Skip to main content

ಹೆಂಗಸರಲ್ಲಿ ಅನಿಮಿಯಾ ಅಥವಾ ರಕ್ತಕೊರೆ

ಹೆಂಗಸರಲ್ಲಿ ಅನಿಮಿಯಾ ಅಥವಾ ರಕ್ತಕೊರೆ ಅನೇಕ ಸ್ತ್ರೀಯರು ರಕ್ತ ಕೊರೆ ಅಥವಾ ಅನಿಮಿಯಾದಿಂದಾಗಿ ಬಹಳ ಬೇಗನೆ ಆಯಾಸಕ್ಕೆ ತುತ್ತಾಗುತ್ತಾರೆ. ಅದರಲ್ಲೂ ಗರ್ಭಿಣಿಯಾಗಿದ್ದಾಗ, ಸಾಕಷ್ಟು ಪ್ರಮಾಣದಲ್ಲಿ ಪೌಷ್ಠಿಕ ಆಹಾರವನ್ನು ಸೇವಿಸದಿದ್ದರೆ ಸುಸ್ತು ಕಾಣಿಸಿಕೊಳ್ಳುತ್ತದೆ. ಮುಟ್ಟಿನ ಸಂದರ್ಭದಲ್ಲಿ ಗರ್ಭಪಾತದಲ್ಲಿ ಅಥವಾ ಹೆರಿಗೆಯ ಸಂದರ್ಭದಲ್ಲಿ ರಕ್ತವನ್ನು ಕಳೆದುಕೊಳ್ಳಬಹುದು. ಹೆಂಗಸರಲ್ಲಿ ಅನಿಮಿಯಾವನ್ನು ಪತ್ತೆಹಚ್ಚುವುದು ಹೇಗೆ? ೧. ಮೈಯೆಲ್ಲಾ ಬಿಳಿಚಿಕೊಂಡಿದ್ದರೆ (Looks Pale), ಸುಲಭವಾಗಿ ಆಯಾಸಗೊಂಡರೆ ಅಥವಾ ನಿಶ್ಚಕ್ತಿ ಇದ್ದರೆ ಅನಿಮಿಯಾ ಇದೆ ಎಂದು ತಿಳಿಯಬಹುದು. ೨. ಕಣ್ಣುಗಳನ್ನು ಪರೀಕ್ಷಿಸುವುದರಿಂದ ಅನಿಮಿಯಾ ಇದೆಯೋ, ಇಲ್ಲವೋ ಎಂದು ತಿಳಿದುಕೊಳ್ಳಬಹುದು. ೩. ಬಾಯಿಯ ಲೋಳೆ ಪೊರೆಯನ್ನು (Mucous Membrane of the Mouth) ಪರೀಕ್ಷಿಸುವುದರಿಂದ ತಿಳಿದುಕೊಳ್ಳಬಹುದು. ೪. ಹಿಮೋಗ್ಲೋಬಿನ್‌ ಪ್ರಮಾಣದಿಂದ ತಿಳಿದುಕೊಳ್ಳಬಹುದ. ಕಬ್ಬಿಣಾಂಶದ ಕೊರತೆಯಿಂದಲೇ ಸಾಮಾನ್ಯವಾಗಿ ಅನಿಮಿಯಾ ಉಂಟಾಗುವುದು. ಹಿಮೋಗ್ಲೋಬಿನ್‌ ತಯಾರಾಗಬೇಕಾದರೆ ಕಬ್ಬಿಣ ಮತ್ತು ಪ್ರೋಟೀನ್‌ ಎರಡೂ ಅಗತ್ಯ. ಪೋಲಿಕ್‌ ಆಯಸಿಡ್‌, ವಿಟಮಿನ್‌, ಕೆಂಪು ರಕ್ತ ಕಣಗಳ ತಯಾರಿಕೆಗೆ ಬಹಳ ಅಗತ್ಯ. ಗರ್ಭಿಣಿಯರಿಗೆ ಪೊಲೀಕ್‌ ಆಯಸಿಡ್‌ ಮತ್ತು ಕಬ್ಬಿಣಾಂಶ ಹೆಚ್ಚಾಗಿ ಬೇಕು. ವಿಟಮಿನ್‌ ಬಿಕ-೧೨ರ ಕೊರತೆಯಿಂದಲೂ ಅನಿಮಿಯಾ ಉಂಟಾಗುತ್ತದೆ. ಚಿಕಿತ್ಸೆ: ಗರ್ಭೀಣಿಯರು ಮತ್ತು ಮೊಲೆಹಾಲನ್ನು ಕುಡಿಸುತ್ತಿರುವ ತಾಯಂದಿರು, ಗರ್ಭ ನಿರೋಧಕಗಳನ್ನು ಬಳಸುತ್ತಿರುವವರಲ್ಲಿ ೧೨ ಗ್ರಾಮಿಗಿಂತಲೂ ಹಿಮೋಗ್ಲೋಬಿನ್‌ ಕಡಿಮೆ ಇದ್ದರೆ ಅವರು, ಐರನ್‌ ಮತ್ತು ಪೊಲಿಕ್‌ ಆಸಿಡ್‌ ಮಾತ್ರೆಗಳನ್ನು ವೈದ್ಯರ ಸಲಹೆಯನ್ನು ಪಡೆದು ಸೇವಿಸಬೇಕು. ಸೂಚನೆ: ೧ ಐರನ್ ಮಾತ್ರೆಗಳನ್ನು ಊಟವಾದ ನಂತರ ಸೇವಿಸಬೇಕು. ೨. ಐರನ್‌ ಮಾತ್ರೆಗಳ ಜೊತೆಗೆ ಕಬ್ಬಿಣಾಂಶವಿರುವ ಹಸಿರು ತರಕಾರಿಗಳನ್ನು ಯಥೇಚ್ಛವಾಗಿ ಪ್ರತಿನಿತ್ಯ ಬಳಸಬೇಕು. ೩. ಕನಿಷ್ಠ ಮೂರು ತಿಂಗಳವರೆಗಾದರೂ ಐರನ್‌ ಮತ್ತು ಪೋಲಿಕ್‌ ಆಯಸಿಡ್‌ ಮಾತ್ರೆಗಳನ್ನು ಸೇವಿಸಬೇಕು. ೪. ಐರನ್‌ ಮತ್ತು ಪೋಲಿಕ್ ಆಯಸಿಡ್‌ ಮಾತ್ರೆಗಳು ಉಚಿತವಾಗಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ದೊರೆಯುತ್ತವೆ. ವಿವಾಹಿತ ಮಹಿಳೆಯರು, ಒಂದು ಮಗುವಿಗೂ, ಇನ್ನೊಂದು ಮಗುವಿಗೂ ಕನಿಷ್ಠ ಮೂರು ವರ್ಷಗಳ ಅಂತರವನ್ನು ಇರಿಸಿಕೊಳ್ಳುವುದರಿಂದ, ಆರೋಗ್ಯ ಮತ್ತು ಶಕ್ತಿಯನ್ನು ಪುನಃ ಗಳಿಸಲು ಸಾಧ್ಯವಾಗುತ್ತದೆ.

Comments

Popular posts from this blog

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ