ನಕ್ಷತ್ರಕ್ಕೆ ಚಂದ್ರ ಗ್ರಹ ಅಧಿಪತಿ. ಇದರ ದೆಸೆ 10 ವರ್ಷಗಳು. * ಮೃಗಶಿರಾ, ಚಿತ್ತ ಮತ್ತು ಧನಿಷ್ಠ ನಕ್ಷತ್ರಕ್ಕೆ ಕುಜ ಗ್ರಹ ಅಧಿಪತಿ ಇದರ ದೆಸೆ 7 ವರ್ಷಗಳು. * ಆರಿರ್ದ್ರಾ, ಸ್ವಾತಿ ಮತ್ತು ಶತಭಿಷ ನಕ್ಷತ್ರಕ್ಕೆ ರಾಹು ಅಧಿಪತಿ ಇದರ ದೆಸೆ 18 ವರ್ಷಗಳು. * ಪುನರ್ವಸು, ವಿಶಾಖ ಮತ್ತು ಪೂರ್ವಭಾದ್ರ ನಕ್ಷತ್ರಕ್ಕೆ ಗುರು ದೆಸೆ ಇದರ ದೆಸೆ 16 ವರ್ಷಗಳು. * ಪುಷ್ಯ, ಅನುರಾಧಾ ಮತ್ತು ಉತ್ತರಾಭಾದ್ರ ನಕ್ಷತ್ರಕ್ಕೆ ಶನಿ ಅಧಿಪತಿ ಇದರ ದೆಸೆ 19 ವರ್ಷಗಳು. * ಆಶ್ಲೇಷ, ಜ್ಯೇಷ್ಠ ಮತ್ತು ರೇವತಿ, ನಕ್ಷತ್ರಕ್ಕೆ ಬುಧ ಅಧಿಪತಿ ಇದರ ದೆಸೆ 17 ವರ್ಷಗಳು. ಹೀಗೆ ಗ್ರಹಗಳ ಒಟ್ಟು ದೆಸೆ 120 ವರ್ಷ ಆಗುವುದು. ಈ ಪ್ರಕಾರ ಮನುಷ್ಯನ ದೀರ್ಘಾಯಸ್ಸು 120 ವರ್ಷ ಆಗುವುದು. ಉದಾಹರಣೆ, ಒಂದು ಮಗು ಅಶ್ವಿನಿ ನಕ್ಷತ್ರದಲ್ಲಿ ಜನನವಾಗಿರುವುದು ಎಂದು ತಿಳಿದರೆ ಪ್ರಾರಂಭದಲ್ಲಿ ಆ ಮಗುವಿಗೆ ಕೇತು ದೆಸೆ ಆರಂಭ ಆಗುವುದು. 120 ವರ್ಷಗಳ ಕಾಲ ಜೀವಿಸಬೇಕಾದರೆ ಕೆಲವು ನಿಯಮವನ್ನು ಜೀವನದಲ್ಲಿ ಪಾಲಿಸಬೇಕಾಗುವುದು. ಅವು ಯಾವುವು ಎಂದರೆ, * ಆಹಾರ-ವಿಹಾರದಲ್ಲಿ ಹಿತಮಿತವಾಗಿರಬೇಕು. * ವ್ಯಾಯಾಮ, ವಾಯು ಸಂಚಾರ, ಯೋಗಾಭ್ಯಾಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. * ಧಾರ್ಮಿಕ, ಅಧ್ಯಾತ್ಮಿಕ ಪುಸ್ತಕಗಳನ್ನು ಅಧ್ಯಯನ ಮಾಡಬೇಕು. * ಧ್ಯಾನ, ಜಪ, ಸತ್ಸಂಗ್ ಮತ್ತು ಸಮಾಜ ಕಲ್ಯಾಣದ ಕೆಲಸಗಳಲ್ಲಿ ಭಾಗವಹಿಸಬೇಕು * ಮನಸ್ಸಿಗೂ ಮತ್ತು ಶರೀರಕ್ಕೂ ಸರಿ ಹೊಂದುವ ಕಾರ್ಯಗಳಲ್ಲಿ ನಿರತರಾಗಬೇಕು. * 50 ವರ್ಷದ ನಂತರ ಮನೆಯ ಜವಾಬ್ದಾರಿಯನ್ನು ಕಡಿಮೆ ಮಾಡಿಕೊಳ್ಳಬೇಕು. * ಕುಟುಂಬದ ಎಲ್ಲ ಸದಸ್ಯರಲ್ಲಿ ಮತ್ತು ಬಂಧು ಮಿತ್ರರಲ್ಲಿ ಸಂತೋಷದಿಂದ ಇರಬೇಕು. * ಜಾತಕದಲ್ಲಿ ಸಂಧಿ ಶಾಂತಿಗಳು ಇದ್ದರೆ ಕಡ್ಡಾಯವಾಗಿ ಮಾಡಿಕೊಳ್ಳಬೇಕು. ಈ ಎಲ್ಲ ನಿಯಮಗಳನ್ನು ಕ್ರಮವಾಗಿ ಪಾಲಿಸಿದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಿರುವಂತೆ 120 ವರ್ಷಗಳ ಕಾಲ ಸಂತೋಷದಿಂದ ಬದುಕಬಹುದು.

Comments

Popular posts from this blog

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ