Skip to main content

ಯಜ್ಞ-ಯಾಗಾದಿಗಳು

ಯಜ್ಞ-ಯಾಗಾದಿಗಳು ಮಾನವರಾದ ನಾವುಗಳು ಎಷ್ಟು ಜನ್ಮವೆತ್ತಿ ಏನೇನು ಮಾಡಿ ಈ ಜನ್ಮದಲ್ಲಿ ಹೀಗಿದ್ದೇವೆ ಎಂಬುದು ನಮಗೆ ತಿಳಿಯದ ವಿಷಯ. ಆದರೆ ನಮ್ಮಲ್ಲಿರುವ ಆತ್ಮಚೈತನ್ಯಕ್ಕೆ ಎಲ್ಲವೂ ತಿಳಿದಿದೆ. ಆ ಚೇತನವು ಸುಮ್ಮನಿದ್ದು, ನಮ್ಮ ಕರ್ಮಫಲವು ನಮ್ಮಿಂದ ಒಳ್ಳೆಯದನ್ನು, ಕೆಟ್ಟದನ್ನು ಮಾಡಿಸುತ್ತದೆ.ಆದರೆ ಯಾವಾಗ ಕೆಟ್ಟಕರ್ಮದ ಫಲವು ಕಡಿಮೆ ಆಗುವುದೋ,ಆಗ ನಮ್ಮ ಸರ್ವಾಂಗೀಣ ಅಭಿವೃದ್ಧಿ ನಿಶ್ಚಿತ. ಅದಕ್ಕಾಗಿ ನಮಗೆ ಋಷಿ-ಮುನಿಗಳು ಅನೇಕ ಮಾರ್ಗದರ್ಶನಗಳನ್ನು ಮಾಡಿರುವರು.ಅವುಗಳಲ್ಲಿ ಮಹತ್ತರವಾದವುಗಳೆಂದರೆ ಯಜ್ಞ-ಯಾಗಾದಿಗಳು. ಇವುಗಳಲ್ಲಿ ಸೂರ್ಯ,ಗಣಪತಿ,ಅಂಬಿಕಾ,ಶಿವ,ವಿಷ್ಣುಗಳಾದ ಪಂಚಾಯತನ ದೇವತೆಗಳನ್ನು ಉದ್ದೇಶಿಸಿ ಮಾಡುವ ಜಪ,ಹೋಮ,ತರ್ಪಣ,ಮಾರ್ಜನ,ಬ್ರಾಹ್ಮಣ-ಭೋಜನಗಳಿಂದ ಮಾಡುವ ವಿಶೇಷ ಅನುಷ್ಠಾನಕ್ಕೆ ಯಜ್ಞ-ಯಾಗಾದಿಗಳು ಎನ್ನಬಹುದು. ೧. ಸೂರ್ಯ ಸಂತತಿ ಪ್ರಾಪ್ತಿಗಾಗಿ, ಮೋಕ್ಷ ಪ್ರಾಪ್ತಿಗಾಗಿ,ಲೋಕ ಕಲ್ಯಾಣಕ್ಕಾಗಿ,ರೋಗ ನಿವೃತ್ತಿಗಾಗಿ ಗಾಯತ್ರಿ ಪುರಶ್ಚರಣ ಯಾಗವನ್ನು ಮಾಡಬೇಕು. ಹೀಗೆ ಎಲ್ಲಾ ಮನೋಕಾಮನೆಗಳನ್ನು ಪೂರೈಸಿಕೊಳ್ಳಲು ಈ ಯಾಗವನ್ನು ಮಾಡಬೇಕು. ೨. ಗಣಪತಿ ಸ್ವೀಕರಿಸಿದ ಕಾರ್ಯದಲ್ಲಿ ಬರುವಂತಹ ವಿಘ್ನ ನಿವಾರಣೆಗಾಗಿ, ಮಕ್ಕಳಿಗೆ ವಿದ್ಯಾಭ್ಯಾಸ ಸಲುವಾಗಿ,ಲಕ್ಷ್ಮೀ ಪ್ರಾಪ್ತಿಗಾಗಿ,ಉದ್ಯೋಗದಲ್ಲಿ ಯಶ; ಪ್ರಾಪ್ತಿಗಾಗಿ ಮತ್ತು ಈ ರೀತಿಯ ಎಲ್ಲ ಮನೋಕಾಮನೆಗಳನ್ನು ಪಡೆಯಲು ಚತುರ್ದ್ರವ್ಯ (ಮೋದಕ,ದೂರ್ವಾ,ಲಾಜಾ,ತುಪ್ಪ)ದಿಂದ ಗಣೇಶ ಯಾಗವನ್ನು ಮಾಡಬೇಕು. ೩.ದುರ್ಗಾಂಬಿಕಾ " ಕುಪುತ್ರೋ ಜಾಯೇತ್ ಕ್ವಚಿದಪಿ ಕುಮಾತಾನ್ನ ಭವತಿ." ಎಂಬ ಶಂಕರರ ಉಕ್ತಿಯಂತೆ ತಾಯಿಯೇ ನಮಗೆ ಸರ್ವಸ್ವ. ತಾಯಿಯು ಮಕ್ಕಳ ಎಲ್ಲಾ ಮನೋಕಾಮನೆಗಳನ್ನು ಭಕ್ತಿಯಿಂದ ಬೇಡಿದಲ್ಲಿ ಅದನ್ನು ನಿಸ್ಸಂದೇಹವಾಗಿ ಪೂರೈಸುತ್ತಾಳೆ. ಆ ತಾಯಿಯನ್ನು ಒಲಿಸಿಕೊಳ್ಳಲು ಅನೇಕ ವಿಧವಾದ ಅನುಷ್ಠಾನಗಳಿವೆ. ಅವುಗಳಲ್ಲಿ ನವಚಂಡಿ,ಶತಚಂಡಿ,ಸಹಸ್ರಚಂಡಿ,ಆಯುತಚಂಡಿ ಯಾಗಗಳು ಪ್ರಮುಖವಾದವು.ಅದ್ದರಿಂದ ನಮ್ಮ ಶಕ್ತ್ಯಾನುಸಾರವಾಗಿ,ನಮ್ಮ ಮನೋಕಾಮನೆಗಳ ಪೂರ್ತಿಗಾಗಿ ಈ ಯಾಗಗಳನ್ನು ಮಾಡಬೇಕು. ೪.ಶಿವ ಈ ಜಗತ್ತಿನಲ್ಲಿ ಜನಿಸಿದ ಸರ್ವವು ಶಿವಾಧೀನ. ಹುಟ್ಟು-ಸಾವುಗಳೂ ಅವನದೇ. ಶಿವನೇ ತಂದೆ. ಹೀಗಾಗಿ ಎಲ್ಲಾವಿಧ ಪಾಪ ನಿವೃತ್ತಿಗಾಗಿ, ಸಂತತಿ ಪ್ರಾಪ್ತಿಗಾಗಿ,ಲಕ್ಷ್ಮಿ ಪ್ರಾಪ್ತಿಗಾಗಿ, ಸದ್ಗತಿ ಪ್ರಾಪ್ತಿಗಾಗಿ,ಧರ್ಮ,ಅರ್ಥ,ಕಾಮ.ಮೋಕ್ಷಾದಿಗಳನ್ನು ಪಡೆಯಲು ಶಿವನನ್ನೇ ಆರಾಧಿಸಬೇಕು.ಶಿವನನ್ನು ಒಲಿಸಲು ಅನೇಕ ವಿಧವಾದ ಆರಾಧನೆಗಳಿವೆ. ಶತರುದ್ರ ಪುರಶ್ಚರಣ,ಮಹಾರುದ್ರ ಪುರಶ್ಚರಣ,ಅತಿರುದ್ರ ಪುರಶ್ಚರಣ,ಕೈಲಾಸ ಯಂತ್ರ,ಸಹಸ್ರ ಲಿಂಗತೋ ಭದ್ರ ಮಹಾಯಂತ್ರ ಪ್ರಮುಖವಾದುದು. ೫.ವಿಷ್ಣು "ಸರ್ವದೇವ ನಮಸ್ಕರ:ಕೇಶವಂ ಪ್ರತಿಗಚ್ಚತಿ".ನಮ್ಮ ಸಂಸ್ಕೃತಿಯಲ್ಲಿ ಹಲವಾರು ದೇವತೆಗಳನ್ನು ಆರಾಧಿಸುತ್ತೇವೆ. ಆದರೆ ಎಲ್ಲಾ ದೇವತೆಗಳಿಗೂ ಮೂಲ ಮಹಾವಿಷ್ಣು. ವಿಷ್ಣು ಜ್ಞಾನದ ರೂಪ. ಧರ್ಮ,ಅರ್ಥ,ಕಾಮ,ಮೋಕ್ಷಎಲ್ಲಾ ಮನೋಕಾಮನೆಗಳ ಸಾಧನೆಗಾಗಿ ಮಹಾವಿಷ್ಣುವಿನ ದಶರೂಪಗಳನ್ನು ಆರಾಧಿಸುತ್ತೇವೆ. ಹೀಗೆ ಎಲ್ಲ ಮನೋಕಾಮನೆಗಳ ಪೂರ್ಣತೆಗಾಗಿ ವಿಷ್ಣು ಪ್ರೀತ್ಯರ್ಥವಾಗಿ ಪುರುಷ ಸೂಕ್ತ ಪುರಶ್ಚರಣ ಹೋಮ,ಸುದರ್ಶನ ಹೋಮ,ಉಗ್ರ ನರಸಿಂಹ ಹೋಮ,ರಾಮತಾರಕ ಹೋಮ,ಸುಂದರಕಾಂಡ,ಅಷ್ಟಾಕ್ಷರಿ ಮಹಾಮಂತ್ರ ಜಪ ಹೋಮಾದಿ ಮಾಡಿಸಬೇಕು. ೬.ಸೋಮ ಯಾಗ ಪಾಪ ನಿವೃತ್ತಿ ಮತ್ತು ಇಚ್ಛಿತ ಮನೋಕಾಮನೆ ಪ್ರಾಪ್ತಿಗಾಗಿ ಮಾಡಬೇಕು. ೭.ಪುತ್ರಕಾಮೇಷ್ಠಿ ಯಾಗ ಮಕ್ಕಳನ್ನು ಪಡೆಯಲು ಮಾಡುವ ಅತೀದೊಡ್ಡ ವಿಧಿ. ೮.ಗರುಡ ಚಯನ ಮಹಾಯಾಗ ಪಾಪ ನಿವೃತ್ತಿ, ಲೋಕಕಲ್ಯಾಣಾರ್ಥವಾಗಿ ಮಾಡಬೇಕು. ೯.ರಾಜ ಸೂಯಾಗ ಮತ್ತು ೧೦:ಅಶ್ವಮೇಧ ಯಾಗ ಇವುಗಳನ್ನು ಈಗ ಕಾಲದಲ್ಲಿ ಮಾಡಿಸುವುದಿಲ್ಲ. ಹಿಂದಿನ ಕಾಲದಲ್ಲಿ ಮಹಾರಾಜರುಗಳು ಮಾಡಿಸುತ್ತಿದ್ದರು. ೧೦.ಚಾಂದ್ರಾಯಣ ಪ್ರಯೋಗ ಘೋರ ಪಾಪಗಳಾದ ಮಾತೃ ಹತ್ಯೆ,ಪಿತೃ ಹತ್ಯೆ, ಗೋ ಹತ್ಯೆ, ಬ್ರಾಹ್ಮಣ ಹತ್ಯೆ ಮುಂತಾದ ಸರ್ವ ಘೋರ ಪಾಪಗಳನ್ನು ಮಾಡಿದಲ್ಲಿ ಇದನ್ನು ಮಾಡಬೇಕು. (ಇದು ತುಂಬಾ ಕಠಿಣವಾದ ಪ್ರಯೋಗವಾಗಿರುತ್ತದೆ)

Comments

Popular posts from this blog

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ