Skip to main content

*ಗ್ರಹಗಳು ಜಾತಕನ ಕುಂಡಲಿಯಲ್ಲಿ ಬಲಹೀನರಾಗಿದ್ದರೆ ಉಂಟಾಗುವ ತೊಂದರೆಗಳು ಇವುಗಳ ಪರಿಹಾರಗಳು* ರಾಹು:-

ರಾಹು:- ಅತಿಯಾದ ಸೂಕ್ಷ್ಮತೆ,ತೊಳಲಾಟ,ಆತಂಕ,ಭಯ,ಭ್ರಮೆಗಳು,ಮಾದಕವಸ್ತುಗಳಸೇವನೆ,ಮೂರ್ಖತನ,ನೀರಲ್ಲಿ ಮುಳುಗುವ ಅಥವ ಎತ್ತರದಿಂದ ಬೀಳುವ ಸಂಬವ ವಿವೇಚನಾರಹಿತ ನಿರ್ದಾರಗಳು,ಎಲ್ಲರೊಡನೆಯೂ ವಿರಸ,ಸ್ನೇಹಿತರು ತೊರೆಯುವರು,ವಿದವೆಯರೊಡನೆ ಕೀಳು ಮಟ್ಟದ ಸ್ತ್ರೀಯರೊಡನೆ ಅನೈತಿಕ ಸಂಬಂದಗಳು,ವಿದೇಶಿಯರು ಮತ್ತು ಕೀಳು ಜನರ ಸಂಪರ್ಕಗಳು,ಇದರಿಂದ ತೊಂದರೆಗಳು,ಇರುತ್ತವೆ ಕೀಳು ಕೆಲಸಗಳಲ್ಲಿ ನಿರತರಾಗಿರುತ್ತಾರೆ,ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ್ವರು,ರೋಗ ನಿರೋಧಕ ಶಕ್ತಿ ಇಲ್ಲದಿರುವುದು.ಮಾನಸಿಕ ಅಸಮತೋಲನೆ,ವಿಷ,ಸರ್ಪಗಳ ಭೀತಿ,ಸಕಾಲ ಕಲಹಗಳು,ಅಪಘಾತ,ವಾದ-ವಿವಾದಗಳಲ್ಲಿ ನಿರತರು,ಕಾಮಾಲೆ,ಕಾಲರ,ಪ್ಲೇಗ್ ಇತ್ಯಾದಿ.ಉಗುರುಗಳು ದುರ್ಬಲವಾಗುತ್ತವೆ,ಗುರುತಿಸಲಾಗದ ವ್ಯಾಧಿಗಳು,ಕಳ್ಳತನದಿಂದ ಸಂಪತ್ತಿನ ನಷ್ಟ,೮ರಲ್ಲಿ ಅಶುಭ ರಾಹುವಿನಿಂದ ಗಮನೀಯ ಏಳು ಬೀಳುಗಳು ಉಂಟಾಗುತ್ತವೆ. *ಗಮನಕ್ಕೆ*:_ಪ್ರತಿನಿಧಿ ಗ್ರಹವು ಬಲಹೀನವಾಗಿದ್ದರೆ ೫,೮.೧೨,ನೆಯ ಸ್ಥಾನಗಳಲ್ಲಿ ಕ್ರೂರವಾಗಿದ್ದರೆ ರಾಹುವು ಬಲಹೀನನೆಂದು ಪರಿಗಣಿಸಲಾಗಿದೆ. ಪರಿಹಾರೋಪಾಯಗಳು:- *ದುರ್ಗೆ ಮತ್ತು ನಾಗಪೂಜೆಯನ್ನು ನೀಲಿ ಪುಷ್ಪಗಳಿಂದ ಮಾಡುವುದು. *ಒಟ್ಟು ಕುಟುಂಬದೊಂದಿಗೆ ಜೀವಿಸುವುದು. *ಆನೆಯು ತುಳಿದ ಮಣ್ಣನ್ನು ಒಂದು ಬಾವಿಯಲ್ಲಿ ಹಾಕುವುದು. *ದೇವಾಲಯ ಅಥವ ದಾರ್ಮಿಕ ಸ್ಥಳದಲ್ಲಿ ಪಾಪ ಕೆಲಸಗಲನ್ನು ಮಾಡದಿರುವುದು. *ಬೆಳ್ಳಿಯಲ್ಲಿ ಮಾಡಿದ ಒಂದು ಆನೆಯನ್ನು ಅಥವ ಒಂದು ಸಣ್ಣ ಕೆಂಪು ಬಣ್ಣದ ಲೋಹದ ಗುಂಡನ್ನು ಮನೆಯಲ್ಲಿ ಇಡಿರಿ. *ಅಡುಗೆ ಮನೆಯಲ್ಲಿ ಕುಳಿತು ಊಟಮಾಡಿ. *ನಿಮ್ಮ ಸಂಪಾದನೆಯ ಸ್ವಲ್ಪಬಾಗವನ್ನು ನಾದಿನಿ,ಮಗಳು,ಅಥವ ಸೋದರಿಗಾಗಿ ಖರ್ಚುಮಾಡಿ,ಹರಿಯುವ ನೀರಲ್ಲಿ ಹಾಲಿನಲ್ಲಿ ತೊಳೆದ ಬಾರ್ಲಿಅಥವ ನಿಮ್ಮ ತೂಕದಷ್ಟು ಇದ್ದಿಲು ಅಥವ ೮ ನೀಲಿ ಹೂವುಗಳನ್ನು ಹಾಕುವುದು. *ಮಾನಸಿಕ ಶಾಂತಿಗೆ ಬೆಳ್ಳಿಯ ಪಾತ್ರೆಯಲ್ಲಿ ಗಂಗಾಜಲವನ್ನು ಹಾಕಿ ಅದರಲ್ಲಿ ಒಂದು ಚೌಕಾಕಾರದ ಬೆಳ್ಳಿಯ ತಗಡನ್ನು ಹಾಕಿ ದೇವರ ಬಳೀ ಇಡಿ ಅಥವ ಬೇಳ್ಳಿಯ ಸರವನ್ನು ಕೊರಳಿಗೆ ಹಾಕಿಕೊಳ್ಳಿ. *ಸಾಸಿವೆ,ಹೊಗೆಸೊಪ್ಪು,ಕಪ್ಪುಬಂಬಳಿ,ಸೀಸ ಅಥವ ಕಸ್ತೂರಿಯನ್ನು ಅಂತ್ಯಜರಿಗೆ ದಾನ ಮಾಡಿ,ಮುಸ್ಲಿಂಬಾಂದವರಿಗೂ ಮಸೀದಿಯಲ್ಲಿ ಕೊಡಬಹುದು. *ಸ್ಥಿರವಾಗಿ ಜ್ವರವಿದ್ದರೆ ಅಥವ ಕ್ಷಯವಿದ್ದರೆ ೮೦೦ಗ್ರಾಂ ಬಾರ್ಲಿಯನ್ನು ಗೋಮೂತ್ರದಲ್ಲಿ ತೊಳೆದು ಒಂದು ಕೆಂಪು ಬಟ್ಟೆಯಲ್ಲಿ ಕಟ್ಟಿ ಹರಿಯುವ ನೀರಲ್ಲಿ ಹಾಕಿರಿ.(ರವಿಯು ಜನನ ಕುಂಡಲಿಯಲ್ಲಿ ೪ನೇಸ್ಥಾನದಲ್ಲಿದ್ದರೆ ಬಾವಿಯಲ್ಲಿ ಹಾಕಿರಿ.) *ರಾಹು ನಿಮ್ಮ ಜಾತಕದಲ್ಲಿ ಗೋಚಾರದಲ್ಲಿ ೧೨ನೇ ಸ್ಥಾನದಲ್ಲಿ ಸಂಚರಿಸುವಾಗ ಯಾವ ಹೊಸ ಕೆಲಸವನ್ನು ಮಾಡಬೇಡಿ. *ಕಪ್ಪು ವಸ್ತ್ರ ಅಥವ ಕನ್ನಡಕವನ್ನು ಧರಿಸಿರಿ. *ತಾಮ್ರದಲ್ಲಿ ಮಾಡಿದ ಒಂದು ಜೊತೆ ಸರ್ಪಗಳನ್ನು ಮನೆಯಿಂದ ನೈರುತ್ಯದಿಕ್ಕಿನಲ್ಲಿ ನಿರ್ಜನ ಪ್ರದೇಶದಲ್ಲಿ ಹುದುಗಿಸಿರಿ. *ಸೂರ್ಯೋದಯ ಅಥವ ಅಸ್ತಗಳಲ್ಲಿ ಯಾವ ಮುಖ್ಯ ನಿರ್ದಾರಗಳನ್ನು ತಗೆದುಕೊಳ್ಳಬೇಡಿ. *ರಾಹುವಿನ ದುಷ್ಪರಿಣಾಮಗಳನ್ನು ನಿವಾರಿಸಲು ಮಗಳ ಮದುವೆಯಲ್ಲಿ ಕಬ್ಬಿಣದ ಅಥವ ಸ್ಟೀಲಿನ ಒಂದು ಜೊತೆ ಒಂದೇ ತರದ ಚೂರುಗಳನ್ನು ಕೊಟ್ಟು ಒಂದನ್ನು ಹರಿಯುವ ನೀರಿನಲ್ಲಿ ಹಾಕಿ ಮತ್ತೊಂದನ್ನು ಸದಾಕಾಲ ಅವಳ ಬಳಿಯಲ್ಲೇ ಇಟ್ಟುಕೊಳ್ಳುವಂತೆ ಹೇಳಿರಿ. *ಭಾನುವಾರ ಸಂಜೆ ಒಂದು ತೆಂಗಿನಕಾಯಿ ಮತ್ತು ತಾಮ್ರದ ತಗಡಿನಲ್ಲಿ ಕೆತ್ತಿದ ಜೋಡಿ ಸರ್ಪಗಳನ್ನು ನೀಲಿವಸ್ತ್ರದಲ್ಲಿ ಕಟ್ಟಿ ನದಿಯಲ್ಲಿ ಹಾಕಿ *ರೋಗ ನಿವಾರಣೆಗೆ ರೋಗಿಯ ತೂಕದಷ್ಟು ಬಾರ್ಲಿಯನ್ನು ರಾತ್ರಿ ತಲೆಯ ಬಳಿ ಇಟ್ಟುಕೊಂಡಿದ್ದು ಮಾರನೆಯ ದಿನ ಅಂತ್ಯಜರಿಗೆ ದಾನಮಾಡಿರಿ. *ಪತ್ನಿ ಮತ್ತು ಮಕ್ಕಳ ತೊಂದರೆಗೆ ಮನೆಯ ಹೊಸ್ತಿಲಿನಲ್ಲಿ ಬೆಳ್ಳಿಯ ತಗಡನ್ನು ಹುದುಗಿಸಿ,ಬಿಳಿ ಹಸುವನ್ನು ಸಾಕಿರಿ.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ