Skip to main content

*ಗ್ರಹಗಳು ಜಾತಕನ ಕುಂಡಲಿಯಲ್ಲಿ ಬಲಹೀನರಾಗಿದ್ದರೆ ಉಂಟಾಗುವ ತೊಂದರೆಗಳು ಇವುಗಳ ಪರಿಹಾರಗಳು* ಕುಜ:-

ಕುಜ:- ಉತ್ಸಾಹ ರಹಿತರು,ಯಾವುದೇ ಕೆಲಸವನ್ನು ಮಾಡಲು ಅನರ್ಹತೆ,ನಿರ್ಬೀತಿಯಿಂದ ಇರಲಾರರು,ಹಾಗು ತಮ್ಮ ಸ್ವಂತ ಬಲದ ಮೇಲೆ ನಿಲ್ಲರಾರರು,ಇತರರ ಅಧಿಕಾರಕ್ಕೆ ದಬ್ಬಾಳಿಕೆಗೆ ಸುಲಬವಾಗಿ ಒಳಗಾಗುವವರು,ಕೋರ್ಟು ವ್ಯವಹಾರಗಳಲ್ಲಿ ಸಿಲುಕುವವರು,ಇದರಿಂದ ನಷ್ಟಗಳನ್ನು ಅನುಭವಿಸಿವವರು. ಅನಿರೀಕ್ಷಿತವಾಗಿ ಸ್ಥಿರಾಸ್ಥಿಯು ಮಾರಾಟಕ್ಕೆ ಬರುತ್ತದೆ,ಅಥವ ಇತರರ ಅನುಬೋಗಕ್ಕೆ ಒಳಗಾಗುತ್ತದೆ,ಅಗ್ನಿ,ಕಳ್ಳರು ಮತ್ತು ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತಾರೆ,ರೋಗ ನಿರೋದಕಶಕ್ತಿ ಇರುವುದಿಲ್ಲ.ಹಸಿವಿಲ್ಲದಿರುವಿಕೆ,ದೇಹ ತೂಕವನ್ನು ಕಳೆದುಕೊಳ್ಳುತ್ತದೆ,ಬಲಹೀನ ಜಠರ-ಕರುಳಿನ ತೊಂದರೆಗಳು,ರಕ್ತಸೋರುವ ಗಾಯಗಳು,ರಕ್ತಹೀನತೆಯಿಂದ ಗಾಯಗಳು ವಾಸಿಯಾಗುವುದು ನಿದಾನವಾಗುತ್ತದೆ. ಪುರುಷರಲ್ಲಿ ನಿರ್ವೀರ್ಯತೆ ಕಿವಿ,ಕೀಲು,ಮಂಡಿ,ಕಾಲುಗಳು ನೋವಿರುತ್ತದೆ,ಪತ್ನಿಗೆ ಅನಾರೋಗ್ಯವಿರುತ್ತದೆ,ದಾಂಪತ್ಯ ಸುಖವಿರುವುದಿಲ್ಲ,ಗರ್ಭಪಾತ ಅಥವ ಹುಟ್ಟಿದ ಮಕ್ಕಳೆಲ್ಲಾ ಸಾಯುವುದು,ಕುಟುಂಬದಲ್ಲಿ ಹೆಚ್ಚಿನ ಸಾವು*ದಾಂಪತ್ಯದ ಹೊರಗೂ ಸಂಬಂದಗಳು* ಮಗನ ತಪ್ಪಿನಿಂದ ಬಾಧೆ,ಸುಖವಿರುವುದಿಲ್ಲ ಹಿರಿಯ ಸೋದರ ಅಥವ ಭಾವನಿಂದ ಸಮಸ್ಯೆಗಳು,ಇವರ ತಾಯಿ ಅಥವ ಸೋದರಿಯೊಡನೆ ಸೋದರರ ಬಂದುಗಳು ಅಥವ ಸ್ನೇಹಿತರ ಸಂಬಂದಗಳು ಹಿತವಾಗಿರುವುದಿಲ್ಲ ಶತೃಗಳು ಹೆಚ್ಚಾಗುವಿಕೆ. ಪರಿಹಾರಗಳು:- *ಸುಬ್ರಮಣ್ಯ,ಹನುಮಂತರನ್ನು ಬೆಸ ರಾಶಿಯವರು/ಚಾಮುಂಡಿಅಥವ ಭದ್ರಕಾಳಿಯನ್ನು ಸಮರಾಶಿಯವರು ಆರಾಧಿಸಿ. *ಮಂಗಳವಾರಗಳಂದು ಉಪವಾಸವನ್ನು ಮಾಡಿ ಸಿಹಿಯನ್ನು ಹಂಚಿ *ಕರ್ಪೂರ,ಮೊಸರು,ಸುಗಂಧ,ದ್ರವ್ಯಗಳನ್ನು ಕೆಂಪು ವಸ್ತ್ರದಲ್ಲಿ ಇರಿಸಿ ನಿರ್ಜನ ಪ್ರದೇಶದಲ್ಲಿ ನೆಲದಲ್ಲಿ ಹುದುಗಿಸಿ. *ಹಾಲನ್ನು ಆಲದ ಮರದ ಬುಡಕ್ಕೆ ಹಾಕಿ ಹಸಿಯ ಮಣ್ಣನ್ನು ತಿಲಕದಂತೆ ಹಚ್ಚಿಕೊಳ್ಳಿ,ಬೇವಿನ ಮರವನ್ನು ನೆಟ್ಟು ನೀರನ್ನು ಹಾಕುತ್ತಿರಿ. *ಸೋದರ ಮತ್ತು ಸೋದರ ಮಾವನನ್ನು ಆರಾಧಿಸಿ. *ನಾಯಿಗಳಿಗೆ ತಂದೂರಿ ಸಿಹಿರೊಟ್ಟಿಯನ್ನು ೪೫ ದಿನಗಳ ಕಾಲ ಕೊಡಿ. *ಸದಾ ಗಾಯತ್ರಿ ಮಂತ್ರ ಅಥವ ಹನುಮಾನ್ ಚಾಲೀಸವನ್ನು ಪಠಿಸುತ್ತಿರಿ. *ರಕ್ತ ದಾನ ಮಾಡಿ. *ಮಂಗಳವಾರ ಮದ್ಯಾಹ್ನಗಳಂದು ಹರಿಯುವ ನೀರಲ್ಲಿ ಬತ್ತಾಸು ಹಾಕಿ *ಚಪಾತಿಯನ್ನು ಸುಡುವ ಮುಂಚೆ ಕಾದ ಹೆಂಚಿನ ಮೇಲೆ ನೀರನ್ನು ಚುಮುಕಿಸಿ. *ಬಂಗಾರ, ಬೆಳ್ಳಿ, ತಾಮ್ರದ ಉಂಗುರವನ್ನು ಧರಿಸಿ. *ತುಕ್ಕು ಹಿಡಿದ ವಸ್ತುಗಳನ್ನು ಮನೆಯಲ್ಲಿ ಇಡಬೇಡಿ. *ಕೆಂಪು ವಸ್ತ್ರಗಳನ್ನು ಸೋದರತ್ತೆ,ಸೋದರಿ,ತಾಯಿಗೆ ಹಾಗು ಹೆಂಡತಿಗೆ ಕೊಡಿ. *ಪಕ್ಷಿಗಳಿಗೆ ಸಿಹಿಯನ್ನು ತಿನ್ನಿಸಿ. *ರೋಗಗಳಿಂದ ಮುಕ್ತರಾಗಲು ಜಿಂಕೆ ಚರ್ಮದ ಮೇಲೆ ಮಲಗಿ. *ಅಗ್ನಿ ಅಪಘಾತಗಳ ತಡೇಗಟ್ಟಲು ಸಕ್ಕರೆಯ ಖಾಲಿ ಚೀಲಗಳನ್ನು ಸಜ್ಜೆಯ ಮೇಲೆ ಇಡಿ.ಬಾವ,ಬಾಮೈದುನ ನೊಂದಿಗೆ ಬಾಗಸ್ಥವ್ಯವಹಾರ ಮಾಡದಿರಿ. *ಪತ್ನಿ ಅಥವ ಮಕ್ಕಳಿಗೆ ತೊಂದರೆ ಇದ್ದರೆ ಮಣ್ಣಿನ ಪಾತ್ರೆಯಲ್ಲಿ ಜೇನು ತುಪ್ಪವನ್ನು ಇಟ್ಟು ರುದ್ರಭೂಮಿಯಲ್ಲಿ ಹುದುಗಿಸಿ. *೮ನೇ ಸ್ಥಾನದಲ್ಲಿ ಕುಜನು ಅಶುಭನಾಗಿದ್ದರೆ ಆನೆಗೆ ಸಂಬಂದಿಸಿದ ದಂತದ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದು. *೬ನೇ ಸ್ಥಾನದಲ್ಲಿ ಕುಜನು ಅಶುಭನಾಗಿದ್ದರೆ ೬ ಮಂದಿ ಕನ್ಯಾ ಮುತ್ತೈದೆಯರ ಅಶೀರ್ವಾದವನ್ನು ೬ ದಿನಗಳ ಕಾಲ ಪಡೆಯಿರಿ.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ