Skip to main content

ಮಾರಕ ರೋಗಕ್ಕೂ ಮೃತ್ತಿಕಾ ಚಿಕಿತ್ಸೆ

ಮಾರಕ ರೋಗಕ್ಕೂ ಮೃತ್ತಿಕಾ ಚಿಕಿತ್ಸೆ ಮೃತ್ತಿಕಾ ಚಿಕಿತ್ಸೆಗೆ ಆಯರ್ವೇದದಲ್ಲಿ ಮಹತ್ವದ ಸ್ಥಾನವಿದೆ. ಮೃತ್ತಿಕಾ ಚಿಕಿತ್ಸೆಯಲ್ಲಿ ಪ್ರಾಕೃತಿಕವಾಗಿ ದೊರೆಯುವ ಮಣ್ಣನ್ನು ಸಂಸ್ಕರಿಸಿ ಬಳಸಲಾಗುತ್ತದೆ. ಕಪ್ಪು ಮಣ್ಣನ್ನು ಚರ್ಮರೋಗಗಳಿಗೆ, ಕೆಂಪು ಮಣ್ಣನ್ನು ಉದರ ಶೂಲೆ, ಗಂಟು ಬೇನೆಗೆ, ಹುತ್ತದ ಮಣ್ಣನ್ನು ಚರ್ಮ ರೋಗ ಗುಣ ಪಡಿಸಲು ಮತ್ತು ಬಿಳಿ ಮಣ್ಣನ್ನು ಯಕೃತ್ ತೊಂದರೆ ನಿವಾರಿಸಲು ಹಾಗೂ ಹಳದಿ ಮಣ್ಣನ್ನು ಪಚನ ಕ್ರಿಯೆ ತೊಂದರೆ ಮತ್ತು ಮಧುಮೇಹ ಕಾಯಿಲೆಗೆ ಬಳಸಲಾಗುತ್ತದೆ. ಮಣ್ಣನ್ನು ಎರಡು ರೀತಿಯಲ್ಲಿ ಬಳಸಿಕೊಳ್ಳಲಾಗುತ್ತದೆ. ಸರ್ವಾಂಗ ಲೇಪನ ಮತ್ತು ಸ್ಥಾನಿಕ ತೊಂದರೆಗಳಿಗೆ ಉಪಯೋಗಿಸಿಕೊಳ್ಳಲಾಗುತ್ತದೆ. ಮಣ್ಣಿನ ಲೇಪ ಹಾಕಿಕೊಂಡು 20-30 ನಿಮಿಷ ಕಾಲ ಒಣಗಲು ಹಾಗೆಯೇ ಬಿಡಬೇಕು. ಮೃತ್ತಿಕಾ ಚಿಕಿತ್ಸೆಯ 24 ತಾಸುಗಳ ಮೊದಲು ಸಂಗ್ರಹಿಸಿದ ಮಣ್ಣನ್ನು ನೀರಿನಲ್ಲಿ ನೆನೆಸಿಡಬೇಕು. ಅದನ್ನು ನೇರವಾಗಿ ಬಳಸಬಹುದು ಅಥವಾ ಬಿಳಿ ಬಟ್ಟೆಯಲ್ಲಿ ಸುತ್ತಿ ದೇಹದ ಭಾಗಕ್ಕೆ ಹಚ್ಚಬಹುದು. ಮಣ್ಣಿನ ಚಿಕಿತ್ಸೆಯ ಪ್ರಯೋಜನ * ಮೃತ್ತಿಕಾ ಸ್ನಾನದಿಂದ ದೇಹ ರಿಫ್ರೆಶ್ ಆಗುತ್ತದೆ. * ಮಣ್ಣಿನ ಪ್ಯಾಕ್ ಹಾಕಿಸಿಕೊಂಡರೆ ತಣ್ಣೀರಿನ ಪ್ಯಾಕ್ ಹಾಕಿಸಿಕೊಳ್ಳುವದಕ್ಕಿಂತಲೂ ಹೆಚ್ಚಾಗಿ, ದೇಹದಲ್ಲಿ ನೀರಿನಂಶ ದೀರ್ಘ ಕಾಲ ಉಳಿಯುತ್ತದೆ. * ಚರ್ಮದ ಪಿಎಚ್ ಮೌಲ್ಯವನ್ನು ಸರಿಯಾಗಿರಿಸುತ್ತದೆ. * ದೇಹದಲ್ಲಿ ಸುಗಮ ರಕ್ತ ಸಂಚಾರಕ್ಕೆ ಎಡೆ ಮಾಡಿಕೊಡುತ್ತದೆ. * ಮಡ್ ಥೆರಪಿಯಿಂದ ಮೊಡವೆಯನ್ನು ಕಡಿಮೆ ಮಾಡುತ್ತದೆ ಮತ್ತು ಮೊಡವೆಯಿಂದ ಉಂಟಾದ ಕಲೆಯನ್ನು ಹೋಗಲಾಡಿಸುತ್ತದೆ. * ಚರ್ಮವನ್ನು ನುಣುಪಾಗಿರಿಸುತ್ತದೆ. * ಉರಿಯೂತವನ್ನು ತಡೆಯುತ್ತದೆ. ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಸತ್ತ ಚರ್ಮವನ್ನು ನಾಶ ಮಾಡಿ ಹೊಸ ಚರ್ಮ ಬೆಳೆಯುವುದಕ್ಕೆ ಸಹಕರಿಸುತ್ತದೆ. * ಕಜ್ಜಿ, ಸಣ್ಣ ಗುಳ್ಳೆಗಳಿಂದ ದೇಹದಲ್ಲಾದ ಕಲೆಗಳನ್ನು ಮಡ್‌ಥೆರಪಿಯಿಂದ ಬಹು ಬೇಗ ಕಡಿಮೆ ಮಾಡಿಕೊಳ್ಳಬಹುದು. * ಕಣ್ಣಿನ ಆಯಾಸವನ್ನು ಕಡಿಮೆ ಮಾಡುತ್ತದೆ. * ಕುಷ್ಠರೋಗ, ಅಲರ್ಜಿ, ಸೋರಿಯಾಸಿಸ್ ಹಾಗೂ ಇತರ ಚರ್ಮರೋಗಗಳಿಗೆ ಮಡ್ ಥೆರಪಿಯಿಂದ ಪರಿಹಾರ ಕಂಡುಕೊಳ್ಳಬಹುದು. * ಸಾಮಾನ್ಯ ವೀಕ್‌ನೆಸ್, ನರ ದುರ್ಬಲತೆಯನ್ನು ಸರಿಪಡಿಸಲು ಮಡ್ ಥೆರಪಿ ಮಾಡುತ್ತಾರೆ. * ಅಜೀರ್ಣ ಆಗಿದ್ದರೆ ಹೊಟ್ಟೆಯ ಮೇಲ್ಭಾಗದಲ್ಲಿ ಮಣ್ಣಿನ ಪ್ಯಾಕ್ ಹಾಕಿಸಿಕೊಳ್ಳಬಹುದು. ಸಣ್ಣ ಕರುಳಿನ ಉಷ್ಣತೆಯನ್ನು ಕಡಿಮೆ ಮಾಡುತ್ತದೆ. ವಿಪರೀತ ತಲೆನೋವಿಗೆ ತಲೆಗೆ ಮಣ್ಣಿನ ಪ್ಯಾಕ್ ಹಾಕಿಸಿಕೊಳ್ಳಬಹುದು. ಇದರಿಂದ ನೋವು ಬಹುಬೇಗ ಶಮನಗೊಳ್ಳುತ್ತದೆ. -ಸಂಗ್ರಹ

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ