Skip to main content

ಜನ್ಮ ಲಗ್ನಕ್ಕೆ ಸಂಬಂಸಿದ ವ್ಯಾಪಾರದ ಫಲಗಳು

ಜನ್ಮ ಲಗ್ನಕ್ಕೆ ಅನುಗುಣವಾಗಿ ವ್ಯಾಪಾರ ಪ್ರಾರಂಭಿಸಿದರೆ ಶುಭ ಫಲಗಳು ದೊರಕುತ್ತವೆ. ಈ ಸಂಬಂಧವಾಗಿ ಸಂಬಂಧಪಟ್ಟ ಲಗ್ನಗಳಿಗೆ ಯಾವ ವ್ಯಾಪಾರ ಮಾಡಿದರೆ ಶುಭ ದೊರಕುತ್ತದೆ ಎಂಬುದರ ಬಗ್ಗೆ ಒಂದು ವಿಶ್ಲೇಷಣೆ. ಮೇಷ: ವೈದ್ಯಕೀಯ, ವಕೀಲ ವೃತ್ತಿ, ಪೊಲೀಸ್ ಇಲಾಖೆ, ಕಲ್ಲಿದ್ದಲು, ಔಷಧ ವ್ಯಾಪಾರ, ಖನಿಜ ಪದಾರ್ಥ, ಉಪ್ಪು, ಬಣ್ಣದ ವ್ಯಾಪಾರ, ಎಲೆಕ್ಟ್ರಾನಿಕ್ಸ್ ವ್ಯಾಪಾರ, ತಂಬಾಕು, ಸಿಮೆಂಟ್, ಎಣ್ಣೆ ವ್ಯಾಪಾರ, ವನಸ್ಪತಿ, ವಿದ್ಯುತ್ ಉಪಕರಣಗಳ ವ್ಯಾಪಾರ. ವೃಷಭ: ಕಲಾಕ್ಷೇತ್ರ, ವ್ಯವಸಾಯ ಹಾಗೂ ಕೃಷಿಗೆ ಸಂಬಂಧಿಸಿದ ವ್ಯವಹಾರ, ಅಲಂಕಾರದ ವಸ್ತುಗಳು, ಸ್ಟೇಷನರಿ, ಬಣ್ಣದ ವ್ಯಾಪಾರ, ಎಂಜಿನಿಯರಿಂಗ್ ಉದ್ಯೋಗ. ಮಿಥುನ: ಗುಪ್ತ ವಿದ್ಯೆ, ಜ್ಯೋತಿಷ್ಯ ಶಾಸ್ತ್ರ, ಹಣಕಾಸು ವಿಭಾಗ, ಕವನ, ಲೇಖನಗಳನ್ನು ಬರೆಯುವ ಕಲೆ, ಪಾಕಶಾಸ್ತ್ರ ಪ್ರವೀಣ ವಿದ್ಯೆ. ಕಟಕ: ಸಿನಿಮಾ ರಂಗ, ಫೋಟೋಗ್ರಫಿ, ಕಲಾಕೃತಿ, ಕಲೆ, ನೀರಿಗೆ ಸಂಬಂಧಿಸಿದ ವ್ಯಾಪಾರಗಳು, ಬಣ್ಣದ ಕೆಲಸ, ಅಲಂಕಾರಿಕ ವಸ್ತುಗಳ ವ್ಯಾಪಾರ, ಮುತ್ತು, ರತ್ನಗಳ ವ್ಯಾಪಾರ. ಸಿಂಹ: ತಾಂತ್ರಿಕ ಹುದ್ದೆ, ಬಟ್ಟೆ, ಖಾದಿ, ನೂಲು, ದಾರದ ವ್ಯಾಪಾರ, ಹಣ್ಣಿನ ವ್ಯಾಪಾರ, ಕೃಷಿ ಕ್ಷೇತ್ರ ಹಾಗೂ ಕೃಷಿಗೆ ಸಂಬಂಧಿಸಿದ ಉಪಕರಣಗಳ ವ್ಯಾಪಾರ, ಲೇವಾದೇವಿ ವ್ಯಾಪಾರ. ಕನ್ಯಾ: ಯಂತ್ರ, ಮಂತ್ರ, ಜ್ಯೋತಿಷ್ಯಶಾಸ್ತ್ರ, ಬೃಹತ್ ಕಂಪನಿಗಳು ವ್ಯವಸ್ಥಾಪಕ, ಕಲೆ, ಲೇಖನ, ಪಾಕಶಾಸ್ತ್ರ, ಬ್ಯಾಂಕಿಂಗ್, ಫೈನಾನ್ಸ್, ಕ್ರಯ ವಿಕ್ರಯ. ತುಲಾ: ಅಧ್ಯಾಪಕರು, ಶಿಕ್ಷಣ ಸಂಸ್ಥೆ ನಡೆಸುವುದು, ಚಿತ್ರಕಲೆ, ಎಣ್ಣೆ ವ್ಯಾಪಾರ, ಅಲಂಕಾರದ ವಸ್ತುಗಳ ವ್ಯಾಪಾರ ಕಂಪನಿಗಳನ್ನು ನಡೆಸುವುದು, ದಲಾಲ, ಸೆಟ್ಟಾ ವ್ಯಾಪಾರ. ವೃಶ್ಚಿಕ: ವೈದ್ಯಕೀಯ ಕ್ಷೇತ್ರ, ರಾಸಾಯನಿಕ ಶಾಸ್ತ್ರ, ಸಿಮೆಂಟ್, ವಿದ್ಯುತ್ ಇಲಾಖೆ, ತಂಬಾಕು, ಖನಿಜ ವಸ್ತು, ಉಪ್ಪಿನ ವ್ಯಾಪಾರ, ಬ್ಯಾಂಕ್ ನೌಕರಿ, ಫೈನಾನ್ಸ್, ಬಣ್ಣದ ವ್ಯಾಪಾರ. ಧನಸ್ಸು: ಅಧ್ಯಾಪಕರ ವೃತ್ತಿ, ಸಂಪಾದಕರು, ಕಮಿಷನ್ ವ್ಯಾಪಾರ, ದಲಾಲ ವ್ಯಾಪಾರ, ಶಿಕ್ಷಣ ವಿಭಾಗ. ಮಕರ: ವಿದ್ಯುತ್‌ಗೆ ಸಂಬಂಧಿಸಿದ ವ್ಯಾಪಾರ, ಎಲೆಕ್ಟ್ರಾನಿಕ್ಸ್, ಸಣ್ಣ ವ್ಯಾಪಾರ, ಮೆಷಿನರಿ ವಿಭಾಗ. ಕುಂಭ: ಸೆಟ್ಟಾ ವ್ಯಾಪಾರ, ಕಬ್ಬಿಣ, ಶಿಕ್ಷಣ, ರಾಜಕೀಯ, ಶೋಧನ ಕಾರ್ಯ, ಪತ್ತೆ ದಾರಿ ವಿಭಾಗ, ಅಧ್ಯಾಪಕರ ವೃತ್ತಿ, ಸಿಮೆಂಟ್, ಎಣ್ಣೆ, ಸಣ್ಣ ವ್ಯಾಪಾರ. ಮೀನ: ಹೋಟೆಲ್ ನಡೆಸುವುದು, ಅಧ್ಯಾಪಕರ ವೃತ್ತಿ, ನೀರಿಗೆ ಸಂಬಂಧಿಸಿದ ವ್ಯಾಪಾರ, ಸಂಪಾದನ ಕಲೆ, ಲೇಖನ ಬರೆಯುವುದು, ದಲಾಲ, ರಿಯಲ್ ಎಸ್ಟೇಟ್ ವ್ಯಾಪಾರ, ವಿಲಾಸಿ ವಸ್ತುಗಳ ವ್ಯಾಪಾರ. -sangraha.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ