Skip to main content

*ಗ್ರಹಗಳು ಜಾತಕನ ಕುಂಡಲಿಯಲ್ಲಿ ಬಲಹೀನರಾಗಿದ್ದರೆ ಉಂಟಾಗುವ ತೊಂದರೆಗಳು ಇವುಗಳ ಪರಿಹಾರಗಳು* ರವಿ:-

*ಗ್ರಹಗಳು ಜಾತಕನ ಕುಂಡಲಿಯಲ್ಲಿ ಬಲಹೀನರಾಗಿದ್ದರೆ ಉಂಟಾಗುವ ತೊಂದರೆಗಳು ಇವುಗಳ ಪರಿಹಾರಗಳು* ಗ್ರಹಗಳು:- ೧)ನೀಚತ್ವದಲ್ಲಿ ೨)ಶತೃಕ್ಷೇತ್ರಗಳಲ್ಲಿ ೩)ದುಸ್ಥಾನಗಳಲ್ಲಿ ಅಶುಭರ ಸಂಪರ್ಕದಲ್ಲಿದ್ದರೆ ೪)ಅಸ್ತಂಗತ ೫)೫,೮,೯,೪,೧೨ನೇ ಸ್ಥಾನಳಲ್ಲಿದ್ದರೆ. ೬)ಕೇಂದ್ರಾದಿಪತಿಯಾಗಿ ತನ್ನದಲ್ಲದ ಮತ್ತೊಂದು ಕೇಂದ್ರದಲ್ಲಿದರೆ. ೭)ಗ್ರಹ ಯುದ್ದದಲ್ಲಿ ಪರಾಜಿತ ಈ ರೀತಿ ಇದ್ದಾಗ ಗ್ರಹಗಳು ಬಲಹೀನರೆಂದು ಪರಿಗಣಿಸಲಾಗುತ್ತದೆ. *ರವಿಯಿಂದ ಉಂಟಾಗುವ ತೊದರೆಗಳು ಮತ್ತು ಅದಕ್ಕೆ ಪರಿಹಾರಗಳು* ತೊಂದರೆಗಳು:- ಆತ್ಮ ವಿಶ್ವಾಸದ ಗೌರವದ ಕೊರತೆ,ದೈರ್ಯ,ಉತ್ಸಾಹಗಳು ಇಲ್ಲದಿರುವಿಕೆ,ಇತರರ ಬಗ್ಗೆ ಹೆದರಿಕೆ. ಮುನ್ನುಗ್ಗುವವರಲ್ಲ. ಎಲ್ಲದಕ್ಕೂ ಇತರರ ಮೇಲೆ ಸದಾ ಅವಲಂಬನೆ ಜೀವನದಲ್ಲಿ ಸೋಲು,ಮೇಲಾಧಿಕಾರಿಗಳಲ್ಲಿ ಸದಾವಿರಸ,ತಂದೆಯ ಅಸಹಕಾರ,ಮಗನಿಂದ ಮಾನಸಿಕ ಹಿಂಸೆ,ಬಲಗಣ್ಣಿನಲ್ಲಿ ತೊಂದರೆ,ಜೀವನದಲ್ಲಿ ಸಮಸ್ಯೆಗಳಿಂದ ನೊಂದು ಸಂಸಾರದಲ್ಲಿ ಯಾರಾದರು ಸನ್ಯಾಸಿಯಾಗುತ್ತಾರೆ,ಕಳ್ಲತನ ಅಥವ ಸರ್ಕಾರದಿಂದ ಶಿಕ್ಷೆ,ಪತ್ನಿಯ ಸಮಸ್ಯೆ,ಇದರಿಂದಾಗಿ ಮಾನದ್ಸಿಕನೋವು,ಉತ್ಸಾಹಹೀನತೆ,ಅಶಕ್ತತೆ,ಹಸಿವು ಇಲ್ಲದಿರುವಿಕೆ,ಹಾಗು ಅಜೀರ್ಣತೆ,ಕ್ಷೀಣನಾಡಿಬಡಿತ,ಹೃದಯದೌರ್ಬಲ್ಯತೆ,ರಕ್ತ ಚಲನೆಯಲ್ಲಿ ಕೊರತೆ,ನರದೌರ್ಬಲ್ಯ,ದೃಷ್ಟಿದೋಷ,ಸಂದಿವಾತ ಮತ್ತು ಮೂಳೆಗಳು ದುರ್ಬಲವಾಗಿರುತ್ತವೆ. ಪರಿಹಾರಗಳು:- *ಶಿವಮತ್ತು ರವಿಯನ್ನು ಆರಾಧಿಸಿ,೨೩ರಿಂದ೨೪ನೇ ವಯಸ್ಸಿನೊಳಗೆ ವಿವಾಹವಾಗಿ,ರವಿಗೆ ಸಂಬಂದಿಸಿದ ಇತರರೌ ನೀಡಿದ ವಸ್ತುಗಳನ್ನು ದೇವಸ್ಥಾನಕ್ಕೆ *ದಾನಮಾಡಿ,ಬಿಳಿ ಅಥವ ಗುಲಾಬಿಬಣ್ಣದ ವಸ್ತುಗಳನ್ನು ಉಪಯೋಗಿಸಿ,ಸಕ್ಕರೆನೀರನ್ನು ಗುಲಾಬಿ ಪುಷ್ಪಗಳೊಂದಿಗೆ ಉದಯಿಸುತ್ತಿರುವ ರವಿಗೆ ಅರ್ಪಿಸಿ. *ಸರ್ಕಾರದಲ್ಲಿನ ಉದ್ಯೋಗಿಯನ್ನು ಅಥವ ವೈದ್ಯರನ್ನು ಆದರಿಸಿ. *ಕುರುಡರಿಗೆ,ಕೋತಿ,ಅಥವ ಹುಂಜಕ್ಕೆ ಆಹಾರವನ್ನು ನೀಡಿ. *ಸಂಜೆ ಇರುವೆಗಳಿಗೆ ಅಕ್ಕಿ,ಸಕ್ಕರೆ ಎಳ್ಲನ್ನು ಕೊಡಿ. *ಆಹಾರ ತೆಗೆದುಕೊಳ್ಲುವುದಕ್ಕೆ ಮುಂಚೆ ಅಗ್ನಿಗೆ ಸ್ವಲ್ಪ ಅರ್ಪಿಸಿ. *ಬೆಲ್ಲ,ತಾಮ್ರ,ಚಿನ್ನವನ್ನು ದಾನಮಾಡಿ. *ತಾಮ್ರದ ಅಥವ ಲೋಹದ ನಾಣ್ಯವನ್ನು ಹರಿಯುವ ನೀರಿನಲ್ಲಿ ಹಾಕಿ *ಸೂರ್ಯಗ್ರಹಣದ ದಿನ ಹರಿಯುವ ನೀರಲ್ಲಿ ಇದ್ದಿಲು,ಸಾಸಿವೆಕಾಳು ಅಥವ ಬಾರ್ಲಿಯನ್ನು ಹಾಕಿ. *ಕೆಲಸವನ್ನು ಆರಂಬಿಸುವ ಮೊದಲು ಸ್ವಲ್ಪ ಸಿಹಿಯನ್ನು ತಿಂದು ನೀರುಕುಡಿಯಿರಿ. *ಮನೆಯಲ್ಲಿ ಅಡುಗೆ ಮನೆ ಪೂರ್ವದ ಗೋಡೆಯ ಕಡೆ ಇರಲಿ. *ಸುಳ್ಳು ಸಕ್ಷ್ಯ ಹೇಳದಿರಿ,ಮಾಂಸ ಮತ್ತು ಮದ್ಯಗಳನ್ನು ಬಿಡಿ. *ಉಪ್ಪನ್ನು ಕಡಿಮೆ ಉಪಯೋಗಿಸಿ ಮತ್ತು ಭಾನುವಾರಗಳಂದು ಉಪವಾಸಮಾಡಿ. *ವಿಷ್ಣುವನ್ನು ಆರಾಧಿಸಿ ಮತ್ತು ಹರಿವಂಶವನ್ನು ಓದಿ. *ದೇವಾಲಯಕ್ಕೆ ದಾನಮಾಡಿ. *ತಾಮ್ರದ ಪಾತ್ರೆಯಲ್ಲಿ ಬಾದಾಮಿ ಅಥವ ನೀರನ್ನು ರಾತ್ರಿ ತಲೆಯ ಬಳಿ ಇಟ್ಟುಕೊಂಡು ಅದನ್ನು ಬೆಳಗ್ಗೆ ದೇವಸ್ಥಾನಕ್ಕೆ ಕೊಡಿ.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ