Skip to main content

*ಗ್ರಹಗಳು ಜಾತಕನ ಕುಂಡಲಿಯಲ್ಲಿ ಬಲಹೀನರಾಗಿದ್ದರೆ ಉಂಟಾಗುವ ತೊಂದರೆಗಳು ಇವುಗಳ ಪರಿಹಾರಗಳು* ಶನಿ:-

ಶನಿ:- ಕಳವಳ,ಆಂದೋಲನೆ,ಒತ್ತಡಗಳನ್ನು ನಿಬಾಯಿಸುವಲ್ಲಿ ಅನರ್ಹತೆ,ಸಬಲರಿಗೆ ಸುಲಬವಾಗಿ ಒಳಗಾಗುವರು,ಸರ್ಕಾರ ಅಥವ ಇತರೆ ಸಂಸ್ಥೆಗಳಿಂದ ಆರ್ಥಿಕ ತೊಂದರೆಗಳಿಗೆ ಸಿಲುಕುವುದು,ಆಲಸಿಕೆ,ನಿದಾನ,ನಿರಾಸೆ,ನಿರುತ್ಸಾಹ,ನರ ಮತ್ತು ಮೂಳೆಗಳ ದುರ್ಬಲತೆ,ಸಾಂಕ್ರಾಮುಕ ರೋಗಗಳಿಗೆ ತುತ್ತಾಗುವಿಕೆ,ಜ್ವರ,ಕುಷ್ಟ,ಕಾಮಾಲೆ,ಕಿವುಡುತನ,ದಡಾರ,ಮೂರ್ಛೆ,ಕ್ಯಾನ್ಸರ್(ಅರ್ಬುದ)ಪೆರಾಲಿಸೀಸ್.ಇತ್ಯಾದಿಗಳಿಂದ ಬಾದಿತರು,ವಿದ್ಯಾಭಂಗ,ಕುಟುಂಬದಿಂದ ದೂರ ಹೋಗುವಿಕೆ,ನರಗಳದೌರ್ಬಲ್ಯತೆ,ಕೀಲುಗಳನೋವು,ಹೊಟ್ಟೆಯ ತೊಂದರೆಗಳು,ದೀರ್ಘಕಾಲಿಕ ಕಾಯಿಲೆಗಳಾದ ಪೆರಾಲಿಸಿಸ್,ಮೂತ್ರಕೋಶದ ವೈಪಲ್ಯತೆ,ಇತ್ಯಾದಿಗಳಿಂದ ಬಾಧಿತರು,ಅಗ್ನಿ ಮತ್ತು ಇತರ ಅಪಘಾತಗಳಿಂದ ಮನೆಗೆ ಅಪಾಯ,ರಾತ್ರಿ ಕುರುಡು,ಕಾಲುಗಳಲ್ಲಿ ನೋವು,ಕೂದಲು ಉದರುವಿಕೆ,ಸರ್ಕಾರದಿಂದ,ಅಧಿಕಾರಿಗಳಿಂದ ಅಥವ ನ್ಯಾಯಾಲಯಗಳಿಂದ ಅನಿರೀಕ್ಷಿತ ತೊಂದರೆಗಳು,ಮದ್ಯ ವ್ಯಸನಿ ಮತ್ತು ಪತ್ನಿಗೆ ತೀರಾ ಅನಾರೋಗ್ಯ,ಹಳೆಯ ಮನೆಯನ್ನು ಅಥವ ಯಂತ್ರಗಳನ್ನು ಕೊಳ್ಳುವಿಕೆ.ಪಶುಗಳ ನಷ್ಟ,ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ತೊಡಕುಗಳು ತೀವ್ರಪ್ರತೀಕಾರದ ಮನೋಭಾವ,ಶನಿಯು ೫ ಮತ್ತು ೮ನೇ ಸ್ಥಾನಗಳಲ್ಲಿ ಕಲುಶಿತನಾಗಿದ್ದರೆ ಮಕ್ಕಳು ಹೇಳಿದ ಮಾತು ಕೇಳದೆ ತಮ್ಮ ದಾರಿಯಲ್ಲಿ ಸಾಗುತ್ತಾರೆ,ಶನಿಯು ೨ ಅಥವ ೭ರಲ್ಲಿ ಕಲುಶಿತನಾಗಿದ್ದರೆ ಪತ್ನಿ/ಪತಿಯರಲ್ಲಿ ಸಾಮರಸ್ಯದ ಕೊರತೆ ಉಂಟಾಗುತ್ತದೆ.ಶನಿಯು ೨,೫,೭,೮ರಲ್ಲಿ ಬಲಹೀನನಾಗುತ್ತಾನೆ. ಪರಿಹಾರ:- *ಹನುಮಂತನನ್ನು ಆರಾಧಿಸಿರಿ. *ಆಹಾರ ಸೇವನೆ ಮುಂಚೆ ಸ್ವಲ್ಪ ಆಹಾರವನ್ನು ನಾಯಿ ಅಥವ ಕಾಗೆಗಳಿಗೆ ನೀಡಿ *ಉದ್ದು,ಎಳ್ಳಿನ ಎಣ್ಣೆ,ಚರ್ಮ,ಬಾದಾಮಿ ಇವುಗಳನ್ನು ನಿರ್ಗತಿಕರಿಗೆ ನೀಡಿ. *ಎಮ್ಮೆಗೆ ಮೇವನ್ನು ನೀಡಿ,ಸೂರ್ಯಾಸ್ತದ ನಂತರ ಕಪ್ಪು ಇರುವೆಗಳಿಗೆ ದನ್ಯನೀಡಿ *ನಡುವಿನ ಬೆರಳಿಗೆ ಕಬ್ಬಿಣದ ಸ್ಟೀಲ್ ಕುದುರೆ ಲಾಳದ ಉಂಗುರವನ್ನು ಧರಿಸಿರಿ. *ಹರಿಯುವ ನೀರಲ್ಲಿ ೬ ಬಾದಾಮಿ ೬ ಸಿಪ್ಪೆ ಸಹಿತ ತೆಂಗಿನಕಾಯಿ೬ಶನಿವಾರದ ದಿನಗಳ ಕಾಲ ಹಾಕಿರಿ. *ಮನೆಯ ಕತ್ತಲೆಯ ಕೋಣೆಯಲ್ಲಿ ದಕ್ಷಿಣ ದಿಕ್ಕಿನಲ್ಲಿ ೧೨ ಬಾದಾಮಿಗಳನ್ನು ಅಥವ ಜೇನುತುಪ್ಪ ಅಥವ ತಾಮ್ರವನ್ನು ಕಪ್ಪು ಬಟ್ಟೆಯಲ್ಲಿ ಕಟ್ಟಿ ನೆಲದಲ್ಲಿ ಹುದುಗಿಸಿರಿ. *ಮಾಂಸ,ಮೀನು ಅಥವ ಮದ್ಯವನ್ನು ದೂರವಿಡಿ. *ಶನಿವಾರಗಳಂದು ಉಪವಾಸವನ್ನು ಮಾಡಿ ಆಲದಮರದ ಬುಡಕ್ಕೆ ಹಾಲನ್ನು ಹಾಕಿ ಆ ಹಸಿಯ ಮಣ್ಣನ್ನು ತಿಲಕದಂತೆ ಹಣೆಗೆ ಹಚ್ಚಿಕೊಳ್ಳಿ. *ಮಕ್ಕಳಿಗೆ ತೊಂದರೆಯ ನಿವಾರಣೆಗೆ ಕಪ್ಪು ನಾಯಿಯನ್ನು ಸಾಕಿರಿ. *ಮಣ್ಣಿನ ಕುಡಿಕೆಯಲ್ಲಿ ಎಳ್ಳಿನ ಎಣ್ಣೆಯನ್ನು ಹಾಕಿ ನದಿಯ ಅಥವ ಕೊಳದ ದಡದ ಬಳಿ ನೀರಲ್ಲಿ ಮುಳುಗುವಂತೆ ಹುದುಗಿಸಿರಿ. *ಮುಖ್ಯವಾದ ಕೆಲಸಗಳನ್ನು ರಾತ್ರಿಗಳಲ್ಲಿ ಅಥವ ಕೃಷ್ಣಪಕ್ಷದಲ್ಲಿ ಮಾಡಿರಿ. *ಬೆಳ್ಳಿಯ ಚೌಕಾಕಾರದ ತುಂಡನ್ನು ನಿಮ್ಮ ಬಳಿಯಲ್ಲಿ ಇಟ್ಟುಕೊಂಡಿರಿ ಮತ್ತು ೮೦೦ಗ್ರಾಂ ಉದ್ದು ಶನಿವಾರದಿಂದ ಆರಂಭಿಸಿ ೮ ದಿನಗಳ ಕಾಲ ಹರಿಯುವ ನೀರಿಗೆ ಹಾಕಿರಿ. *ಸ್ವಲ್ಪ ಎಣ್ಣೆಯನ್ನು ೪೩ ದಿನಗಲ ಕಾಲ ನೆಲದ ಮೇಲೆ ಹಾಕುತ್ತಿರಿ.ಮದ್ಯ ಮತ್ತು ಸಾರವನ್ನು ಸಹ ಹಾಕಬುದು. *೨ನೇ ಸ್ಥಾನದಲ್ಲಿ ಅಶುಭಗ್ರಹಗಳಿದ್ದರೆ ೧೦ ಬಾದಾಮಿಗಳನ್ನು ದೇವಾಲಯಕ್ಕೆ ಕೊಟ್ಟು ಅದರಲ್ಲಿ ೫ಅನ್ನು ಮನೆಗೆ ಹಿಂದಕ್ಕೆ ತಂದು ಮನೆಯಲ್ಲಿಟ್ಟಿರಿ ಆದರೆ ಅವುಗಳನ್ನು ನೀವು ತಿನ್ನಬಾರದು. *ಒಳ್ಳೆಯ ದಾಂಪತ್ಯ ಜೀವನಕ್ಕೆ ಕಪ್ಪು ಕೊಳಲಿನಲ್ಲಿ ಜೇನನ್ನು ಹಾಕಿ ನಿರ್ಜನ ಪ್ರದೇಶದಲ್ಲಿ ನೆಲದಲ್ಲಿ ಹುದುಗಿಸಿಬಿಡಿ. *ಸಂಪತ್ತಿಗಾಗಿ,ಗಂಗಾಜಲವನ್ನು ಹಿತ್ತಾಳೆಯ ಪಾತ್ರೆಯಲ್ಲಿ ಇಡಿರಿ. *ಮಾನಸಿಕ ಶಾಂತಿಗಾಗಿ ತಾಯಿಯ ಆರೋಗ್ಯಕಾಗಿ ಹಳೆಯ ಅಕ್ಕಿ ಅಥವ ಬೆಳ್ಳಿಯನ್ನು ಹರಿಯುವ ನೀರಲ್ಲಿ ಹಾಕಿರಿ. *೨ನೇ ಸ್ಥಾನದಲ್ಲಿ ಶನಿಯು ಕಲುಶಿತನಾಗಿದ್ದರೆ ಬರಿಗಾಲಲ್ಲಿ ದೇವಾಲಯಕ್ಕೆ ಹೋಗಿ ಸರ್ಪಗಳಿಗೆ ಹಾಲನ್ನು ನೀಡಿರಿ. *ಏಳರಾಟದ ಶನಿಕಾಟಕ್ಕೆ ನಿವಾರಣೆಗಾಗಿ ಶನಿವಾರದ ಸಂಜೆ ಮಣ್ಣಿನ ಕುಂಡದಲ್ಲಿ ತಾಮ್ರದಲ್ಲಿ ಕೆತ್ತಿದ ಒಂದು ಜೊತೆ ಸರ್ಪ ಮತ್ತು ಕಪ್ಪು ಉದ್ದನ್ನು ಅಶ್ವತ್ತ ಮರದ ಬೇರಿನ ಬುಡದಲ್ಲಿ ಹುದುಗಿಸಿರಿ.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ