Skip to main content

ನಕ್ಷತ್ರ ಮಾಲಿಕೆ: ಸ್ವಾತಿ ನಕ್ಷತ್ರದವರು ಸಹಾಯ ಹಸ್ತರು

ರತ್ನರಾಜ್ ಜೈನ್ ನೋಡುವಾಗ ಮಾಣಿಕ್ಯರತ್ನದಂತೆ ಏಕ ನಕ್ಷತ್ರ. ಹಾಗಾಗಿ ಮಾಣಿಕ್ಯರತ್ನದ ಜತೆ ಏಕಮುಖ ರುದ್ರಾಕ್ಷಿ ಧರಿಸಬಹುದು. ಈ ನಕ್ಷತ್ರಕ್ಕೆ ದೇವತೆ ವಾಯು. ನರಸಿಂಹ ಸ್ವಾಮಿ ದೇವರ ಜನನ ಈ ನಕ್ಷತ್ರದಲ್ಲಿಯೇ ಆಗಿರುತ್ತದೆ. (ಇದು ಸತ್ಯವೇ ಎಂದು ತಿಳಿದುಕೊಳ್ಳಬೇಕಾದರೆ 13.5.2014ರ ಮಂಗಳವಾರ ವೈಶಾಖ ಶುದ್ಧ ಚತುರ್ದಶಿ ದಿನ ಸ್ವಾತಿ ನಕ್ಷತ್ರವಿದೆ ಅದನ್ನು ನೋಡಬಹುದು). ಆ ದಿನ ನರಸಿಂಹಜಯಂತಿ ಕೂಡ ಆಗಿದೆ. ಜೈನರ 24ನೇ ತೀರ್ಥಂಕರರು ಮಹಾವೀರಸ್ವಾಮಿ ದೀಪಾವಳಿ ಅಮಾವಾಸ್ಯೆಯ ದಿನದಂದು ಸ್ವಾತಿ ನಕ್ಷತ್ರದಲ್ಲಿಯೇ ಮೋಕ್ಷ ಪಡೆದರು. ನಕ್ಷತ್ರದ ವಿಶೇಷತೆಯೆಂದರೆ ಈ ನಕ್ಷತ್ರದ ದಿನ ಗೃಹ ಪ್ರವೇಶವಾದರೆ ಮೂರು ವರ್ಷಗಳಲ್ಲಿ ಮನೆಯನ್ನು ಮಾರಾಟ ಮಾಡಿ ಬೇರೆ ಮನೆ ಕಟ್ಟುವಿರಿ. ಸಮುದ್ರದಲ್ಲಿರುವ ಮುತ್ತುಗಳಿಗೆ ಈ ನಕ್ಷತ್ರದ ಮಳೆ ಶ್ರೇಷ್ಠ ಆಗಿದೆ. ಈ ನಕ್ಷತ್ರದ ದಿನ ಅಮೂಲ್ಯವಸ್ತು ಕಳವಾದರೆ ಸಿಗಲಾರದು. ವಧು-ವರರ ಕೂಟಗಳಲ್ಲಿ ವ್ಯತ್ಯಾಸವಿದ್ದರೂ ಮಾಡಬಹುದು. ಆದರೆ ವಿವಾಹದ ನಂತರ ಲಕ್ಷ್ಮೀ ನರಸಿಂಹದೇವರ ದರ್ಶನ ಮಾಡತಕ್ಕದ್ದು. ಈ ನಕ್ಷತ್ರದಲ್ಲಿ ಜನಿಸಿದವನು ದೈವ ಭಕ್ತನೂ,ವಿನಯವಂತನೂ,ಉತ್ತಮ ವ್ಯಾಪಾರಿಯೂ, ದಯೆ ಉಳ್ಳವನೂ, ಕೈಲಾಸದ ಬಡ ಜನರಿಗೆ ಸಹಾಯ ಹಸ್ತ ಉಳ್ಳವನೂ, ಇವನ ಆರಾಧ್ಯ ದೇವರು ಲಕ್ಷ್ಮೀ ನರಸಿಂಹಸ್ವಾಮಿ. ಸ್ತ್ರೀಯಾದರೆ ಐಶ್ವರ್ಯವಂತಳೂ, ಪತಿವ್ರತೆ, ಪುತ್ರಸಂಹಾರ ಉಳ್ಳವಳೂ, ಯಶೋವಂತಳೂ, ನಿಧಾನವಾಗಿ ಕೆಲಸ ಮಾಡುವವಳು. ಆದರೆ ತವರು ಮನೆ ಬಗ್ಗೆ ಅದರಲ್ಲೂ ತಂದೆ ತಾಯಿಯವರ ಬಗ್ಗೆ ವಿಶೇಷ ಪ್ರೀತಿ ಇರತಕ್ಕವಳು. ಮದುವೆಯಾದ ನಂತರ ತವರು ಮನೆಗೆ ಹೋದರೆ ಅಂತಹ ಗಂಡನನ್ನು ವಿಶೇಷ ಭಕ್ತಿಯಿಂದ ಕಾಣುವಳು. ಈ ನಕ್ಷತ್ರದಲ್ಲಿ ರಜಸ್ವಲೆಯಾದರೆ ಆಯುಷ್ಯವಂತಳೂ, ಅಲಂಕಾರ ಸ್ತ್ರೀಯಳೂ, ಪುತ್ರವತಿ, ಆದರ್ಶ ಹೆಂಡತಿಯಂತೆ ಇರತಕ್ಕವಳು. ಮನೆಯ ಜವಾಬ್ದಾರಿ ಪಡೆಯತಕ್ಕವಳು ಆಗುವಳು. ಈ ನಕ್ಷತ್ರದಲ್ಲಿ ಹುಟ್ಟಿದ ಮಕ್ಕಳು ವಾಣಿಜ್ಯ,ಅರ್ಥಶಾಸ್ತ್ರ, ಗಣಕೀಕರಣ ವಿದ್ಯೆಯಲ್ಲಿ ಪರಿಣತರು. ಗಜ ಕೇಸರಿ ಯೋಗವಿದ್ದರೆ ಉತ್ತಮ ಜ್ಯೋತಿಷ್ಯ ಜ್ಞಾನಿಗಳು ಆಗುವರು. ಮಂಗಳ ಉತ್ತಮ ರಾಶಿಯಲ್ಲಿದ್ದರೆ ಕ್ರೀಡಾರ್ಥಿಗಳು ಆಗುವರು. ಈ ನಕ್ಷತ್ರ ಶುಕ್ರವಾರ, ಶನಿವಾರ ಇದ್ದರೆ ಅಮೃತ ಸಿದ್ಧಿಯೋಗ. ಯಾವುದೇ ಶುಭ ಕಾರ್ಯ ವಿವಾಹಾದಿ ಮಂಗಳ ಕಾರ್ಯಗಳನ್ನು ಮಾಡಬಹುದು. ಈ ನಕ್ಷತ್ರ ಯಾವ ದಿವಸ ಬಂದರೂ ದೋಷವಿಲ್ಲ, ಉತ್ತಮವೇ. ಆದರೆ ದ್ವಾದಶಿ ತಿಥಿ, ಗುರುವಾರ, ಶತಃಭಿಷ ನಕ್ಷತ್ರ ಇರುವ ದಿನಗಳಲ್ಲಿ ಯಾವುದೇ ಕಾರ್ಯ ಮಾಡಬಾರದು ಘಾತ ಆಗಿರುತ್ತದೆ. ಆರ್ಥಿಕ ಸಂಸ್ಥೆಯ ಅಧಿಕಾರ, ಮಾಹಿತಿ ತಂತ್ರಜ್ಞಾನವುಳ್ಳ ಉದ್ಯೋಗ, ಸ್ವ ಉದ್ಯೋಗ ಹಿಡಿಸಲಿದೆ. ವ್ಯಾಪಾರವಾದರೆ ವಾಹನ ಬಿಡಿ ಭಾಗಗಳು, ಎಲೆಕ್ಟ್ರೋನಿಕ್ ಸಂಬಂಧ ವ್ಯವಹಾರ, ಅಲಂಕಾರಿಕ ಸಾಮಗ್ರಿ, ಬಟ್ಟೆಗಳು ಹಿಡಿಸಲಿವೆ. ಹಾಗೆಯೇ ಅಡುಗೆ ಅನಿಲ, ಪೆಟ್ರೋಲಿಯಂ, ಉತ್ಪನ್ನ ಹಿಡಿಸಲಿವೆ. ಇವರ ಹೆಸರು ಜನ್ಮ ನಕ್ಷತ್ರ ರು,ರೆ,ರೊ, ಗಳಿಂದ ಆರಂಭವಾಗಿದ್ದರೆ 4 ಕ್ಯಾರೆಟ್‌ನ ಗೋಮೇದಿಕ ರತ್ನದ ಪದಕ ಧರಿಸುವುದು. ಸಮಾಜದಲ್ಲಿ ಕೀರ್ತಿಶಾಲಿ ಆಗಬೇಕಾದರೆ ಹೆಸರನ್ನು ಸಾಧಕ ತಾರೆಗಳಾದ ಪೂರ್ವಆಷಾಢ(ಭ,ಧ) ಭರಣಿ (ಲೆ ಲೊ) ಮತ್ತು ಹುಬ್ಬ (ಮೊ ಮೌ) ಅಕ್ಷರಗಳಿಂದ ಆರಂಭದ ಹೆಸರು ಇಡತಕ್ಕದ್ದು. ಈ ನಕ್ಷತ್ರದವರು ವಿಶಾಖ(ಬುಧವಾರ) ಪೂರ್ವಭಾದ್ರ(ಗುರುವಾರ) ಮತ್ತು ಪುನರ್ವಸು(ಸೋಮವಾರ) ಹೊಸಬಟ್ಟೆ, ಆಭರಣಗಳನ್ನು ಖರೀದಿಸಲು ಧರಿಸಲು ಉತ್ತಮ ದಿನಗಳು. ರೇವತಿ(ಶುಕ್ರವಾರ) ಇದ್ದ ದಿನದಂದು ಗೃಹಪ್ರವೇಶ, ವಿವಾಹಾದಿ ಮಂಗಳ ಕಾರ್ಯಗಳಿಗೆ ಉತ್ತಮದಿನ. ಪೂರ್ವಆಷಾಢ(ಗುರುವಾರ) ಎಲ್ಲ ಕಾರ್ಯಗಳಿಗೆ ಉತ್ತಮ ದಿನ. ಅನುರಾಧಾ, ಉತ್ತರಾಭಾದ್ರ ಮತ್ತು ಪುಷ್ಯ ದಿನಗಳಲ್ಲಿ ಪ್ರಯಾಣ ಮಾಡಬಾರದು. ಕೃತಿಕೆ, ಉತ್ತರೆ,ಉತ್ತರಆಷಾಢ ದಿನಗಳಲ್ಲಿ ಜಾಗ್ರತೆ ಇರಬೇಕು. ಆರಂಭ ದೆಸೆ ರಾಹು 18 ವರ್ಷ. 9,12,34,53,70 ಕಂಟಕದಾದರೆ 80 ವರ್ಷ ಆಯುಷ್ಯ. ಗಜ ಕೇಸರಿ ಯೋಗವಿದ್ದರೆ ಒಂದು ಸಾವಿರ ತಿಂಗಳು ಆಯುಷ್ಯ ಇರುವುದು. 13 ತಾರೀಖು ಶುಕ್ರವಾರ ಇದ್ದ ದಿನ ಯಾವ ಕಾರ್ಯ ಮಾಡಬಾರದು. ಹಾಗೆಯೇ 22 ಬುಧವಾರ ದಿನ ಪ್ರಯಾಣ ಮಾಡಬಾರದು. ಈ ನಕ್ಷತ್ರದ ವರನಿಗೆ ಅಶ್ವಿನಿ,ಭರಣಿ, ಮೃಗಶಿರ,ಆರಿದ್ರ, ಪುನರ್ವಸು, ಪುಷ್ಯ, ಹುಬ್ಬ,ಉತ್ತರೆ,ಹಸ್ತ,ಅನುರಾಧಾ, ಶ್ರವಣ, ಧನಿಷ್ಠ,ಪೂರ್ವಬಾದ್ರ ಕನ್ಯೆಯೊಡನೆ ವಿವಾಹ ಆಗಲು ಕೂಡಿಬರುತ್ತದೆ.

Comments

Popular posts from this blog

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ