Skip to main content

ಮೈಕ್ರೋವೇವ್ ಆಹಾರ ಆರೋಗ್ಯಕರವೇ?

ಮೈಕ್ರೋವೇವ್ ಆಹಾರ ಆರೋಗ್ಯಕರವೇ? ನಗರ ಪ್ರದೇಶದಲ್ಲಿ, ಹಳ್ಳಿಯ ಕೆಲವು ಮನೆಗಳಲ್ಲೂ ಕೂಡ ಮೈಕ್ರೋವೇವ್ ಬಳಕೆ ಸಾಮನ್ಯವಾಗಿದೆ. ಸುಲಭವಾಗಿ ಅಡುಗೆ ಮಾಡುಬಹುದಾಗಿರುವುದರಿಂದ ಮೈಕ್ರೋವೇವ್ ಬಳಸಲು ಹೆಚ್ಚಿನವರು ಇಷ್ಟಪಡುತ್ತಾರೆ. ಅಲ್ಲದೆ ಈ ಮೈಕ್ರೋವೇವ್ ನಲ್ಲಿ ಅಡುಗೆ ಮಾಡುವಾಗ ನಾನಾ ಬಗೆಯ ಅಡುಗೆಗಳನ್ನು ಬಲು ಸುಲಭದಲ್ಲಿ ಕೆಲವೇ ನಿಮಿಷದಲ್ಲಿ ತಯಾರಿಸಬಹುದು. ಮೈಕ್ರೋವೇವ್ ಬಂದ ಮೇಲೆ ಕೆಲವರಂತೂ ಕೇಕ್, ಗ್ರಿಲ್ಡ್ ಪದಾರ್ಥಗಳನ್ನು ಹೊರಗಿನಿಂದ ಕೊಂಡು ತರುವುದಕ್ಕಿಂತ ಮನೆಯಲ್ಲಿಯೇ ತಯಾರಿಸುತ್ತಿದ್ದಾರೆ. ಆದರೆ ಈ ಮೈಕ್ರೋವೇವ್ ಅಡುಗೆ ಆರೋಗ್ಯಕ್ಕೆ ಒಳ್ಳೆಯದೇ ಎಂಬ ಗುಮಾನಿ ಹೆಚ್ಚಿನವರಲ್ಲಿದೆ. ಮೈಕ್ರೋವೇವ್ ಅಡುಗೆ ಆರೋಗ್ಯಕ್ಕೆ ಒಳ್ಳೆಯದಾಗಿದ್ದು ಬೇಗನೆ ಅಡುಗೆ ಮಾಡಬೇಕು ಆದರೆ ಆ ಅಡುಗೆ ಆರೋಗ್ಯಕರವಾಗಿರಬೇಕು ಎಂದು ಬಯಸುವವರು ಈ ಕೆಳಗಿನ ಆಹಾರ ಪದಾರ್ಥಮಾಡಬಹುದು. ಕೆಂಪಕ್ಕಿ ಅನ್ನ: ಕೆಂಪಕ್ಕಿ ಅನ್ನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ನಾರಿನಂಶ ಹೆಚ್ಚಾಗಿರುವುದರಿಂದ ತೂಕ ಕಡಿಮೆ ಮಾಡುತ್ತೆ. ಮೈಕ್ರೋವೇವ್ ನಲ್ಲಿ ಈ ಅನ್ನ ಬೇಯಿಸುವ ಮೊದಲು 3-4 ಬರಿ ತೊಳೆದು ನಂತರ ಬೇಯಿಸಬೇಕು. ಮೃಕ್ರೋವೇವ್ ನಲ್ಲಿ ಅಡುಗೆ ಮಾಡುವ ಮೊದಲು 20 ನಿಮಿಷ ತೊಳೆದು ನೀರಿನಲ್ಲಿ ನೆನೆಹಾಕಿ. ನಂತರ ಆ ನೀರಿನ್ನೇ ಅಡುಗೆಗೆ ಬಳಸಿ. ಇದರಿಂದ ಪೋಷಕಾಂಶಗಳು ಹಾಳಾಗುವುದಿಲ್ಲ. ಇದರ ಪ್ರಮುಖ ಪ್ರಯೋಜನವೆಂದರೆ ಇದನ್ನು ಒಲೆಯಲ್ಲಿ ಅಥವಾ ಗ್ಯಾಸ್ ನಲ್ಲಿ ಮಾಡುವುದಾದರೆ ಅಧಿಕ ಸಮಯ ತೆಗೆದುಕೊಳ್ಳುತ್ತದೆ. ಮೈಕ್ರೋವೇವ್ ನಲ್ಲಿ ಅತ್ಯಲ್ಪ ಸಮಯದಲ್ಲಿ ಕೆಂಪಕ್ಕಿ ಅನ್ನ ರೆಡಿಯಾಗುವುದು. ಮೊಟ್ಟೆ: ಮೊಟ್ಟೆಯನ್ನು ಎಗ್ ಬುರ್ಜಿ ರೀತಿ ಮಾಡಿ ತಿಂದರೆ ರುಚಿಯ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಈ ರೀತಿ ಮೈಕ್ರೋವೇವ್ ನಲ್ಲಿ ಮಾಡಲು ತುಂಬಾ ಎಣ್ಣೆ ಕೂಡ ಬಳಸುವ ಅಗತ್ಯವಿಲ್ಲ. ಈ ರೀತಿ ಮಾಡುವಾಗ ಸ್ವಲ್ಪ ಖಾರ ಮತ್ತು ಉಪ್ಪು ಸೇರಿಸಿದರೆ ರುಚಿ ಮತ್ತಷ್ಟು ಹೆಚ್ಚಾಗುವುದು. ಜೋಳ: ಜೋಳವನ್ನು ಮಕ್ರೋವೇವ್ ನಲ್ಲಿ ಬಳಸುವ ಬಟ್ಟಲಿಗೆ ಹಾಕಿ ಅದರಲ್ಲಿ ನೀರು ಹಾಕಿ ಸ್ವಲ್ಪ ಉಪ್ಪು ಹಾಕಿ ಬೇಯಿಸಿ ನಂತರ ಒಂದು ಚಮಚ ಬೆಣ್ಣೆ ಮತ್ತು ಸ್ವಲ್ಪ ಖಾರ ಹಾಕಿ ಮಿಶ್ರ ಮಾಡಿದರೆ ತಿನ್ನಲು ರುಚಿಕರ ಮಾತ್ರವಲ್ಲ ಆರೋಗ್ಯಕರವಾಗಿ ಕೂಡ ಇರುತ್ತದೆ. ಪಾಪ್ ಕೋರ್ನ್: ಆಲೂಗೆಡ್ಡೆ ಚಿಪ್ಸ್ ಮತ್ತು ಇತರ ಕುರುಕಲು ತಿಂಡಿ ತಿನ್ನುವ ಬದಲು ಪಾಪ್ ಕೋರ್ನ್ ಮಾಡಿ ತಿನ್ನಬಹುದು. ಫ್ರೂಟ್ ಸಲಾಡ್: ಹಣ್ಣುಗಳನ್ನು ಹಾಗೇ ಕತ್ತರಿಸಿ ಮಿಶ್ರ ಮಾಡಿ ಸ್ವಲ್ಪ ಉಪ್ಪು ಮತ್ತು ಕರಿಮೆಣಸಿನ ಪುಡಿ ಹಾಕಿದರೆ ಫ್ರೂಟ್ ಸಲಾಡ್ ತಿನ್ನಲು ರುಚಿಕರವಾಗಿರುತ್ತದೆ. ಆದರೆ ಇನ್ನೂ ಸ್ವಲ್ಪ ಭಿನ್ನ ರುಚಿ ಬೇಕೆಂದು ಬಯಸುವುದಾದರೆ ಹಣ್ಣುಗಳನ್ನು ಕತ್ತರಿಸಿ, ಮೈಕ್ರೋವೇವ್ ನಲ್ಲಿ ಬೇಯಿಸಿ, ಅದರ ಮೇಲೆ ಚಾಕಲೇಟ್ ಸಿರಪ್ ಹಾಕಿದರೆ ತಿನ್ನಲು ರುಚಿಕರವಾಗಿರುತ್ತದೆ. ಬೀಟ್ ರೂಟ್: ಬೀಟ್ ರೂಟ್ ದೇಹದಲ್ಲಿ ರಕ್ತವನ್ನು ಹೆಚ್ಚು ಮಾಡುವಲ್ಲಿ ತುಂಬಾ ಸಹಕಾರಿಯಾಗಿದೆ. ಬೀಟ್ ರೂಟ್ ಅನ್ನು ಕತ್ತರಿಸಿ ನೀರಿನಲ್ಲಿ ಹಾಕಿ ಮೈಕ್ರೋವೇವ್ ನಲ್ಲಿ ಬೇಯಿಸಿಬಹುದಾದ ಬಟ್ಟಲಿನಲ್ಲಿ ಹಾಕಿ, ರುಚಿಗೆ ತಕ್ಕ ಉಪ್ಪು 8-10 ನಿಮಿಷ ಬೇಯಿಸಿ ನಂತರ ಕರಿಮೆಣಸಿನ ಪುಡಿ ಹಾಕಿದ ಆಹಾರ ಆರೋಗ್ಯಕ್ಕೆ ಒಳ್ಳೆಯದು. ಇದು ಹೊಟ್ಟೆಯನ್ನು ಶುದ್ಧೀಕರಿಸಲು ಸಹಕಾರಿಯಾಗಿದೆ. ಚಿಕನ್: ಚಿಕನ್ ಗ್ರೇವಿ ಅಥವಾ ಕಬಾಬ್ ಮಾಡುವಾಗ ಎಣ್ಣೆ ಬಳಸಲಾಗುವುದು. ಇದರಿಂದ ಕೊಬ್ಬಿನಂಶ ಹೊಟ್ಟೆ ಸೇರುತ್ತದೆ. ಆದರೆ ಗ್ರಿಲ್ಡ್ ಚಿಕನ್ ತಿಂದರೆ ಬಾಯಿಗೆ ರುಚಿ ದೇಹದ ತೂಕ ಹೆಚ್ಚಾಗುವುದಿಲ್ಲ.

Comments

Popular posts from this blog

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ