ರಾಹು ಕೇತುಗಳ ಶುಭ ಫಲಗಳು * ಮೂಲ್ಕಿ ಹರಿಶ್ಚಂದ್ರ ಪಿ. ಸಾಲಿಯಾನ್
ಜಾತಕದಲ್ಲಿ ರಾಹು ಕೇತುಗಳ ಪಾತ್ರ ಏನು? ರಾಹು ಕೇತುಗಳಿಂದ ಶುಭ ಅಶುಭ ಫಲಗಳು ಇದ್ದೇ ಇರುತ್ತವೆ. ಕೆಲವರು ರಾಹು ಕೇತುಗಳಿಗೆ ಹೆದರುತ್ತಾರೆ. ರಾಹುವನ್ನು ಕಾಲ ರುದ್ರನೆಂದೂ, ಕೇತುವನ್ನು ಕ್ರಮಕಾರಕನೆಂದೂ ಹೇಳುತ್ತಾರೆ.
ರಾಹುವಿನ ಉಚ್ಚ ಸ್ಥಾನ ಮಿಥುನ. ಸ್ವಕ್ಷೇತ್ರ ಕನ್ಯಾ. ನೀಚ ಸ್ಥಾನ ಧನು. ಚಂದ್ರ ಮತ್ತು ಮಂಗಳ ರಾಹುವಿನ ವೈರಿಗಳು. ಬುಧ, ಶುಕ್ರ ಮತ್ತು ಶನಿಗಳು ಮಿತ್ರರು. ಕುಂಡಲಿಯ 3, 6 ಮತ್ತು 12ನೇಯ ಸ್ಥಾನದಲ್ಲಿ ರಾಹು ಇದ್ದರೆ ಇಂಥವರ ಜಾತಕರಿಗೆ ಒಳ್ಳೆಯ ಫಲ ನೀಡಲು ಪೂರಕನಾಗಿರುತ್ತಾನೆ. ಅನಿಷ್ಟವನ್ನು ನಿವಾರಿಸಲು ಶಕ್ತನಾಗುತ್ತಾನೆ. ಕುಂಡಲಿಯಲ್ಲಿ 1, 2, 4, 5, 7, 8, 9 ಮತ್ತು 10ನೇಯ ಸ್ಥಾನಗಳಲ್ಲಿ ರಾಹು ಇದ್ದರೆ ಶುಭ ಫಲ ಕೊಡುವುದಿಲ್ಲ.
ಕೇತುಗೆ ಧನು ರಾಶಿ ಉಚ್ಚವಾಗಿದೆ. ಮಿಥುನ ನೀಚ ಸ್ಥಾನ. ಅದರ ಸ್ವಕ್ಷೇತ್ರ ಮೀನ ರಾಶಿ. ಕೇತುನ ಮೂಲ ತ್ರಿಕೋಣ ಸಿಂಹ. ರಾಹು ಅಥವಾ ಕೇತುವು ಕುಂಡಲಿಯ ದ್ವಿತೀಯ ಇಲ್ಲವೇ ಸಪ್ತಮ ಸ್ಥಾನದಲ್ಲಿದ್ದು, ಧನಾದಿಪತಿ ಇಲ್ಲವೇ ಸಪ್ತಮಾಧಿಪತಿಯು ಅಶುಭ ಗ್ರಹದಿಂದ ಯುಕ್ತನಾಗಿದ್ದರೆ ಆ ದೆಸೆಯಲ್ಲಿ ಯಾವುದೇ ಒಳ್ಳೆಯ ಫಲವನ್ನು ಕೊಡುವುದಿಲ್ಲ.
1, 4, 7, 10 ಕೇಂದ್ರ ಸ್ಥಾನ 5, 9 ತ್ರಿಕೋಣ ಸ್ಥಾನದೊಡನೆ ರಾಹು ಇಲ್ಲವೇ ಕೇತು ದ್ವಿಸ್ವಭಾವ ರಾಶಿಯಲ್ಲಿದ್ದರೆ ಆ ಗ್ರಹಗಳ ದೆಸೆಯಲ್ಲಿ ಅಧಿಕಾರ, ಸಂಪತ್ತು ದೊರೆಯುವುದು. ವಷಭ, ಸಿಂಹ, ವಶ್ಚಿಕ ಮತ್ತು ಮಕರ ಇದು ಸ್ಥಿರ ರಾಶಿ. ಕೇಂದ್ರ ಇಲ್ಲವೇ ತ್ರಿಕೋಣ ಅಧಿಪತಿಯೊಡನೆ ರಾಹು ಇಲ್ಲವೇ ಕೇತುವು ಕುಂಡಲಿಯಲ್ಲಿದ್ದರೆ ಇಲ್ಲವೇ ಮೇಷ, ಕರ್ಕಾಟಕ, ತುಲಾ ಮತ್ತು ಧನು ಈ ಚರ ರಾಶಿಯಲ್ಲಿ ಕೇಂದ್ರ ಇಲ್ಲವೇ ತ್ರಿಕೋಣ ಅಧಿಪತಿಗಳಿಂದ ರಾಹು ಇಲ್ಲವೇ ಕೇತು ಕೂಡಿದರೆ ಆ ಗ್ರಹಗಳ ದೆಸೆಯಲ್ಲಿ ಜಾತಕನಿಗೆ ಬಹಳ ಸಂಪತ್ತು ಬರುತ್ತದೆ. ರಾಹು ಇಲ್ಲವೇ ಕೇತು ಅಶುಭ ಮನೆಯಲ್ಲಿ ಇದ್ದರೆ ಒಳ್ಳೆಯ ಫಲವು ಸಿಗುವುದಿಲ್ಲ. ರಾಹು ಕೇತುಗಳು ಕುಂಡಲಿಯ ಅನಿಷ್ಟ ಸ್ಥಾನದಲ್ಲಿದ್ದರೆ ಈ ಸಮಯದಲ್ಲಿ ಅನಿಷ್ಟ ಫಲವನ್ನು ಕೊಡುತ್ತದೆ. ರಾಹು ಕೇತುಗಳು ಮೇಷ, ವಷಭ, ಕರ್ಕಾಟಕ, ಸಿಂಹ, ತುಲಾ, ವಶ್ಚಿಕ, ಧನು ಮತ್ತು ಮಕರ ರಾಶಿಗಳಲ್ಲಿ ಕೇಂದ್ರದ ಅಧಿಪತಿಯಿಂದಾಗಲೀ ಅಥವಾ ತ್ರಿಕೋಣಾಧಿಪತಿಯಿಂದ ಕೂಡಿದ್ದರೆ ಜಾತಕರು ಬಹಳ ಹಣವಂತರಾಗುತ್ತಾರೆ. ಸ್ತ್ರೀಯರು ಮೇಷ ಲಗ್ನದಲ್ಲಿ ಜನಿಸಿದರೆ ಲಗ್ನದಲ್ಲಿ ರಾಹು, ಶುಕ್ರನಿದ್ದರೆ ಇವರು ಒಂದಕ್ಕಿಂತಲೂ ಜಾಸ್ತಿ ಮದುವೆಯಾಗುತ್ತಾರೆ. ತತೀಯದಲ್ಲಿ ರಾಹುವು ಮಂಗಳನಿಂದ ಯುಕ್ತನಾಗಿದ್ದರೆ ಇವರ ತಾಯಿಯ ಬಲ ಕಾಲಿಗೆ ತೊಂದರೆ ಬರುತ್ತದೆ. ಲಗ್ನದಲ್ಲಿ ಶನಿ ಏಕಾದಶ ಸ್ಥಾನದಲ್ಲಿ ರಾಹು ಇದ್ದರೆ ಇಂತಹ ಜಾತಕರು ಜೀವನ ಪೂರ್ತಿ ಸಂಪತ್ತಿನಿಂದ ಕೂಡಿದವರಾಗುತ್ತಾರೆ. ಲಗ್ನದಲ್ಲಿ ರಾಹು ದ್ವಿತೀಯದಲ್ಲಿ
ಶನಿ ಇದ್ದರೆ ಜಾತಕನು ತನ್ನ ಆಯುಷ್ಯವನ್ನೆಲ್ಲಾ ಬಡಿದಾಟದಲ್ಲಿಯೇ ಕಳೆಯುತ್ತದೆ. ಲಗ್ನದಲ್ಲಿ ರಾಹು, ಮಂಗಳ ಇಲ್ಲವೇ ಗುರುನಿಂದ ಯುಕ್ತರಾಗಿದ್ದರೆ ಇಂಥವರು ಸರಕಾರದ ದಂಡಕ್ಕೆ ಗುರಿಯಾಗುತ್ತಾರೆ. ಪಂಚಮದಲ್ಲಿ ಕೇತುವು ಮಂಗಳನೊಂದಿಗೆ ಯುಕ್ತನಾಗಿದ್ದರೆ ಜಾತಕರಿಗೆ ಹದಯದ ಕಾಯಿಲೆ ಬರುತ್ತದೆ. ನವಮದಲ್ಲಿ ಚಂದ್ರನೊಡನೆ ರಾಹು ಯುಕ್ತನಾಗಿದ್ದರೆ ಇವರಿಗೆ ಶುಭ ಫಲ ಸಿಗುತ್ತದೆ. ಏಕಾದಶದ ರಾಹು ಯಾವಾಗಲೂ ಒಳ್ಳೆಯ ಫಲ ಕೊಡುತ್ತದೆ.
ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ
Comments