Skip to main content

ಆಹಾರದಲ್ಲಿ ಕಬ್ಬಿಣ ಸತ್ವದ ಪ್ರಾಮುಖ್ಯತೆ.

ಅನೀಮಿಯಾ ಅಥವಾ ಕಬ್ಬಿಣದ ಸತ್ವ ದ ನ್ಯೂನತೆಯನ್ನು ಕಡಿಮೆ ಮಾಡಲು ಕಬ್ಬಿಣದ ಅಂಶವು ಹೇರಳವಾಗಿರುವ ಅಹಾರಗಳ ಪಟ್ಟಿ ಮಾಡಲಾಗಿದೆ. ನಿಮಗೆ ಅನೀಮಿಯಾ ಇದ್ದಲ್ಲಿ, ಸೂಚಿಸಿರುವ ಈ ಆಹಾರಗಳಲ್ಲಿ ಕಬ್ಬಿಣದ ಅಂಶವು ಹೇರಳವಿರುವ ಆಹಾರವನ್ನು ಸೇವಿಸಿ. ದೇಹದಲ್ಲಿ ಕಬ್ಬಿಣದ ಕಡಿಮೆಯಾಗುವ ಕಾರಣದಿಂದ ಅನೀಮಿಯಾ ಅಥವಾ ಹೆಮೊಗ್ಲೋಬಿನ್‌ ಕೊರತೆ ಬಾಧಿಸುತ್ತದೆ. ಕಬ್ಬಿಣದ ಸತ್ವವಿರುವ ಅಹಾರಗಳು ಕೆಳಗೆ ಸೂಚಿಸಿರುವ 100 ಗ್ರಾಂ ಅಹಾರಗಳಲ್ಲಿ, 8ಗ್ರಾಂ ಅಥವಾ ಅದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣದ ಸತ್ವವಿರುತ್ತದೆ. 1. ಧಾನ್ಯಗಳು ಹಾಗೂ ಕಾಳುಗಳು: ಬಾರ್ಲಿ, ಅಕ್ಕಿಯ ತರಿ. 2. ಬೇಳೆಗಳು ಹಾಗೂ ಬೀನ್ಸ್‌ : ಹುರುಳಿ, ಅವರೆ, ಕೋಡುಗಳು, ಸೋಯಾಬೀನ್ಸ್‌, ಕೋಸು. ಇವು ಕಬ್ಬಿಣದ ಸತ್ವವು ಹೇರಳವಾಗಿರುವ ಅಹಾರ. ಈ ಆಹಾರಗಳಲ್ಲಿ ಕಬ್ಬಿಣದ ಸತ್ವ ಮಾತ್ರವಲ್ಲದೆ ವಿಟಮಿನ್‌ ಸಿ ಸಹ ಹೇರಳವಾಗಿದ್ದು , ಕಬ್ಬಿಣದ ಸತ್ವದ ಹೀರುವಿಕೆಗೆ ನೆರವಾಗುತ್ತದೆ. 3. ಸಮುದ್ರದ ತರಕಾರಿಗಳಲ್ಲಿಯೂ ಕಬ್ಬಿಣದ ಸತ್ವವು ಹೇರಳವಾಗಿರುತ್ತದೆ. 4. ಹಣ್ಣುಗಳು : ಒಣ ಖರ್ಜೂರ , ಕಲ್ಲಂಗಡಿ, ಒಣದ್ರಾಕ್ಷಿ. 5. ಮೀನು ಹಾಗೂ ಕೆಂಪು ಮಾಂಸ 6. ಪ್ರಾಣಿಜನ್ಯ ಮಾಂಸಾಹಾರದಲ್ಲಿ (ಹೇಯಿಮ್‌ ಕಬ್ಬಿಣದ ಸತ್ವವು ಹೇರಳವಾಗಿರುತ್ತದೆ.) ಸಸ್ಯಾಹಾರವನ್ನೇ ಸೇವಿಸಿ ದೇಹಕ್ಕೆ ಅಗತ್ಯ ವಿರುವ ದೈನಂದಿನ ಕಬ್ಬಿಣದ ಸತ್ವವನ್ನು ಪೂರೈಸಿಕೊಳ್ಳಬಹುದು. ಉದಾಹರಣೆಗೆ , 1 ಕಪ್‌ ಬೆಂದ ಸ್ಪಿನಾಚ್‌ ಅಥವಾ ಬಸಳೆ ಜಾತಿಯ ತರಕಾರಿಯಲ್ಲಿ 3 ಮಿ.ಗ್ರಾಂ, 1 ಕಪ್‌ ಟೋಪು ಅಥವಾ ಸೋಯಾ ಪನೀರ್‌ನಲ್ಲಿ 13.2 ಮಿ.ಗ್ರಾಂ ಹಾಗೂ 1ಕಪ್‌ ಬೆಂದ ಅವರೆ ಕಾಳಿನಲ್ಲಿ 6.4 ಮಿ.ಗ್ರಾಂ . ಕಬ್ಬಿಣದ ಅಂಶ ಇರುತ್ತದೆ. ಕಬ್ಬಿಣದ ಅಂಶವು ದೇಹಗತವಾಗುವ ಪ್ರಕ್ರಿಯೆ ಕಬ್ಬಿಣದ ಸತ್ವವು ಹೇರಳವಾಗಿರುವ ಆಹಾರವನ್ನು ಸೇವಿಸಿದ ಕೂಡಲೇ ಅ ಅಂಶವು ದೇಹಗತವಾಗುವುದಿಲ್ಲ ಎಂಬುದು ನಮಗೆ ಅರಿವಿರಬೇಕು. ಅದರ ದೇಹಗತವಾಗುವಿಕೆಯು ಅದು ಯಾವ ರೀತಿಯ ಕಬ್ಬಿಣದ ಸತ್ವ ಎಂಬುದನ್ನು ಅವಲಂಬಿಸಿದೆ. ಪ್ರಾಣಿ ಜನ್ಯ ಕಬ್ಬಿಣದ ಸತ್ವವು (ಹೇಯಿಮ್‌ ಕಬ್ಬಿಣದ ಸತ್ವ) ಬಹಳ ಸುಲಭವಾಗಿ ದೇಹಗತವಾಗುತ್ತದೆ. ಆದರೆ ತರಕಾರಿಗಳಲ್ಲಿ ಇರುವಂತಹ ಹೇಯಿಮ್‌ ರಹಿತ ಕಬ್ಬಿಣದ ಸತ್ವವು ದೇಹಗತವಾಗುವುದು ಬಹಳ ನಿಧಾನ. ಸಸ್ಯಜನ್ಯ ಆಹಾರದಿಂದ 1-10% ಕಬ್ಬಿಣವು ದೇಹಗತವಾದರೆ, ಪ್ರಾಣಿಜನ್ಯ ಆಹಾರದಿಂದ 10-20% ಕಬ್ಬಿಣವು ದೇಹಗತವಾಗುತ್ತದೆ. ಕಬ್ಬಿಣದ ಸತ್ವವು ದೇಹಗತವಾಗಲು ಉತ್ತೇಜಕ‌ ಅಂಶಗಳು ಬೇಯಿಸದ ಅಥವಾ ಕಚ್ಚಾ ಆಹಾರಗಳಲ್ಲಿರುವ ಕಬ್ಬಿಣದ ಸತ್ವವು ಬಹಳ ಚೆನ್ನಾಗಿ ದೇಹಗತವಾಗುತ್ತದೆ. ವಿಟಮಿನ್‌ ಸಿ ಹೇರಳವಾಗಿರುವ ಟೊಮ್ಯಾಟೋ ಅಥವಾ ಸಿಟ್ರಸ್‌ಯುಕ್ತ ಅಹಾರಗಳು ಕಬ್ಬಿಣದ ಅಂಶವು ದೇಹಗತವಾಗಲು ಬಹಳ ಸಹಕರಿಸುತ್ತವೆ. ಬೀನ್ಸ್‌ ಜೊತೆ ಟೊಮ್ಯಾಟೋ ಅಥವಾ ಟೋಪು ಜೊತೆ ಕೋಸು ಇತ್ಯಾದಿಯಾಗಿ ಆಹಾರಗಳನ್ನು ಮಿಶ್ರಣ ಮಾಡಿ ಸೇವಿಸುವುದರಿಂದ, ದೇಹವು ಕಬ್ಬಿಣದ ಅಂಶವನ್ನು ಬಹಳ ಚೆನ್ನಾಗಿ ಹೀರಿಕೊಳ್ಳುತ್ತದೆ. ತರಾಕಾರಿಗಳಲ್ಲಿ ಸಾಮಾನ್ಯವಾಗಿ ಹೂ ಕೋಸು, ಕ್ಯಾಬೇಜ್‌, ಕ್ಯಾಪ್ಸಿಕಮ್‌, ಬಟಾಟೆ, ಟೊಮ್ಯಾಟೋ, ಹಣ್ಣುಗಳಲ್ಲಿ ದ್ರಾಕ್ಷಿ , ಸ್ಟ್ರಾಬೆರ್ರಿ, ಕಿತ್ತಲೆ... ಇತ್ಯಾದಿಗಳು ಕಬ್ಬಿಣದ ಅಂಶವು ದೇಹಗತವಾಗಲು ನೆರವಾಗುತ್ತವೆ. ಕಬ್ಬಿಣದ ಸತ್ವವು ದೇಹಗತವಾಗು ವುದನ್ನು ನಿರೋಧಿಸುವ ಆಹಾರಗಳು ಚಹಾ, ಕಾಫಿ, ಚಾರ್ಡ್‌ (ಒಂದು ಬಗೆಯ ಗೆಡ್ಡೆ )... ಇತ್ಯಾದಿಗಳು ಕಬ್ಬಿಣದ ಸತ್ವವು ದೇಹಗತವಾಗುವುದನ್ನು ತಡೆಯುತ್ತವೆ. ಹಾಗಾಗಿ, ಈ ಆಹಾರಗಳನ್ನು ಕಬ್ಬಿಣದ ಸತ್ವವು ಹೇರಳವಾಗಿರುವ ಆಹಾರದ ಜೊತೆಗೆ ಸೇವಿಸಬಾರದು. ಉತ್ತಮ ಗುಣಮಟ್ಟದ ಕಬ್ಬಿಣದ ಸತ್ವವಿರುವ ಅಹಾರಗಳು ಹೊಟ್ಟು , ಓಟ್‌ ಹಾಗೂ ಅಕ್ಕಿ, ಗೋಧಿ ತರಿಗಳು. ಸಮುದ್ರ ತರಕಾರಿಗಳಲ್ಲಿ ಕಬ್ಬಿಣದ ಸತ್ವವು ಹೇರಳವಾಗಿರುತ್ತದೆ. ಅಂದರೆ, ಅರ್ಧ ಕಪ್‌ ಈ ಅಹಾರದಲ್ಲಿ 42 ಮಿ.ಗ್ರಾಂ ಕಬ್ಬಿಣದ ಸತ್ವವಿರುತ್ತದೆ. ಕಡಲೆ, ಸೋಯಾಬಿನ್‌ ಹಾಗೂ ಟೋಪು ಇತ್ಯಾದಿಗಳಲ್ಲಿ ಕಬ್ಬಿಣದ ಸತ್ವವು ಅಧಿಕ ಪ್ರಮಾಣದಲ್ಲಿ ಇರುತ್ತದೆ. ಗರ್ಭಧಾರಣಾ ಅವಧಿಗಾಗಿ ಕಬ್ಬಿಣಯುಕ್ತ ಆಹಾರಗಳು ಭ್ರೂಣದಲ್ಲಿ ಬೆಳೆಯುತ್ತಿರುವ ಮಗುವಿನ ಉತ್ತಮ ಬೆಳವಣಿಗೆಗಾಗಿ ಒಬ್ಬ ಗರ್ಭಿಣಿ ಮಹಿಳೆಗೆ ಅಧಿಕ ಕಬ್ಬಿಣದ ಸತ್ವದ ಅಗತ್ಯವಿದೆ. ಅಕೆ ತನ್ನ ನಿತ್ಯದ ಆಹಾರದಲ್ಲಿ ಅಧಿಕ ಕಬ್ಬಿಣದ ಅಂಶವಿರುವ ಆಹಾರವನ್ನು ಸೇವಿಸಬೇಕು. ಗರ್ಭಧಾರಣೆಯ ಅವಧಿಯಲ್ಲಿ ಆಕೆಗೆ ಅನೀಮಿಯಾ ಅಥವಾ ಕಬ್ಬಿಣದ ಸತ್ವದ ಕೊರತೆಯು ಬಾಧಿಸುವುದನ್ನು ತಡೆಯಲಿಕ್ಕಾಗಿ, ಆಕೆಯ ವೈದ್ಯರು ಗರ್ಭಧಾರಣೆಯಾದ 20ನೆಯ ವಾರದ ನಂತರ , ಆಕೆಗೆ 30 ರಿಂದ 50 ಮಿ.ಗ್ರಾಂ ನಷ್ಟು ಕಬ್ಬಿಣದ ಸತ್ವದ ಪೂರಣವನ್ನು ಸೇವಿಸಲು ಸೂಚಿಸಬಹುದು. ವಿಟಮಿನ್‌ ಸಿ ಇರುವ ಆಹಾರಗಳಾದ ಕಿತ್ತಲೆ ಅಥವಾ ಟೊಮ್ಯಾಟೋ ರಸದ ಜೊತೆಗೆಯೇ ಈ ಪೂರಣಗಳನ್ನು ತೆಗೆದುಕೊಳ್ಳಬೇಕು. ಯಾಕೆಂದರೆ, ಇವು ಅಧಿಕ ಪ್ರಮಾಣದಲ್ಲಿ ಕಬ್ಬಿಣದ ಸತ್ವವು ದೇಹಗತವಾಗಲು ನೆರವಾಗುತ್ತವೆ. ನೀವು ಗರ್ಭಿಣಿಯಾಗಿದ್ದಲ್ಲಿ , ಅಧಿಕ ಪ್ರಮಾಣದಲ್ಲಿ ಈ ಕೆಳಗಿನ ಆಹಾರಗಳನ್ನು ಸೇವಿಸಿ, ನಿಮ್ಮ ದೇಹಕ್ಕೆ ಅಗತ್ಯವಿರುವ ಕಬ್ಬಿಣದ ಸತ್ವವನ್ನು ಪೂರೈಸಿಕೊಳ್ಳಬಹುದು. ಬೆಂದ ಕಾಳುಗಳು, ಓಟ್‌, ಸೋಯಾಬಿನ್‌, ಬಾರ್ಲಿ, ಕುಂಬಳಕಾಯಿ ಬೀಜ, ಒಣದ್ರಾಕ್ಷಿ, ಬಾದಾಮಿ, ಖರ್ಜೂರ, ಪೀಚ್‌ ಇತ್ಯಾದಿ ಒಣಹಣ್ಣುಗಳು. ತರಕಾರಿಗಳಾದ ಸ್ಪೈನಾಚ್‌, ಸಮುದ್ರಕಳೆ, ಕಾಕಂಬಿ... ಇತ್ಯಾದಿಗಳು, ಪ್ರಾಣಿ ಜನ್ಯ ಹೇಯಿಮ್‌ ಕಬ್ಬಿಣದ ಸತ್ವವಿರುವ ಬೀಫ್, ಬಾತುಕೋಳಿಯ ಮಾಂಸ, ಸಾಡೈìನ್‌, ಬೇಯಿಸಿದ ಚಿಪ್ಪು ಮೀನು, ಆಯಿಸ್ಟರ್‌, ಕ್ಲಾಮ್ಸ್‌ , ಸಿಗಡಿ...ಇತ್ಯಾದಿಗಳು. - ಡಾ| ಅರುಣಾ ಮಯ್ಯ ಡಯಟೀಷಿಯನ್‌

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ