ಪೋಷಕಾಂಶ ಬೇಕೆಂದರೆ ಸಿಪ್ಪೆಯನ್ನು ತಿನ್ನಿ
ಆಲೂಗೆಡ್ಡೆ ಹೆಚ್ಚಾಗಿ ಸೇವಿಸುವುದು ಒಳ್ಳೆಯದಲ್ಲ , ಅದು ದೇಹದಲ್ಲಿ ಬೊಜ್ಜು ಮತ್ತು ಗ್ಯಾಸ್ ಸಮಸ್ಯೆ ಹೆಚ್ಚು ಮಾಡುತ್ತೆ. ಆದರೆ ಅದನ್ನು ಸಿಪ್ಪೆ ಸಹಿತ ಬೇಯಿಸಿ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ನಿಮಗೆ ಗೊತ್ತೆ?
ಆಲೂಗೆಡ್ಡೆ ಸಿಪ್ಪೆಯನ್ನು ತೆಗೆಯದಿದ್ದರೆ ಅದರಲ್ಲಿರುವ ಮಣ್ಣು ಹೊಟ್ಟೆ ಸೇರುತ್ತದೆ ಎಂದು ಭಾವಿಸುವವರು ಗಮನಿಸಬೇಕಾದ ಅಂಶವೆಂದರೆ ಇನ್ನು ಮುಂದೆ ಸಿಪ್ಪೆ ತೆಗೆದು ಆಲೂಗೆಡ್ಡೆಯನ್ನು ತಿನ್ನುವ ಬದಲು, ಚೆನ್ನಾಗಿ ತೊಳೆದು ಸಿಪ್ಪೆ ಸಹಿತ ಬೇಹಿಸಿ ತಿನ್ನಿ. ಈ ರೀತಿ ತಿನ್ನುವುದರಿಂದ ಆಗುವ ಪ್ರಯೋಜನಗಳ ಕುರಿತು ತಿಳಿಯಲು ಮುಂದೆ ಓದಿ.
1.ಆಲೂಗೆಡ್ಡೆಯನ್ನು ಸಿಪ್ಪೆ ಸಹಿತ ಬೇಯಿಸಿ ತಿನ್ನವುದರಿಂದ ಇದರಲ್ಲಿರುವ ಅಧಿಕ ನಾರಿನಂಶ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಇದನ್ನು ಇತರ ತರಕಾರಿ ಜೊತೆ ತಿನ್ನವುದರಿಂದ ಬೇರೆ ತರಕಾರಿಗಳು ಕೂಡ ಸುಲಭವಾಗಿ ಜೀರ್ಣವಾಗುವಂತೆ ಮಾಡುತ್ತದೆ.
2. ಆಲೂಗೆಡ್ಡೆ ಚಿಪ್ಪೆಯಲ್ಲಿ ವಿಟಮಿನ್ ಸಿ, ವಿಟಮಿನ್ ಬಿ6, ಪೊಟಾಷಿಯಂ, ತಾಮ್ರಾಂಶ, ಮ್ಯಾಗ್ನಷಿಯಂ ಮತ್ತು ನಾರಿನಂಶ ಅಧಿಕವಿರುತ್ತದೆ.
3. ಆಲೂಗೆಡ್ಡೆ ಸಿಪ್ಪೆಯಲ್ಲಿ 20% ಕಬ್ಬಿಣ ಮತ್ತು 8ಗ್ರಾಂ ಪ್ರೊಟೀನ್ ಇದ್ದು ಇತರ ತರಕಾರಿಗಳಿಗೆ ಹೋಲಿಸಿದರೆ ಆಲೂಗೆಡ್ಡೆ ಸಿಪ್ಪೆಯಲ್ಲಿ ಈ ಅಂಶಗಳು ಅಧಿಕವಿದೆ.
4. ಆಲೂಗೆಡ್ಡೆ ಸಿಪ್ಪೆ ಸೇವಿಸಿದರೆ ಹಾನಿಗೊಳಗಾದ ಜೀವ ಕಣಗಳನ್ನು ಮತ್ತೆ ಸರಿ ಪಡಿಸುವಂತೆ ಮಾಡುತ್ತದೆ.
ಆದರೆ ಆಲೂಗೆಡ್ಡೆ ಎಲ್ಲಾ ಅಹಾರಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಕರಿದ ಆಲೂಗೆಡ್ಡೆ ಕುರುಕುಲು ತಿಂಡಿ, ಇತರ ಕೊಬ್ಬಿನ ಪದಾರ್ಥಗಳ ಜೊತೆ ಸೇವಿಸುವುದು ಇವೆಲ್ಲವೂ ಹೃದಯ ಸಂಬಂಧಿ ಕಾಯಿಲೆಯನ್ನು ತರುತ್ತದೆ, ಆಲೂಗೆಡ್ಡೆಯನ್ನು ಸಿಪ್ಪೆ ಸಹಿತ ಬೇರೆ ತರೆಕಾರಿಗಳ ಜೊತೆ ಹಾಕಿ ಬೇಯಿಸಿ ತಿನ್ನವುದು ಆರೋಗ್ಯಕ್ಕೆ ಒಳ್ಳೆಯದು.
ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ
Comments