ಆರೋಗ್ಯವಂತರಾಗಿರಲು ವಿಟಮಿನ್ ಗಳು ಅವಶ್ಯಕ. ಈ ವಿಟಮಿನ್ ಗಳು ನಮಗೆ ಆಹಾರಗಳಿಂದ ದೊರೆಯುತ್ತದೆ. ಎಲ್ಲಾ ವಿಟಮಿನ್ ಗಳು ಒಂದೇ ಆಹಾರದಲ್ಲಿರುವುದಿಲ್ಲ. ಆದ್ದರಿಂದ ಬೇರೆ-ಬೇರೆ ವಿಟಮಿನ್ ಇರುವ ಆಹಾರಗಳನ್ನು ಡಯಟ್ ನಲ್ಲಿ ಅಳವಡಿಸಿದರೆ ದೇಹದ ಆರೋಗ್ಯ ಹೆಚ್ಚುವುದು. ಇವತ್ತು ನಾವು 'ವಿಟಮಿನ್ ಇ' ಇರುವ ಆಹಾರಗಳು ಮತ್ತು ಈ ವಿಟಮಿನ್ ನಮ್ಮ ದೇಹದ ಆರೋಗ್ಯಕ್ಕೆ ಎಷ್ಟು ಅವಶ್ಯಕ ಎಂದು ತಿಳಿಯೋಣ:
'ವಿಟಮಿನ್ ಇ' ಇರುವ ಆಹಾರಗಳು:ಬ್ರೊಕೋಲಿ, ಪಾಲಾಕ್, ಮಾವಿನ ಹಣ್ಣು, ಗೋಧಿ, ಬಾದಾಮಿ, ಬೆಣ್ಣೆ ಹಣ್ಣು, ಬಾಳೆಹಣ್ಣು, ಮೀನು, ಬೆಳ್ಳುಳ್ಳಿ, ಕರ್ಬೂಜ, ಕೆಂಪು ಮೆಣಸಿನ ಕಾಯಿ, ಜೋಳ, ಟೊಮೆಟೊ, ಸೇಬು,ಕಲ್ಲಂಗಡಿ, ಅಣಬೆ ಈ ಆಹಾಗಳಲ್ಲಿ ವಿಟಮಿನ್ ಇ ಮತ್ತು anti oxidant ಅಂಶ ಹೆಚ್ಚಾಗಿರುತ್ತದೆ.
ಆರೋಗ್ಯ ರಕ್ಷಣೆಯಲ್ಲಿ ವಿಟಮಿನ್ ಇ:
1. ತ್ವಚೆ ಸಂರಕ್ಷಣೆ: 'ವಿಟಮಿನ್ ಇ' ಇರುವ ಆಹಾರಗಳಲ್ಲಿ anti oxidant ಪ್ರಮಾಣ ಹೆಚ್ಚಾಗಿ ಇರುವುದರಿಂದ ತ್ವಚೆ ಸಂಬಂಧಿ ಕಾಯಿಲೆಗಳು ಬರದಂತೆ ತಡೆಯುತ್ತದೆ. ಅಲ್ಲದೆ ತ್ವಚೆ ಹೊಳಪನ್ನು ಹೆಚ್ಚಿಸುವುದು.
2. ಕೆಂಪು ರಕ್ತ ಕಣಗಳನ್ನು ಹೆಚ್ಚು ಮಾಡುತ್ತದೆ: ಇದು ದೇಹದಲ್ಲಿ ರಕ್ತ ಸಂಚಲನ ಸರಿಯಾಗಿ ಪ್ರಕ್ರಿಯೆ ಸರಿಯಾಗಿ ನಡೆಯಲು ಸಹಾಯ ಮಾಡುತ್ತದೆ. ವಿಟಮಿನ್ ಇ ಕೊರತೆ ಉಂಟಾದರೆ ಕೂಡಲೆ ಚಿಕಿತ್ಸೆಯನ್ನು ಪಡೆಯಬೇಕು. ಇಲ್ಲದಿದ್ದರೆ ಪ್ರಾಣಕ್ಕೆ ಅಪಾಯ ಉಂಟಾಗಬಹುದು.
3. ರಕ್ತ ಹೆಪ್ಪುಗಟ್ಟುವ ಸಮಸ್ಯೆಯನ್ನು ತಡೆಯುತ್ತದೆ: ವಿಟಮಿನ್ ಇ ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ ಮತ್ತು ತ್ವಚೆ ಸಮಸ್ಯೆಯನ್ನು ನಿವಾರಿಸುತ್ತದೆ, ಮುಖದಲ್ಲಿ ಬೇಗನೆ ನೆರಿಗೆ ಉಂಟಾಗುವುದಿಲ್ಲ. ಅಲ್ಲದೆ ಇದು ಕ್ಯಾನ್ಸರ್ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ.
4. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ರೆಟಿನಾದ ಸಾಮರ್ಥ್ಯ ಹೆಚ್ಚಿಸುತ್ತದೆ.
5. ಇತರ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ: ಮುಟ್ಟುವಿನಲ್ಲಿ ಅಧಿಕ ನೋವು ಕಾಣಿಸಿಕೊಳ್ಳುವುದು, ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು, ಕಣ್ಣಿನಲ್ಲಿ ಉರಿ, ಅಲ್ಜೈಮರ್ಸ್, ಅಸ್ತಮಾ ಈ ಎಲ್ಲಾ ಸಮಸ್ಯೆಗಳನ್ನು ಹೋಗಲಾಡಿಸಲು ವಿಟಮಿನ್ ಇ ಅಂಶ ದೇಹದಲ್ಲಿ ಅವಶ್ಯಕ.
6.ಮಧುಮೇಹವನ್ನು ತಡೆಗಟ್ಟಲು ಸಹಕಾರಿಯಾಗಿದೆ: 'ವಿಟಮಿನ್ ಇ' ದೇಹದಲ್ಲಿ ಸಕ್ಕರೆ ಅಂಶವನ್ನು ಸಮಪ್ರಮಾಣದಲ್ಲಿಡುತ್ತದೆ. ಇದರಿಂದ ಮಧುಮೇಹ ಬರದಂತೆ ತಡೆಯುವುದು.
ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ
Comments