Skip to main content

ಗ್ಯಾಸ್' ಅಬ್ಬರಿಸುತ್ತಿದೆಯೇ?

ಗ್ಯಾಸ್' ಅಬ್ಬರಿಸುತ್ತಿದೆಯೇ? ಪ್ರತಿ ವ್ಯಕ್ತಿಯೂ ಗುದ ದ್ವಾರದಿಂದ ಪ್ರತಿ ದಿನ `ಗ್ಯಾಸ್` ಹೊರಹಾಕುತ್ತಾನೆ. ಪ್ರತಿಯೊಬ್ಬರ ಜಠರ ಮತ್ತು ಕರುಳಿನಲ್ಲಿ ಸ್ವಲ್ಪ ಮಟ್ಟಿನ `ಗ್ಯಾಸ್` ಸಂಚಯ ಯಾವತ್ತೂ ಇದ್ದೆೀ ಇರುತ್ತದೆ. ಸಾಮಾನ್ಯ ಮನುಷ್ಯ ದಿನಕ್ಕೆ ಸುಮಾರು 14 ಸಾರಿ `ಗ್ಯಾಸ್` ಹೊರಹಾಕುವುದು ಸಾಮಾನ್ಯ. ಇದಕ್ಕಿಂತ ಹೆಚ್ಚಾದರೆ ಮಾತ್ರ ತೊಂದರೆ.- ಅಪಾನವಾತ, ಹೂಸು, ವಾಯು ಪ್ರಕೋಪ (flatulence) ಎಂದೆಲ್ಲ ಕರೆಸಿಕೊಳ್ಳುತ್ತಾ ಉದರದಲ್ಲಿ ಸಂಚಯವಾಗುವ ವಾಯುವೇ ಈಗೀಗ ಆಡು ಮಾತಿನಲ್ಲಿ ಇಂಗ್ಲಿಷ್‌ನ `ಗ್ಯಾಸ್` ಎಂದು ಕರೆಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ಕರುಳಿನಲ್ಲಿ 500 ರಿಂದ 2000 ಮಿಲಿಯಷ್ಟು `ಗ್ಯಾಸ್` ಉತ್ಪಾದನೆಯಾಗುತ್ತದೆ ಮತ್ತು ಇದು ಗುದ ದ್ವಾರದ ಮೂಲಕ ಹೊರಹೋಗುತ್ತದೆ. ಸಾಮಾನ್ಯವಾಗಿ ಐದು ರೀತಿಯ ವಾಸನೆ ರಹಿತ `ಗ್ಯಾಸ್`ಗಳು ಇರುತ್ತವೆ. ಅವುಗಳೆಂದರೆ ನೈಟ್ರೋಜನ್, ಹೈಡ್ರೋಜನ್, ಕಾರ್ಬನ್ ಡೈ ಆಕ್ಸೈಡ್, ಮೀಥೇನ್ ಮತ್ತು ಆಕ್ಸಿಜನ್. ಇದಲ್ಲದೇ ವಿಶಿಷ್ಟ ವಾಸನೆಯುಳ್ಳ ಸ್ಕೇಟೋಲ್, ಇಂಡೋಲ್ ಮತ್ತು ರಂಜಕಯುಕ್ತ ಗ್ಯಾಸ್‌ಗಳೂ ಉದರದಲ್ಲಿ ಉತ್ಪಾದನೆಯಾಗುತ್ತವೆ. ಉರಿಯುವ ಗುಣವಿರುವ ಗ್ಯಾಸ್‌ನಿಂದ ನೀವು ಬಳಲುತ್ತಿದ್ದರೆ ಇದಕ್ಕೆ ಕಾರಣ ಹೈಡ್ರೋಜನ್ ಮತ್ತು ಮೀಥೇನ್. ಉದರದಲ್ಲಿ ಈ `ಗ್ಯಾಸ್`ನ ಪ್ರಮಾಣ ನೇರವಾಗಿ ನಮ್ಮ ಕರುಳಿನಲ್ಲಿರುವ ಬ್ಯಾಕ್ಟೀರಿಯಾಗಳ ಮೇಲೆ, ಅವುಗಳಿಂದಾಗುವ ಹುದುಗುವಿಕೆ (fermentation) ಜೀರ್ಣ ಕ್ರಮ, ಹೀರುವ ಕ್ರಿಯೆ ಇತ್ಯಾದಿಗಳನ್ನು ಅವಲಂಬಿಸಿರುತ್ತದೆ. ವಿವಿಧ ರೀತಿಯ ವಾಸನೆಗಳು `ಗ್ಯಾಸ್`ನ ಪ್ರಮಾಣ ಮತ್ತು ನಾವು ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿರುತ್ತವೆ. ಕರುಳಿನ ಕೆರಳಿಕೆಯಂತಹ (irritable bowel syndrome) ಕೆಲವು ರೋಗಗಳು ಸಹ ಈ `ಗ್ಯಾಸ್`ಗೆ ಕಾರಣವಾಗಬಹುದು. `ಗ್ಯಾಸ್` ಎಲ್ಲರಲ್ಲೂ ಇದ್ದೇ ಇರುತ್ತದೆ. ಕೆಲವರಲ್ಲಿ ಹೆಚ್ಚು. ಈ `ಗ್ಯಾಸ್` ಹೆಚ್ಚಾದರೆ ಮಾರಣಾಂತಿಕ ಅಲ್ಲದಿದ್ದರೂ, ಸಾಮಾಜಿಕವಾಗಿ ಮುಜುಗರವನ್ನು ಉಂಟು ಮಾಡಬಲ್ಲದು. ಈ ಕಾರಣದಿಂದಲೇ ಈಸಮಸ್ಯೆ ಹೆಚ್ಚಾಗಿರುವ ರೋಗಿಗಳು ವೈದ್ಯರನ್ನು ಸಂಪರ್ಕಿಸುತ್ತಾರೆ. `ಗ್ಯಾಸ್`ಗೂ ಕತೆ ಇದೆ `ಗ್ಯಾಸ್`ನ ಇತಿಹಾಸದಲ್ಲಿ ಅನೇಕ ರೋಚಕ ಕತೆಗಳೇ ದಾಖಲಾಗಿವೆ. ಆಧುನಿಕ ವೈದ್ಯಕೀಯ ಪಿತಾಮಹ ಹಿಪ್ಪೋಕ್ರೇಟಸ್‌ನು `ಅಪಾನವಾತವನ್ನು ಹೊರಬಿಡುವುದು ವ್ಯಕ್ತಿಯ ಆರೋಗ್ಯಕ್ಕೆ ಹಿತಕರ` ಎಂದು ಪ್ರತಿಪಾದಿಸಿದ್ದ. ರೋಮನ್ ಚಕ್ರವರ್ತಿ ಕ್ಲಾಡಿಯಸ್, ಎಲ್ಲ ರೋಮನ್ ಪ್ರಜೆಗಳೂ ಅಗತ್ಯ ಬಿದ್ದಾಗ ಹೂಸನ್ನು ಪಾಸ್ ಮಾಡಬಹುದೆಂದು ಫರ್ಮಾನು ಹೊರಡಿಸಿದ್ದ. ದುರದೃಷ್ಟವಶಾತ್, ಚಕ್ರವರ್ತಿ ಕಾನ್‌ಸ್ಟಾಂಟಿನ್ ಕ್ರಿ.ಪೂ. 315ರಲ್ಲಿ ಈ ರಾಜಾಜ್ಞೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದ. 18ನೇ ಶತಮಾನದ ಮಧ್ಯಭಾಗದಲ್ಲಿ ಫ್ರೆಂಚ್ ಅಣಕು ಕಲಾವಿದ ಜೋಸೆಫ್ ಫ್ಯೂಗೋಲ್‌ ನಿಂದಾಗಿ `ಗ್ಯಾಸ್` ಪ್ರಾಮುಖ್ಯ, ಜನಪ್ರಿಯತೆ ಪಡೆದುಕೊಂಡಿತು. ಕಲಾವಿದ ಫ್ಯೂಗೋಲ್ ತನಗೆ ಬೇಕಾದಾಗ, ಬೇರೆ ಬೇರೆ ಗತಿಗಳಲ್ಲಿ, ಬೇರೆ ಬೇರೆ ಶ್ರುತಿಗಳಲ್ಲಿ ನಿನಾದಗಳನ್ನು ಹುಟ್ಟಿಸಿ ಹೂಸನ್ನು ಬಿಡುತ್ತಿದ್ದ. ಈತನ ಜನಪ್ರಿಯತೆ ಎಷ್ಟಿತ್ತೆಂದರೆ ಈತನ ತರಹವೇ ಅನೇಕ ತದ್ರೂಪಿಗಳು ಹುಟ್ಟಿಕೊಂಡರು. ಆದರೆ ಅವರೆಲ್ಲ ಹೊಟ್ಟೆಯಲ್ಲಿ `ಗ್ಯಾಸ್`ನ ಟ್ಯೂಬ್‌ಗಳನ್ನು ಅಡಗಿಸಿ ಇಟ್ಟುಕೊಂಡಿದ್ದುದು ನಂತರ ಪತ್ತೆಯಾಯಿತು. ಇತ್ತೀಚೆಗೆ ಈ ಗ್ಯಾಸನ್ನು ಅಮರತ್ವಗೊಳಿಸಿದ ಕೀರ್ತಿ ಹಾಲಿವುಡ್ ನಟ ಮೆಲ್‌ಬ್ರೂಕ್‌ನಿಗೆ ಸಲ್ಲಬೇಕು. ಈತ Blazing saddles ಎಂಬ ಸಿನಿಮಾದಲ್ಲಿ ಕಾಳು ತಿಂದು ಹೂಸು ಬಿಡುವ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದಾನೆ.ಬರುವುದೇಕೆ? -ಆಹಾರದಲ್ಲಿ ನಾರಿನಂಶ ಕೊರತೆ -ಹೊಟ್ಟೆಯಲ್ಲಿ ಪರಾವಲಂಬಿ ಹುಳುಗಳು -ಕರುಳಿನಲ್ಲಿ ಊತ -ಕರುಳಿನಲ್ಲಿ ತಡೆ -ಥೈರಾಯಿಡ್ ಗ್ರಂಥಿ ಸರಿಯಾಗಿ ಕಾರ್ಯ ನಿರ್ವಹಿಸದಿರುವುದು -ಮಾದಕ ವಸ್ತು ಸೇವನೆ ವೈದ್ಯರ ಭೇಟಿ ಯಾವಾಗ? ಗುದ ದ್ವಾರದಿಂದ ಅಧಿಕ `ಗ್ಯಾಸ್` ಹೊರಹೋಗುತ್ತಿದ್ದು ಹೊಟ್ಟೆನೋವು ಬರುತ್ತಿದ್ದರೆ, ಮಲ ವಿಸರ್ಜನೆಯ ಕ್ರಮದಲ್ಲಿ ಗಮನಾರ್ಹ ಬದಲಾವಣೆಗಳು ಕಂಡು ಬಂದರೆ, ಭೇದಿ ಆಗುತ್ತಿದ್ದರೆ, ಮಲಬದ್ಧತೆ ಇದ್ದರೆ, ಮಲವು ರಕ್ತ ಮಿಶ್ರಿತವಾಗಿದ್ದರೆ, ಜ್ವರ, ವಾಂತಿ, ವಾಕರಿಕೆಯ ಲಕ್ಷಣಗಳು ಕಂಡುಬಂದರೆ ವಿಳಂಬ ಮಾಡದೇ ವೈದ್ಯರನ್ನು ಸಂಪರ್ಕಿಸಬೇಕು. ಸುಖ ನಿದ್ರೆಗೆ 12 ಸೂತ್ರ ಡಾ. ಕೆ.ಬಿ.ರಂಗಸ್ವಾಮಿ ಬೇಗ ಮಲಗಿ ಬೇಗ ಏಳುವ ಅಭ್ಯಾಸ ರೂಢಿಸಿಕೊಳ್ಳಿ. ಶಾಲಾ ದಿನಗಳ ಮತ್ತು ರಜಾ ದಿನಗಳ ಮಲಗುವ ಹಾಗೂ ಎಚ್ಚರಗೊಳ್ಳುವ ವೇಳೆಯಲ್ಲಿ ಒಂದು ಗಂಟೆಗಿಂತಲೂ ಹೆಚ್ಚಿನ ಅಂತರ ಇರಬಾರದು. -ವಾರಾಂತ್ಯದ ದಿನಗಳಲ್ಲಿ ಹೆಚ್ಚು ಮಲಗುವ ಅಭ್ಯಾಸ ಒಳ್ಳೆಯದಲ್ಲ. -ಒಂದು ಕಿರು ನಿದ್ರೆಗೆ ಜಾರುವಿರಾದರೆ ಅದು ಒಂದು ಗಂಟೆಗಿಂತಲೂ ಅಧಿಕವಾಗಿರಬಾರದು ಮತ್ತು ಅದಕ್ಕೆ ಮಧ್ಯಾಹ್ನ ಸೂಕ್ತ ಸಮಯ. -ಪ್ರತಿ ನಿತ್ಯ ಸೂರ್ಯನ ಕಿರಣಗಳಿಗೆ ದೇಹವನ್ನು ಒಡ್ಡಿಕೊಳ್ಳಿ. ಇದು ಜೈವಿಕ ಗಡಿಯಾರವನ್ನು ಚಾಲನೆಯಲ್ಲಿಟ್ಟಿರಲು ಸಹಕಾರಿ. -ಪ್ರತಿ ನಿತ್ಯ ವ್ಯಾಯಾಮವನ್ನು ರೂಢಿಸಿಕೊಳ್ಳಿ. ಇದರಿಂದ ರಾತ್ರಿ ಅನಾಯಾಸವಾಗಿ ನಿದ್ರೆಗೆ ಜಾರುವಿರಿ ಮತ್ತು ಸುಖಕರ ನಿದ್ರೆ ಹೊಂದುವಿರಿ. -ಮಲಗುವ ಹಾಸಿಗೆಯು ನಿದ್ರೆಗಲ್ಲದೆ ಓದುವುದು, ಟಿ.ವಿ ನೋಡುವುದು ಮುಂತಾದ ಯಾವ ಚಟುವಟಿಕೆಗೂ ಬಳಕೆಯಾಗಬಾರದು. -ಮಲಗುವ ಮುಂಚಿನ ಒಂದು ಗಂಟೆಯ ಅವಧಿಯಲ್ಲಿ ಮನಸ್ಸು ನಿರಾಳವಾಗಿರಬೇಕು. ಇಷ್ಟವಾದ ಪುಸ್ತಕ ಓದುವುದು, ಸಂಗೀತ ಕೇಳುವುದು ಮುಂತಾದ ಕ್ರಿಯೆಗಳಿಂದ ಮನಸ್ಸಿಗೂ, ದೇಹಕ್ಕೂ ಆರಾಮವೆನಿಸಿ ಸುಲಭವಾಗಿ ನಿದ್ರೆಗೆ ಜಾರುವಿರಿ. ಮಲಗುವ ಮುನ್ನ ಭಯ ಉಂಟು ಮಾಡುವ ಚಲನಚಿತ್ರ ವೀಕ್ಷಿಸಬಾರದು ಮತ್ತು ಭಯ ಕೆರಳಿಸುವ ಪುಸ್ತಕ ಓದಬಾರದು. ಹಾಗೆಯೇ ಅಧಿಕ ಶಕ್ತಿ ವ್ಯಯವಾಗುವಂಥ ಶ್ರಮದಾಯಕ ಕೆಲಸ ಮತ್ತು ವ್ಯಾಯಾಮ ಸಹ ಒಳ್ಳೆಯದಲ್ಲ. -ಸಮಯಕ್ಕೆ ಸರಿಯಾಗಿ ಊಟ ಮಾಡಬೇಕು. ಹೊಟ್ಟೆ ಬಿರಿಯುವಂತೆ ತಿನ್ನುವುದಕ್ಕಿಂತ ಮಿತಾಹಾರ ಸೇವನೆ ಒಳ್ಳೆಯದು. -ಮಲಗುವ ಮುನ್ನ ಕಾಫಿ, ಟೀ ಮತ್ತು ಕೆಫೀನ್‌ಭರಿತ ಚಾಕೊಲೇಟ್‌ಗಳ ಸೇವನೆ ಒಳ್ಳೆಯದಲ್ಲ. -ಮದ್ಯಪಾನದಿಂದ ದೂರ ಇರಬೇಕು. ಆಲ್ಕೋಹಾಲ್ ನಿದ್ರೆಯಿಂದ ಆಗಾಗ ಎಚ್ಚರಗೊಳ್ಳುವಂತೆ ಮಾಡುತ್ತದೆ. -ಧೂಮಪಾನ ನಿಮ್ಮ ನಿದ್ರೆಯನ್ನು ಹಾಳುಗೆಡಹುತ್ತದೆ; ಆದ್ದರಿಂದ ದೂರವಿರಿ. -ವೈದ್ಯರ ಸಲಹೆಯಿಲ್ಲದೆ ಮತ್ತು ವಿನಾಕಾರಣ ನಿದ್ರೆ ಮಾತ್ರೆಗಳನ್ನು ಎಂದಿಗೂ ಬಳಸಬಾರದು. ಅವು ಶರೀರಕ್ಕೆ ಅಪಾಯಕಾರಿ ಅಷ್ಟೇ ಅಲ್ಲ, ನಿಲ್ಲಿಸಿದ ನಂತರ ನಿದ್ರಾ ಸಮಸ್ಯೆಗೂ ಈಡು ಮಾಡುತ್ತವೆ. ಮೇಲಿನ ಹನ್ನೆರಡು ಸೂತ್ರಗಳನ್ನು ಚಾಚೂ ತಪ್ಪದೆ ಪಾಲಿಸಿದರೆ ಸುಖಕರ ಗಾಢ ನಿದ್ರೆ ನಿಮ್ಮದಾಗುತ್ತದೆ

Comments

Popular posts from this blog

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ