Skip to main content

ಜ್ಯೋತಿಷ್ಯ ಶನಿಕಾಟದಲ್ಲಿ ಆಂಜನೇಯನಿಗೇಕೆ ಪೂಜೆ ಸಲ್ಲಿಕೆ?

ಶನಿಕಾಟದಲ್ಲಿ ಜನರು ಶನಿವಾರ ಹನುಮನ ದೇವಸ್ಥಾನಕ್ಕೆ ಹೋಗುತ್ತಾರೆ. ಆದರೆ ಹನುಮನ ಪೂಜಿಸುವ ವಾರ ಮಂಗಳವಾರ. ಶನಿಕೃಪೆಯಾಗಲಿ ಎಂದು ಹನುಮನ ದರ್ಶನ ಮಾಡುತ್ತಾರೆ. ನೀವು ಒಮ್ಮೆ ಪರೀಕ್ಷಿಸಿ. ಹನುಮನ ದೇವಸ್ಥಾನಕ್ಕೆ ಬಡವ, ಶ್ರೀಮಂತ, ಉಚ್ಚ, ಕೀಳುಜಾತಿಯೆಂಬ ಭೇದ-ಭಾವವಿಲ್ಲದೆ ಎಲ್ಲರೂ ಬರುತ್ತಾರೆ. ಒಬ್ಬ ವ್ಯಕ್ತಿ ಐಷಾರಾಮಿ ಕಾರು ತೆಗೆದುಕೊಂಡು ದೇವಸ್ಥಾನಕ್ಕೆ ಬಂದಿದ್ದಾನೆಂದರೆ ಅವನಿಗೂ ಶನಿಕಾಟದಿಂದ ಪಾರಾಗಬೇಕಿರುತ್ತದೆ. ಇನ್ನು ಮತ್ತೊಬ್ಬಾತ ಚಪ್ಪಲಿ ಬಿಟ್ಟರೆ ಹಣ ಕೊಡಬೇಕಾಗುತ್ತದೆ ಎಂದು ಎಲ್ಲೋ ಚಪ್ಪಲಿ ಬಿಟ್ಟು ಹನುಮನ ದರ್ಶನ ಮಾಡುತ್ತಾನೆ. ಅವನ ಹತ್ತಿರ ಚಪ್ಪಲಿ ಕಾಯುವವನಿಗೆ ಕೊಡಲು ಹಣವಿರುವುದಿಲ್ಲ. (ಯಾರಾದರೂ ಪ್ರಸಾದ ನೀಡುತ್ತಿದ್ದರೆ ತುಂಬಾ ಸಂತಸದಿಂದ ಸ್ವೀಕರಿಸಿ ಹೊಟ್ಟೆ ತಣ್ಣಗಾಗಿಸಿಕೊಳ್ಳುತ್ತಾನೆ. ಅದಕ್ಕೆಂದೆ ದೇವಸ್ಥಾನದಲ್ಲಿ ಪ್ರಸಾದಕ್ಕೆಂದು ನೀವೆನಾದರೂ ತೆಗೆದುಕೊಂಡು ಹೋಗಿ ಎಂದು ನಾನು ಹೇಳುವುದು). ಈಗ ನಿಮಗೆ ಅರ್ಥವಾಗಿರಬೇಕು ಶನಿದೇವನು ಯಾರನ್ನೂ ಬಿಡುವುದಿಲ್ಲ ಎಂಬುದು. ಏಕೆಂದರೆ ಅವರವರ ಲೆವಲ್‌ಗೆ ಶನಿಕಾಟ ಅನುಭವಿಸುತ್ತಿರುತ್ತಾರೆ. ಸಾಡೇಸಾತಿ ಸಮಯದಲ್ಲಿ ಹನುಮನನ್ನು ಒಲಿಸಿಕೊಳ್ಳಲು ಹನುಮಾನ್ ಚಾಲೀಸಾ ಓದುವುದು, ಹನುಮನ ದರ್ಶನ ಮಾಡುವುದೇಕೆ ಎಂಬ ಕುರಿತು ಪೌರಾಣಿಕ ಹಿನ್ನೆಲೆಯಿದೆ. ಎಷ್ಟೋ ಜನ ಪುರಾಣಗಳನ್ನು ಕಥೆಗಳೆಂದು ಹೀಗಳೆಯುತ್ತಾರೆ. ಮುಂದಿನ ಐದು ನೂರು ವರ್ಷಗಳ ನಂತರ ನಮ್ಮ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಗಾಂಧೀಜಿ ಕುರಿತು ಆವಾಗಿನ ಜನರು ಕೂಡ ಇತಿಹಾಸವನ್ನು ಮೂಢನಂಬಿಕೆ ಎನ್ನಬಹುದು! ಇರಲಿ "ನೀರಿದ್ದಲ್ಲಿ ಕೆಸರುಂಟು, ಊರಿದ್ದಲ್ಲಿ ಹೊಲಸುಂಟು" ಎಂದುಕೊಂಡು ಇಂಥಹವರ ಮಾತನ್ನು ನಿರ್ಲಕ್ಷ್ಯ ಮಾಡಿ ನಾವೇ ಬುದ್ಧಿವಂತರಾಗೋಣ. ಪೌರಾಣಿಕ ಹಿನ್ನೆಲೆ-1 : ಹನುಮನ ಕೃಪೆಯಾದರೆ ಶನಿರಾಜನ ಕೆಟ್ಟ ದೃಷ್ಟಿ ಕುಪ್ರಭಾವ ಕಮ್ಮಿಯಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದಕ್ಕಿರುವ ಪೌರಾಣಿಕ ಹಿನ್ನೆಲೆ ಎರಡಿವೆ. ಅದರಲ್ಲೊಂದು ಇದು. ಇದು ರಾಮಾಯಣಕ್ಕೆ ಸಂಬಂಧಪಟ್ಟಂತಹ ಹಿನ್ನೆಲೆ ಹೊಂದಿದೆ. ರಾಮಾಯಣದಲ್ಲಿನ ಮಹಾನ್ ಶಿವಭಕ್ತ ಅಸುರ ರಾವಣನು ನವಗ್ರಹಗಳನ್ನು ತನ್ನ ಅಡಿಯಾಳಾಗಿಟ್ಟುಕೊಂಡಿದ್ದನಂತೆ. ನವಗ್ರಹಗಳನ್ನು ತನ್ನ ಪಾವಟಿಗೆ ಮಾಡಿಕೊಂಡು ಅವರ ಬೆನ್ನ ಮೇಲೆ ಕಾಲಿಟ್ಟು ತನ್ನ ಸಿಂಹಾಸನವನ್ನೇರುತ್ತಿದ್ದನಂತೆ. ರಾವಣನ ಬಲಿಷ್ಠ ಮುಷ್ಠಿಯಿಂದ ತಪ್ಪಿಸಿಕೊಳ್ಳಲಾರದೇ ವಿಲವಿಲ ಒದ್ದಾಡುತ್ತಿದ್ದರಂತೆ ನವಗ್ರಹರು. ಅಪ್ರತಿಮ ಈಶ್ವರನ ಭಕ್ತನಾಗಿದ್ದ ರಾವಣ ಪ್ರಚಂಡನಾಗಿದ್ದನು. ಮಹಾಶಿವನ ಕೃಪಾಕಟಾಕ್ಷವೇ ರಾವಣನ ಮೇಲಿದ್ದುದರಿಂದ ಯಾರೂ ರಾವಣನ ತಂಟೆಗೆ ಬರುತ್ತಿರಲಿಲ್ಲ (ಆಫೀಸ್‌ನಲ್ಲಿ ಚಮಚಾಗಿರಿ, ಬಟರಿಂಗ್ ಮಾಡುತ್ತ ಬಾಸ್‌ಗೆ ಪ್ರಿಯವಾದವನ/ಳ ತಂಟೆಗೆ ಯಾರೂ ಹೋಗುವುದಿಲ್ಲವಲ್ಲ ಆ ರೀತಿ). ಅಸುರ ಬುದ್ಧಿಯಿಂದ ಮೆರೆದಾಡುತ್ತಿದ್ದ ರಾವಣನು ಶನಿದೇವನನ್ನೂ ತನ್ನ ಅಡಿಯಾಳಾಗಿಟ್ಟುಕೊಂಡಿದ್ದನು. ಆ ಸಮಯದಲ್ಲಿ ಹನುಮನು ಸೀತೆ ಹುಡುಕಿಕೊಂಡು ಬಂದಾಗ ಅಲ್ಲಿ ರಾವಣಾಸುರನ ಬಂಧನದಲ್ಲಿರುವ ನವಗ್ರಹ ನೋಡಿದನು. ಅಪ್ರತಿಮ ಬಲವಾನನಾದ ಹನುಮನು ಕೂಡಲೇ ಶನಿದೇವನನ್ನು ರಾವಣನ ಬಂಧನದಿಂದ ಬಿಡುಗಡೆ ಮಾಡಿದನು. ಆಗ ಶನಿದೇವನ ಕುದೃಷ್ಟಿಯಿಂದ ರಾವಣನ ಸರ್ವನಾಶಕ್ಕೆ ಮುನ್ನುಡಿಯಾಯಿತು. ರಾವಣಾಸುರನ ಬಂಧನದಿಂದ ತನ್ನನ್ನು ಬಿಡುಗಡೆ ಮಾಡಿದ್ದಕ್ಕೆ ಶನಿದೇವನು ಪ್ರಸನ್ನನಾದನು. ಶನಿವಾರ ಯಾರು ಭಕ್ತಿಯಿಂದ ಹನುಮನನ್ನು ಪೂಜಿಸುತ್ತಾರೋ ಅವರಿಗೆ ನನ್ನಿಂದ ಬರುವ ತೊಂದರೆಗಳು ಕಮ್ಮಿಯಾಗುತ್ತೆ ಎಂದು ವಚನ ಕೊಟ್ಟನಂತೆ. ಅಲ್ಲದೇ ಮನುಜರಿಗೆ ತನ್ನಿಂದ ಬರುವ ಎಲ್ಲ ರೀತಿ ಕಷ್ಟಪರಿಹಾರವಾಗುತ್ತವೆ. ಬರುವ ತಾಪತ್ರಯ ಕೂಡ ಹನುಮನ ಪೂಜಿಸುವುದರಿಂದ ಹೆಚ್ಚಿನ ಕೇಡು ಮಾಡುವುದಿಲ್ಲ ಎಂದು ಮಾತು ಕೊಟ್ಟನಂತೆ. ಹನುಮ, ನಿನ್ನನ್ನು ಎಲ್ಲರೂ ಪೂಜಿಸುವಂತಾಗಲಿ ಎಂದು ಶನಿದೇವನು ಹಾರೈಸಿದನಂತೆ. ಪೌರಾಣಿಕ ಹಿನ್ನೆಲೆ-2 : ಪೌರಾಣಿಕ ಹಿನ್ನೆಲೆಯು ಮತ್ತೊಂದಿದೆ. ಸಾಮಾನ್ಯವಾಗಿ ಪೌರಾಣಿಕ ವಿಷಯ ಬೇರೆಬೇರೆಯಾಗಿದ್ದರೂ ಸಾರಾಂಶ ಒಂದೇ ಆಗಿರುತ್ತದೆ. ಒಟ್ಟಿನಲ್ಲಿ ನಾವು ಮಾಡುವ ಪೂಜೆ, ಪುನಸ್ಕಾರಗಳು ದೇವರಿಗೆ ಮುಟ್ಟಿದರೆ ಸಾರ್ಥಕ ಎನ್ನುವವರು ನಾವೆಲ್ಲರೂ. ಶನಿದೇವನು ತನ್ನ ಕಾಡಾಟದಲ್ಲಿ ನಮ್ಮ ಹೆಗಲೇರುತ್ತಾನೆ ಎಂಬುದರ ಕುರಿತು ಈ ಮೊದಲು ನೀವು ಓದಿದ್ದೀರಿ. ಶನಿದೇವನು ಹನುಮನಿಗೆ ಸಾಡೇಸಾತಿ ಮೊದಲ ಹಂತದಲ್ಲಿ ಹೆಗಲೇರುತ್ತಾನಂತೆ. ಆಗ ಹನುಮನು ಅಗಾಧ ಪ್ರಮಾಣದಲ್ಲಿ ಬೆಳೆಯಲಾರಂಭಿಸಿದನಂತೆ. ಈ ಸಮಯದಲ್ಲಿ ಶನಿದೇವನು ಹನುಮನ ಹೆಗಲಿನಲ್ಲಿ ಸಿಕ್ಕಿಕೊಂಡು ವಿಲವಿಲ ಒದ್ದಾಡಲಾರಂಭಿಸಿದನಂತೆ. ತನ್ನನ್ನು ಕಾಪಾಡು ಎಂದು ಹನುಮನನಿಗೆ ಬೇಡಿಕೊಳ್ಳಲಾರಂಭಿಸಿದನಂತೆ. ಬಲಿಷ್ಠ ಹನುಮನ ಹಿಡಿತದ ನೋವು ಅನುಭವಿಸಲಾರದೇ ಶನಿದೇವನು ದಯವಿಟ್ಟು ನನ್ನನ್ನು ಬಿಡು ಎಂದು ಹನುಮನಲ್ಲಿ ಕೇಳಿಕೊಂಡನಂತೆ. ನನಗೇಕೆ ಹೆಗಲೇರಿದ್ದೀಯಾ ಎಂದು ಹನುಮನು ಕೇಳಿದನಂತೆ. ಆಗ ಶನಿದೇವನು ಎಲ್ಲರಿಗೂ ಬರುವಂತೆ ನಾನು ನಿನಗೂ ಬಂದು ಹೆಗಲೇರಿದ್ದೇನೆ. ಶಿವನಿಚ್ಛೆಯಂತೆ ಕರ್ಮಫಲ ನೀಡುವ ನನ್ನ ಕೆಲಸ ನಾನು ಮಾಡುತ್ತಿದ್ದೇನೆ ಎಂದನಂತೆ. ದಯವಿಟ್ಟು ನನ್ನನ್ನು ಈ ಸಹಿಸಲಸಾಧ್ಯವಾದ ನೋವಿನಿಂದ ಪಾರು ಮಾಡು. ಇನ್ಮೇಲೆ ನಿನ್ನನ್ನು ಯಾರು ಭಕ್ತಿಯಿಂದ ಪೂಜಿಸುತ್ತಾರೋ ಅವರಿಗೆ ನಾನು ಹೆಚ್ಚಿನ ತೊಂದರೆ ನೀಡುವುದಿಲ್ಲ ಎಂದು ಹೇಳಿದನಂತೆ. ಆದ್ದರಿಂದ ಹನುಮ ತನ್ನ ಭಕ್ತರ ಒಳಿತಾಗುತ್ತದೆಂದು ಶನಿದೇವನನ್ನು ಬಿಡುಗಡೆ ಮಾಡಿದನಂತೆ. ಈ ರೀತಿ ಹನುಮನನ್ನು ಶನಿವಾರದಂದು ಪೂಜಿಸಿದರೆ ಶನಿಕಾಟದಿಂದ ಮುಕ್ತಿ ಸಿಗುತ್ತದೆ ಎಂಬ ಮಾತು ಪ್ರಚಲಿತದಲ್ಲಿದೆ. ಹನುಮನ ಪಾದಕ್ಕೆ ಹಣೆಹಚ್ಚಿ ನಮಸ್ಕರಿಸುವುದು ತುಂಬಾ ಶ್ರೇಯಸ್ಕರ ಎಂದು ನೆನಪಿಟ್ಟುಕೊಳ್ಳಿ. ದೇವರೆಂದರೇನೆ ಮೂಢನಂಬಿಕೆ : ಕೆಲವರು ಆ ದೇವಸ್ಥಾನಕ್ಕೆ ಹೋಗಬೇಡಿ, ಈ ದೇವಸ್ಥಾನಕ್ಕೆ ಹೋಗಬೇಡಿ ಎಂದು ಹೇಳುತ್ತಿರುವುದನ್ನು ನೀವು ಕೇಳಿರಬಹುದು. (ಹೀಗೆ ಹೇಳುವವರು ಶಾಶ್ವತವಾಗಿ ಇಲ್ಲಿ ಇರಲ್ಲ. ಅವರೇ ಹೋಗುತ್ತಾರೆ. ಆದರೆ ದೇವಸ್ಥಾನಗಳು ಶಾಶ್ವತವಾಗಿ ಇಲ್ಲೇ ಇರುತ್ತವೆ!) ಆದರೆ ಇಂದಿನ ದಿನಗಳಲ್ಲಿ ದೇವರೆಂದರೇನೆ ಮೂಢನಂಬಿಕೆ ಎನ್ನುವ ಜನರೇ ನಮ್ಮಲ್ಲಿ ಹೆಚ್ಚಿದ್ದಾರೆ. ಇಂಥದರಲ್ಲಿ ಈ ರೀತಿ ಹೇಳುವುದರಿಂದ ದೇವರ ಮೇಲಿರುವ ಇದ್ದ ಅಲ್ಪಸ್ವಲ್ಪ ಭಯ, ಭಕ್ತಿ ಜನರಿಂದ ಮಾಯವಾಗುತ್ತದೆ. ಮದುವೆ ಆಗಲಾರದವರು, ಮಕ್ಕಳಾಗದವರು, ಉದ್ಯೋಗವಿಲ್ಲದವರು, ಆರೋಗ್ಯ ಸುಧಾರಿಸಿಕೊಳ್ಳಲು ಸಂಬಂಧಪಟ್ಟ ದೇವರನ್ನು ಪೂಜಿಸುತ್ತಿರುತ್ತಾರೆ. ಕೆಲವರಿಗಂತು ಯಾವುದಕ್ಕೆ ಯಾವ ದೇವರನ್ನು ಪೂಜಿಸುವುದು ಎಂಬುದು ಕೂಡ ಗೊತ್ತಿರುವುದಿಲ್ಲ. ಸುಮ್ಮನೆ ಎಲ್ಲರೂ ಹೋಗುತ್ತಾರೆಂದು ತಾವೂ ಹೋಗುತ್ತಿರುತ್ತಾರೆ. ಮಹಾಶಿವನು ಇಂತಿಂಥದಕ್ಕೆ ಇಂತಹ ದೇವರು ಎಂದು ನೇಮಿಸಿದ್ದಾನೆ. (ಮುಖ್ಯಮಂತ್ರಿಯು ಜನಸೇವೆಗಾಗಿ ಮಂತ್ರಿಗಳು, ಅಧಿಕಾರಿಗಳನ್ನು ನೇಮಿಸಿ ಅವರಿಗೊಂದು ಇಲಾಖೆ ಕೊಟ್ಟಿರುತ್ತಾರೆ, ಆ ರೀತಿ). ದೇವರ ಮೇಲೆ ಅಪವಾದ ಹೊರಿಸುವುದು ತರವಲ್ಲ. ಯಾವುದೇ ದೇವಸ್ಥಾನಕ್ಕೆ ಹೋದರು ಏನೂ ಕೆಟ್ಟದಾಗಿ ಆಗೋದಿಲ್ಲ. ಆದರೆ ನೀವು ಕೆಟ್ಟವರಾಗಿದ್ದುಕೊಂಡು ಬೇಕಾದ ವರ ದೇವರಲ್ಲಿ ಬೇಡಿಕೊಂಡರೆ "ಬೋರ್ಗಲ್ಲಿನ ಮೇಲೆ" ನೀರೆರೆದಂಗಾಗುತ್ತದೆ. ಏನಾದರೂ ಕೆಟ್ಟದ್ದಾಗುತ್ತಿರುವಾಗ "ಅನಿಷ್ಟಕ್ಕೆಲ್ಲ ಶನೈಶ್ಚರನೇ ಕಾರಣ" ಎಂಬ ಮಾತು ಕೂಡ ಕೇಳಿಬರುತ್ತದೆ. ಮಾಡಿದ್ದ ಕೆಟ್ಟ ಕೆಲಸ ನೆನಪಿಗೆ ಬರುವುದಿಲ್ಲ ಆ ಸಮಯದಲ್ಲಿ. ತಂದೆ ತಾಯಿ ನಿರ್ಲಕ್ಷಿಸಬೇಡಿ : ಎಷ್ಟೋ ಜನ ಮನೆಯಲ್ಲಿರುವ ತಂದೆ-ತಾಯಿ ನಿರ್ಲಕ್ಷ್ಯ ಮಾಡಿ, ಪಾಪದ ಹಣದಿಂದ ಐಷಾರಾಮಿಯಾಗಿ ಊರೂರು ಸುತ್ತುತ್ತ ದೇವರ ದರ್ಶನ ಮಾಡುತ್ತಿರುತ್ತಾರೆ. ತಮಗೆ ಜೀವ ಕೊಟ್ಟ ನಿಜವಾದ ದೇವರು ಮನೆಯಲ್ಲಿರುವ ತಂದೆ-ತಾಯಿ ಎಂಬುದು ಕೂಡ ಅರಿಯದಂತಹ ಮುಠ್ಠಾಳತನವಿರುವ ಸಾಕಷ್ಟು ಜನರು ನಮ್ಮ ಸುತ್ತಮುತ್ತ ಕಂಡು ಬರುತ್ತಾರೆ. ಆದರೆ ಇವರೇನೂ ಅವಿದ್ಯಾವಂತರಲ್ಲ. ವಿದ್ಯೆ, ಬುದ್ಧಿ ಎಲ್ಲ ಇರುತ್ತದೆ. ಸಮಾಜದಲ್ಲಿ ದೊಡ್ಡ ಹೆಸರು ಮಾಡಿಕೊಂಡಿರುತ್ತಾರೆ. ಮನೆಯಲ್ಲಿ ದೇವರಂತ ತಂದೆ-ತಾಯಿಯನ್ನು ಹೆಸರಿಲ್ಲದಂತೆ ಮಾಡಿ, ನರಕದ ನೋವು ಅನುಭವಿಸಲು ಸಿದ್ಧರಾಗಿ ತಮ್ಮ ಬಾವಿ ತಾವೇ ತೋಡಿಕೊಳ್ಳುತ್ತಾರೆ. ತಾವು ಮಾಡಿದ ತಪ್ಪು ಅರಿವಾಗುವಷ್ಟರಲ್ಲಿ ಎಲ್ಲ ಮುಗಿದು ಹೋಗಿರುತ್ತದೆ. ಆಗ ಗಳಿಸಿದ ಹಣ, ಬಂಗಾರ, ಆಸ್ತಿ ಯಾವುದಕ್ಕೂ ಉಪಯೋಗ ಬರುವುದಿಲ್ಲ. ಅನ್ಯಾಯದಿಂದ ಗಳಿಸಿದ್ದದರೊಂದಿಗೆ ಪ್ರಾಮಾಣಿಕವಾಗಿ ಗಳಿಸಿದ್ದು ಕೂಡ ಶನಿಕಾಟದಲ್ಲಿ ಕೊಚ್ಚಿಕೊಂಡು ಹೋಗುತ್ತದೆ. ಇನ್ನೊಂದು ವಿಶೇಷವೆಂದರೆ ಇಷ್ಟೆಲ್ಲಾ ದುರ್ಗುಣಗಳಿರುವ ಇಂಥಹವರಿಗೆ ಅವರ ತಂದೆ-ತಾಯಿ ದೇವರ ಹೆಸರಿಟ್ಟುತ್ತಾರೆ. ಆದರೆ ಇವರು ದೇವರ ಹೆಸರಿಟ್ಟುಕೊಂಡು ದಾನವರಾಗಿರುತ್ತಾರೆ. ಇಂಥವರು ಶನಿಕಾಟ ಅನುಭವಿಸುವುದನ್ನು ನಾವು ಕಣ್ಣಾರೆ ನೋಡಿದರೆ ನಮ್ಮ ಹೃದಯ ಹಿಂಡಿದಂತಾಗುತ್ತದೆ. "ಶನಿದಶೆಯಲ್ಲಿ ಹೇಗಿರುತ್ತೆ ಜೀವನ" ಎಂಬುದು ಮುಂದಿನ ಲೇಖನದಲ್ಲಿ. (ಒನ್‌ಇಂಡಿಯಾ ಕನ್ನಡ) ವಾಸ್ತು ಟಿಪ್ಸ್ : ಮನೆಯಲ್ಲಿ ಕನ್ನಡಿಯನ್ನು ಪೂರ್ವ ಮತ್ತು ಉತ್ತರ ದಿಕ್ಕಿನ ಗೋಡೆಗೆ ಹಾಕಿ. -ಸಂಗ್ರಹ

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ