Skip to main content

ಉತ್ತಮ ಪುರುಷರ ಲಕ್ಷಣ

ವ್ಯಕ್ತಿಗಳು ಒಬ್ಬರಿಗಿಂತ ಒಬ್ಬರು ಭಿನ್ನವಾಗಿರುತ್ತಾರೆ. ಉತ್ತಮ ಪುರುಷ, ಮಧ್ಯಮ ಪುರುಷ ಹಾಗೂ ಅಧಮ ಪುರುಷರೆಂದು ವ್ಯಕ್ತಿಯನ್ನು ವಿಂಗಡಿಸಲಾಗುತ್ತದೆ. ಈ ವಿಂಗಡನೆ ಸ್ವಭಾವದಿಂದಲ್ಲ. ಕೇವಲ ಬಾಹ್ಯ ನೋಟದಿಂದ ವಿಂಗಡಿಸಲಾಗಿದೆ. ಇಲ್ಲಿ ಶರೀರದ ಹತ್ತು ವಿಭಾಗಗಳನ್ನು ಕೊಡಲಾಗಿದೆ. ಅವುಗಳ ಆಧಾರದ ಮೇಲೆ ಉತ್ತಮ ಪುರುಷನ ಲಕ್ಷಣಗಳನ್ನು ತಿಳಿಸಲಾಗಿದೆ. ಶರೀರದ ಹತ್ತು ವಿಭಾಗಗಳು 1. ಪಾದದ ಬಿಳಿಯ ಸಂದಿನಿಂದ ಹಿಡಿದು ಕಾಲಿನ ಐದು ಬೆರಳುಗಳ ಭಾಗ 2. ಮೊಣಕಾಲು ಮತ್ತು ಮೀನಖಂಡಗಳು 3. ತೊಡೆಗಳು ಮತ್ತು ಗುಪ್ತಾಂಗ 4. ನಾಭಿ ಮತ್ತು ಅದರ ಕೆಳಗಿನ ಕಟಿ ಪ್ರದೇಶ 5. ಹೊಟ್ಟೆ 6. ಹೃದಯ, ಸ್ತನ ಪ್ರದೇಶ 7. ಹೆಗಲು ಮತ್ತು ಕತ್ತಿನ ಮೂಳೆಗಳು 8. ಕತ್ತು ಮತ್ತು ತುಟಿ 9. ಕಣ್ಣು ಮತ್ತು ಹುಬ್ಬು 10. ತಲೆ ಮನುಷ್ಯನಲ್ಲಿ ಈ ಎಲ್ಲ ಲಕ್ಷಣಗಳು ಸುಲಕ್ಷಣವಾಗಿದ್ದರೆ ಮಹಾಪುರುಷನಾಗುತ್ತಾನೆ. ಕುಲಕ್ಷಣವಾಗಿದ್ದರೆ ರಾಕ್ಷಸ ಅಥವಾ ನರಾಧಮನಾಗುತ್ತಾನೆ. ಉತ್ತಮ ಪುರುಷರ ಸುಲಕ್ಷಣತೆ : * ಪಂಚ ದೀರ್ಘಂ ಚತುರ್ಹಸ್ವಂ ಪಂಚ ಸೂಕ್ಷ್ಮಂ ಷಡುನ್ನತಮ್ ಸಪ್ತ ರಕ್ತಂ ತ್ರಿಗಂಭೀರಂ ತ್ರಿವಿಸ್ತೀರ್ಣ ಪ್ರಶಸ್ಯತೇ * ಪಂಚದೀರ್ಘಂ : ಕಣ್ಣುಗಳು, ಗಲ್ಲ, ಭುಜಗಳು, ಮೂಗು, ಎರಡು ಸ್ತನಗಳ ಮಧ್ಯದ ಅಗಲ, ಈ ಐದು ಅಂಗಗಳು ಭಾಗ್ಯಶಾಲಿ ಪುರುಷರಿಗೆ ದೊಡ್ಡದಾಗಿರುತ್ತದೆ. ಚತುರ್ಹಸ್ವಂ : ಕತ್ತು, ಮೀನಖಂಡಗಳು, ಸೊಂಟ, ಲಿಂಗ ಇವು ನಾಲ್ಕು ಚಿಕ್ಕ ದಾಗಿರಬೇಕು ಮೀನಖಂಡಗಳು ತೊಡೆಗಿಂತ ಸಣ್ಣಗಿರಬೇಕು. ಪಂಚಸೂಕ್ಷ್ಮ : ಹಲ್ಲುಗಳು, ಬೆರಳುಗಳ ಪರ್ವದ ರೇಖೆಗಳು, ಕೇಶ, ಉಗುರು, ಚರ್ಮ ಈ ಐದು ತೆಳುವಾಗಿರಬೇಕು. ಷಡುನ್ನತಮ್ : ಮೂಗು, ಕಣ್ಣು, ಹಲ್ಲು, ಹಣೆ, ತಲೆ, ಹೃದಯ (ಎದೆ) ಈ ಆರು ಅಂಗಗಳು ಉನ್ನತವಾಗಿರಬೇಕು ಅಂದರೆ ಎದ್ದು ಕಾಣುವಂತೆ ಇರಬೇಕು. ಸಪ್ತರಕ್ತಂ : ಕೈ, ಕಣ್ಣಿನತುದಿ, ಅಂಗಾಲು, ನಾಲಿಗೆಯ ಕೆಳಭಾಗ, ತುಟಿ, ನಾಲಿಗೆ, ಉಗುರು ಈ ಏಳೂ ಕೆಂಬಣ್ಣವಿರಬೇಕು. ತ್ರಿಗಂಭೀರ : ಮೂರು ವಸ್ತುಗಳು ಆಳವಾಗಿರಬೇಕು. ಸ್ವರ, ಬುದ್ಧಿ ಮತ್ತು ನಾಭಿ ಈ ಮೂರು ಆಳವಾಗಿರಬೇಕು. ತ್ರಿವಿಸ್ತೀರ್ಣ : ಎದೆ, ಹಣೆ, ತಲೆ ಈ ಮೂರು ಅಂಗಗಳು ವಿಸ್ತೃತವಾಗಿರಬೇಕು. ಹೀಗಿದ್ದವರು ಮಹಾಪುರುಷರು ಎಂದು ಕರೆಸಿಕೊಳ್ಳುತ್ತಾರೆ.

Comments

Popular posts from this blog

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ