Skip to main content

ಪಾಯ ತೆಗೆವ ಪದ್ಧತಿ ಶಾಸ್ತ್ರ ಸಮ್ಮತವಾಗಿರಲಿ

ಪಾಯ ತೆಗೆವ ಪದ್ಧತಿ ಶಾಸ್ತ್ರ ಸಮ್ಮತವಾಗಿರಲಿ ಯಾವುದೇ ರೀತಿಯ ಕಟ್ಟಡ ನಿರ್ಮಾಣ ಮಾಡುವ ಸಂದರ್ಭದಲ್ಲಿ ಪೂರ್ಣವಾದ ಫಲ ಸಿಗಬೇಕೆಂದರೆ ಮಾರ್ಕಿಂಗ್ ಮತ್ತು ಪಾಯ ತೆಗೆಯುವಾಗ ಕೆಲವೊಂದು ಮುಖ್ಯವಾದ ಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಟ್ಟಡ ನಿರ್ಮಿಸಲು ಈಗಾಗಲೇ ಸಿದ್ಧಪಡಿಸಿರುವ ನಕ್ಷೆಯ ಪ್ರಕಾರ ಮಾರ್ಕಿಂಗ್ ಮಾಡುವಾಗ ತೆಗೆದುಕೊಳ್ಳಬೇಕಾದ ವಾಸ್ತು ಶಾಸ್ತ್ರದ ಜಾಗೃತ ನಿಯಮಗಳು ಹೀಗಿವೆ. * ನಿವೇಶನದಲ್ಲಿ ನಕ್ಷೆಯ ಪ್ರಕಾರ ಅಳತೆ ಮಾಡಿ ಮಾರ್ಕಿಂಗ್ ಮಾಡಬೇಕಾರೆ, ನೆಲಕ್ಕೆ ಕೆಲವೊಂದು ಸ್ಟೀಲ್ ರಾಡ್‌ಗಳನ್ನು ಸಿಕ್ಕಿಸಬೇಕಾಗುತ್ತದೆ. ಹೀಗೆ ಸಿಕ್ಕಿಸುವ ಸ್ಟೀಲ್ ರಾಡನ್ನು ಮೊದಲು ನೈಋತ್ಯ ಭಾಗದಲ್ಲಿ ಪೂರ್ವಕ್ಕೆ ಮುಖ ಮಾಡಿ ಸಿಕ್ಕಿಸಬೇಕು. ನಂತರದ್ದು ಕ್ರಮವಾಗಿ ಆಗ್ನೇಯ, ವಾಯುವ್ಯ ಮತ್ತು ಈಶಾನ್ಯ ಮೂಲೆಯಲ್ಲಿ ಸಿಕ್ಕಿಸಬೇಕಾಗುತ್ತದೆ. * ಈ ಸ್ಟೀಲ್ ರಾಡ್‌ನಿಂದ ಸ್ಟೀಲ್ ರಾಡ್‌ಗೆ ದಾರವನ್ನು ಕಟ್ಟುವಾಗ (ಅಂದರೆ ಮಾರ್ಕ್ ಮಾಡಲು ದಾರ ಕಟ್ಟಬೇಕಾಗುತ್ತದೆ). ಮೊದಲ ದಾರ ನೈಋತ್ಯದಿಂದ ಆಗ್ನೇಯಕ್ಕೂ, ಎರಡನೆಯದಾಗಿ ನೈಋತ್ಯದಿಂದ ವಾಯುವ್ಯಕ್ಕೂ, ಮೂರನೆಯದಾಗಿ ಆಗ್ನೇಯದಿಂದ ಈಶಾನ್ಯಕ್ಕೂ ಮತ್ತು ಕಡೆಯದಾಗಿ ವಾಯುವ್ಯದಿಂದ ಈಶಾನ್ಯಕ್ಕೆ ಕಟ್ಟುವುದು ಶಾಸ್ತ್ರ ಸಮ್ಮತ. * ಹೀಗೆ ಕಟ್ಟಿದ ದಾರದ ಮೇಲೆ ಪೌಡರ್ ಹಾಕಿ ಮಾರ್ಕ್ ಮಾಡಬೇಕಾಗುತ್ತದೆ. ಈ ಪೌಡರ್ ಹಾಕುವ ಕ್ರಮವೂ ಈ ರೀತಿಯಾಗಿರುವುದು ಒಳ್ಳೆಯದು. ಅಂದರೆ ಪೌಡರ್ ಹಾಕುವ ವ್ಯಕ್ತಿಯ ಮುಖ ಪೂರ್ವ ಅಥವಾ ಉತ್ತರಕ್ಕೆ ಮಾಡಿರಬೇಕು. ಕ್ರಮವಾಗಿ ನೈಋತ್ಯದಿಂದ ಆಗ್ನೇಯ, ನೈಋತ್ಯದಿಂದ ವಾಯುವ್ಯ, ಆಗ್ನೇಯದಿಂದ ಈಶಾನ್ಯ ಮತ್ತು ವಾಯುವ್ಯದಿಂದ ಈಶಾನ್ಯ ಈ ಕ್ರಮವಾಗಿ ಮಾಡುವುದು ಶುಭಕರ. ಪಾಯ ತೆಗೆಯುವಾಗ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸಬೇಕಾಗುತ್ತದೆ * ಮಾರ್ಕಿಂಗ್ ನಂತರದಲ್ಲಿ ಭೂಮಿಯನ್ನು ಅಗೆಯುವ ಕೆಲಸ ಶುರು ಆಗುತ್ತದೆ. ಹೀಗೆ ಶುರುವಾದ ಕೆಲಸ ಮೊದಲು ಈಶಾನ್ಯ ಭಾಗದಲ್ಲಿ ಆಗಬೇಕು. ಅದು ಪಾಯ ಆಗಬಹುದು, ಪಿಲ್ಲರ್‌ನ ಫಿಟ್ ಆಗಬಹುದು, ನೀರಿನ ಸಂಪ್ ಆಗಬಹುದು. ಒಟ್ಟಾರೆ ಮೊದಲು ಭೂಮಿ ಅಗೆಯುವ ಕೆಲಸ ಈಶಾನ್ಯದಿಂದಲೇ. ನಂತರದಲ್ಲಿ ಈಶಾನ್ಯದಿಂದ-ಉತ್ತರ-ವಾಯುವ್ಯ, ಈಶಾನ್ಯದಿಂದ-ಪೂರ್ವ-ಆಗ್ನೇಯ, ವಾಯುವ್ಯದಿಂದ-ಪಶ್ಚಿಮ-ನೈಋತ್ಯ, ಆಗ್ನೇಯದಿಂದ-ದಕ್ಷಿಣ-ನೈಋತ್ಯ. ಇದೇ ಕ್ರಮದಲ್ಲಿ ಭೂಮಿ ಅಗೆಯುವುದು ಶಾಸ್ತ್ರ ಸಮ್ಮತ. * ಹೀಗೆ ತೆಗೆದಂತಹ ಮಣ್ಣನ್ನು ನೈಋತ್ಯ, ದಕ್ಷಿಣ ಮತ್ತು ಪಶ್ಚಿಮ ಭಾಗದಲ್ಲೇ ಹಾಕಬೇಕು. ಸ್ವಲ್ಪ ಭಾಗ ಮಾತ್ರ ಆಗ್ನೇಯ ಮತ್ತು ವಾಯುವ್ಯದಲ್ಲಿ ಹಾಕಬಹುದು. ಆದರೆ ಯಾವುದೇ ಕಾರಣಕ್ಕೂ ಉತ್ತರ, ಪೂರ್ವ ಮತ್ತು ಈಶಾನ್ಯದಲ್ಲಿ ಹಾಕಬಾರದು. * ಇದಾದ ನಂತರ ಕಟ್ಟಡ ನಿರ್ಮಿಸಲು ಬೇಕಾದ ಕಚ್ಚಾ ವಸ್ತುಗಳನ್ನು ಶೇಖರಿಸಬೇಕಾಗುತ್ತದೆ. ಅಂತಹ ಕಚ್ಚಾವಸ್ತುಗಳಲ್ಲಿ ಮೊದಲನೆಯದಾಗಿ ಮರಳನ್ನು ನೈಋತ್ಯ ಭಾಗದಲ್ಲಿ ಹಾಕಬೇಕು. * ಉಳಿದ ಯಾವುದೇ ಕಚ್ಚಾ ವಸ್ತುಗಳನ್ನು ನೈಋತ್ಯ, ದಕ್ಷಿಣ ಮತ್ತು ಪಶ್ಚಿಮ ಭಾಗದಲ್ಲಿ ಮಾತ್ರ ಶೇಖರಿಸಬೇಕು. * ಯಾವುದೇ ಕಾರಣಕ್ಕಾಗಿ ಈಶಾನ್ಯ, ಪೂರ್ವ ಮತ್ತು ಉತ್ತರದಲ್ಲಿ ವಸ್ತುಗಳನ್ನು ಶೇಖರಿಸಬಾರದು. ಈ ರೀತಿ ತೆಗೆದ ಪಾಯದಲ್ಲಿ ಕಲ್ಲು ಜೋಡಣೆಯಾಗಲಿ ಅಥವಾ ಪಿಲ್ಲರ್ ಪುಟಿಂಗ್ ಕಾಂಕ್ರೀಟ್ ಆಗಲಿ ಮಾಡಬೇಕಾದರೆ, ಮೊದಲು ನೈಋತ್ಯ ಮೂಲೆ, ನಂತರ ಕ್ರಮವಾಗಿ ದಕ್ಷಿಣ, ಪಶ್ಚಿಮ, ಆಗ್ನೇಯ, ವಾಯುವ್ಯ, ಪೂರ್ವ, ಉತ್ತರ ಮತ್ತು ಕಡೆಯದಾಗಿ ಈಶಾನ್ಯದಲ್ಲಿ ಮಾಡಬೇಕು. ಈ ಎಲ್ಲ ಶಾಸ್ತ್ರ ಸಮ್ಮತವಾದ ಕ್ರಮಗಳನ್ನು ಅನುಸರಿಸುವುದರಿಂದ ಕಟ್ಟಡ ನಿರ್ಮಾಣ ಸುಲಲಿತವಾಗಿ ನಡೆದು ಎಲ್ಲ ಶುಭವಾಗುತ್ತದೆ.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ