Skip to main content

ಜಾತಕದಲ್ಲಿ ಗೃಹ ಯೋಗ

ವಾಸಯೋಗ್ಯವಾದ ಮನೆಯಿದ್ದರೂ, ಇನ್ನಿಲ್ಲದ ಅಡಚಣೆ. ಛೇ ಎಲ್ಲವೂ ಈ ಮನೆಯಿಂದ ಅಂತ ಗೊಣಗುವವರಿಗೇನು ಕಡಿಮೆಯಿಲ್ಲ. ಇನ್ನೂ ಎಷ್ಟೋ ಮಂದಿ ಮನೆ ಕಟ್ಟಿಸುತ್ತಾರೆ. ಆದರೆ ಕಟ್ಟಿಸಿದ ಮನೆಯಲ್ಲಿ ವಾಸ ಮಾಡಲಿಕ್ಕೆ ಅಗುವುದಿಲ್ಲ. ಇದೇಕೆ ಹೀಗೆ? ಎನ್ನುತ್ತಾರೆ. ಗೃಹನಾಶ ಯೋಗ : ನಿಮ್ಮ ಜಾತಕದಲ್ಲಿ ಚತುರ್ಥಧಿಪತಿಯು ವ್ಯಯ ಸ್ಥಾನವಾದ 12 ರಲ್ಲಿ ಪಾಪ ಗ್ರಹಗಳಿಂದ ಕೂಡಿದ್ದರೆ ಇಲ್ಲವೆ ವ್ಯಯಾಧಿಪತಿಯ ದೃಷ್ಟಿ ಇದ್ದರು ಗೃಹನಾಶ ಯೋಗ ಆಗುವುದು. ಇಂತಹ ಜಾತಕರಿಗೆ ಮನೆ ಇದ್ದರೂ ವಾಸಿಸಲು ಆಗುವುದಿಲ್ಲ. ಚತುರ್ಥಾಧಿಪತಿಯು ನವಾಂಶ ಕುಂಡಲಿಯಲ್ಲಿ ವ್ಯಯ ಸ್ಥಾನದಲ್ಲಿದ್ದರೆ ಮನೆಯ ಸಂಬಂಧವಾಗಿ ಹಣ ಮತ್ತು ಮನೆ ಎರಡನ್ನು ಕಳೆದು ಕೊಳ್ಳುವ ಸಂಭವ ಇರುತ್ತದೆ. ಚತುರ್ಥ ಸ್ಥಾನದಲ್ಲಿ ಪಾಪ ಗ್ರಹಗಳೇ ಇದ್ದರೆ ಅನೇಕ ರೀತಿಯ ಸಮಸ್ಯೆಗಳಿಗೆ ಸಿಲುಕಿ ಮನೆಯೇ ಬೇಡ ಎನ್ನುವ ತೀರ್ಮಾನಕ್ಕೆ ಬಂದು ಬಿಡುತ್ತಾರೆ ಅಥವಾ ಮನೆಯನ್ನು ಯಾರಿಗಾದರೂ ಮಾರಾಟ ಮಾಡಿ ಬಿಡುತ್ತಾರೆ. ಕಟ್ಟಿದ ಮನೆಯನ್ನು ಯಾರಾದರೂ ಖರೀದಿ ಮಾಡಬೇಕೆಂದು ಪ್ರಶ್ನೆ ಕೇಳಿದರೆ ಪ್ರಶ್ನಾಲಗ್ನ ಚತುರ್ಥ ಸ್ಥಾನಾಧಿಪತಿಗಳು ಕೇಂದ್ರ ತ್ರಿಕೋನದಲ್ಲಿ (1,4,7,10,5,9) ಉಚ್ಚ ಮಿತ್ರ ಸ್ವಕ್ಷೇತ್ರದಲ್ಲಿ ಇದ್ದರೆ ಯಾವುದೇ ಆಸ್ತಿ ಮನೆಯನ್ನು ತೆಗೆದು ಕೊಳ್ಳಬಹುದು. ಲಗ್ನ ಚತುರ್ಥಾಧಿಪತಿಗಳು 6,8,12ನೇ ಭಾವಗಳಲ್ಲಿ ಇದ್ದು ಲಗ್ನ ಮತ್ತು ಚತುರ್ಥ ಭಾವದಲ್ಲಿ ಶನಿ, ರಾಹು ಭಗವಾನರು ಇದ್ದರೆ ಆ ಆಸ್ತಿ ಅಥವಾ ಮನೆಯಿಂದ ಕಷ್ಟ, ತೊಂದರೆಗಳು ಉಂಟಾಗುವುದು ಎಂದು ತಿಳಿಯಬೇಕು. ಸಪ್ತಮ ದಶಮ ಸ್ಥಾನದಲ್ಲಿ ಶನಿ, ಕುಜ, ರಾಹು, ಕೇತುಗಳು ಇದ್ದರೆ ಆ ಮನೆಯ ಯಜಮಾನರು ಅನೇಕ ಕಷ್ಟ ನಷ್ಟಗಳನ್ನು ಅನುಭವಿಸಿರುವುದರಿಂದ ಆ ಮನೆಯನ್ನು ಮಾರಾಟ ಮಾಡುತ್ತಿದ್ದಾರೆಂದು ತಿಳಿಯಬೇಕು. ಪಂಚಮ ಅಷ್ಟಮಾಧಿಪತಿಗಳು, ಷಷ್ಠ ವ್ಯಯ ಸ್ಥಾನದಲ್ಲಿ ಇದ್ದರೆ ಆ ಮನೆಯ ಯಜಮಾನನು ಸಾಲ ತೀರಿಸಲಾರದೆ ಮನೆಯನ್ನು ಮಾರಾಟ ಮಾಡುತ್ತಿದ್ದಾನೆ ಎಂದು ತಿಳಿಯಬೇಕು. ಕೇಂದ್ರ ತ್ರಿಕೋನ ಸ್ಥಾನಗಳಾದ ಲಗ್ನ ಚತುರ್ಥ ಸಪ್ತಮ, ದಶಮ ಪಂಚಮ ನವಮ ಸ್ಥಾನಗಳಲ್ಲಿ ಶುಭ ಗ್ರಹಗಳಾದ ಬುಧ-ಗುರು-ಶುಕ್ರ ಚಂದ್ರರು ಉಚ್ಚ ಮಿತ್ರ ಸ್ವಕ್ಷೇತ್ರದಲ್ಲಿ ಇದ್ದರೆ ಆಸ್ತಿ ಅಥವಾ ಮನೆಯ ವ್ಯವಹಾರ ತುಂಬಾ ಅನುಕೂಲಕರವಾಗಿ ಇರುತ್ತದೆಂದು ತಿಳಿಯಬೇಕು. ಪಂಚಾಂಗದ ಪ್ರಶ್ನೆಯ ಪ್ರಕಾರ ನಿಮಗೆ ಮನೆ ಕಟ್ಟುವ ಸ್ಥಳದಿಂದ ಒಳ್ಳೆಯದಾಗುವುದೇ ಎಂಬ ಅನೇಕ ಪ್ರಶ್ನೆಗಳೀಗೆ ಸಮಂಜಸವಾದ ಉತ್ತರವನ್ನು ಜ್ಯೋತಿಷ್ಯ ಶಾಸ್ತ್ರದಿಂದ ತಿಳಿಯಬಹುದಾಗಿದೆ. ಹಾಗೆಯೇ ಮನೆ ಕಟ್ಟುವ ಸಂದರ್ಭದಲ್ಲಿ ಪ್ರಶ್ನೆ ಮಾಡಿದಾಗ ಲಗ್ನ ಮತ್ತು ಚತುರ್ಥಗಳ ಸ್ಥಾನಗಳ ಮೇಲಿಂದ ತಿಳಿಯ ಬೇಕಾಗುತ್ತದೆ. ಲಗ್ನ ಮತ್ತು ಚತುರ್ಥಾಧಿಪತಿಗಳು ಮಿತ್ರ ಗ್ರಹಗಳಾಗಿದ್ದು ಹಾಗೂ ಸ್ವ ಕ್ಷೇತ್ರ ಉಚ್ಚಕ್ಷೇತ್ರ ಮಿತ್ರ ಕ್ಷೇತ್ರಗಳಾಗಿದ್ದರೆ ಹಾಗೂ ಲಗ್ನ ಮತ್ತು ಚತುರ್ಥ ಸ್ಥಾನಗಳಿಗೆ ಯಾವುದೇ ಪಾಪಗ್ರಹಗಳ ದೃಷ್ಟಿ ಬೀಳಬಾರದು ಹಾಗೂ ಪಾಪ ಗ್ರಹಗಳ ಜತೆ ಸೇರಿರಬಾರದು ಲಗ್ನಾಧಿಪತಿಯಾಗಲಿ ಅಥವಾ ಚತುರ್ಥಾಧಿಪತಿಯಾಗಲಿ ಆಸ್ತನಾಗಿರಬಾರದು. ಲಗ್ನಾಧಿಪತಿಯಾಗಲಿ ಚತುರ್ಥಾಧಿಪತಿಯಾಗಲಿ ಶುಭ ಗ್ರಹಗಳಾದ ಗುರು, ಶುಕ್ರ ಪೂರ್ಣ ಚಂದ್ರ, ಬುಧ ಗ್ರಹಗಳಾಗಿದ್ದರೆ ತುಂಬಾ ಸುಂದರವಾದ ಮನೆಯನ್ನು ಕಟ್ಟಲು ಸಾಧ್ಯ ಆಗುತ್ತದೆ. ಲಗ್ನಾಧಿಪತಿಗಾಗಲಿ, ಚತುರ್ಥಾಧಿಪತಿಗಾಗಲಿ ಶುಭ ಗ್ರಹಗಳ ದೃಷ್ಟಿ ಇದ್ದರೆ ವೈಭವವುಳ್ಳ ಮನೆಯನ್ನು ಕಟ್ಟಿ ಅದರಲ್ಲಿ ಎಲ್ಲ ತರಹದ ಸುಖ ಸಂತೋಷಗಳನ್ನು ಅನುಭವಿಸಲು ಸಾಧ್ಯವಾಗುತ್ತದೆ. ಜಾತಕನು ಪ್ರಶ್ನೆ ಕೇಳಿದ ಸಂದರ್ಭದಲ್ಲಿ ಕೇಂದ್ರ ತ್ರಿಕೋನಗಳಲ್ಲಿ ಶುಭ ಗ್ರಹಗಳು ಇರಬೇಕು ಹಾಗೂ ಲಗ್ನ ಮತ್ತು ಚತುರ್ಥಾಧಿಪತಿಗಳಿಗೆ 6-8-12ನೇ ರಾಶಿಗಳ ಗ್ರಹಗಳ ಸಂಬಂಧ ಇರಬಾರದು. ಈ ರಾಶಿಯ ಅಧಿಪತಿಗಳ ದೃಷ್ಟಿಯು ಬೀಳಬಾರದು ಮತ್ತು ಪಾಪ ಗ್ರಹಗಳಾದ ಕುಜ, ಶನಿ, ರಾಹು, ಕೇತು ಕ್ಷೀಣ ಚಂದ್ರ, ಪಾಪ ಗ್ರಹಗಳ ಜತೆಯಲ್ಲಿರುವ ಬುಧ ಈ ಗ್ರಹಗಳ ಸಂಬಂಧ ಲಗ್ನ, ಚತುರ್ಥಾಧಿಪತಿಗಳಿಗೆ ಬಂದರೆ ನೀವು ಕಟ್ಟುವ ಮನೆಯು ಪರಿಪೂರ್ಣವಾಗದೆ ಹಾಗೂ ಮನೆಯನ್ನು ಕಟ್ಟಿದರೂ ಆ ಮನೆಯಲ್ಲಿ ಸುಖ ಸಂತೋಷದಿಂದ ಇರುವುದಕ್ಕೆ ಸಾಧ್ಯ ಆಗುವುದಿಲ್ಲ. ಆದ್ದರಿಂದ ಲಗ್ನ ಚತುರ್ಥ ಸ್ಥಾನದಲ್ಲಿ ಶುಭ ಗ್ರಹಗಳು ಇದ್ದು ಶುಭ ಗ್ರಹಗಳ ದೃಷ್ಟಿಗೆ ಒಳಗಾಗಿರಬೇಕು.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ವೃಶ್ಚಿಕರಾಶಿಯಲ್ಲಿ ಕುಜ-ರಾಹು ಯೋಗ

ವೃಶ್ಚಿಕರಾಶಿಯಲ್ಲಿ ಕುಜ ಪ್ರವೇಶವು ಸಪ್ಟೆಂಬರ್ 28ರಂದು ಆಗಿರುತ್ತದೆ. ವೃಶ್ಚಿಕ ರಾಶಿಯಲ್ಲಿ ಸಧ್ಯ ರಾಹುವಿನ ಸಂಚಾರವಿರುತ್ತದೆ. ಕುಜ ಮತ್ತು ರಾಹು ಒಂದೇ ರಾಶಿಯಲ್ಲಿ ಗೋಚಾರ ಒಂದು ವಿಶಿಷ್ಟವಾದ ಯೋಗವನ್ನು ಉಂಟುಮಾಡುತ್ತದೆ. ಈ ಯೋಗದ ಪರಿಣಾಮವು ವಿಶೇಷವಾಗಿ ವೃಶ್ಚಿಕ, ತುಲಾ, ಮೇಷ, ವೃಷಭ ಮತ್ತು ಧನು ರಾಶಿಗಳ ಮೇಲೆ ಆಗಲಿದೆ. ಜಾತಕದಲ್ಲಿ ಕುಜ-ರಾಹುವಿನ ಯೋಗವನ್ನು ಕುಯೋಗವೆಂದೇ ವರ್ಣಿಸಲಾಗುತ್ತದೆ, ಆದರೆ ಗೋಚಾರದಲ್ಲಿ ಇದರ ಪ್ರಭಾವವು ಏನು ಎಂಬುವುದನ್ನು ನೋಡೋಣ. ಕುಜ ಮತ್ತು ರಾಹು ಇಬ್ಬರನ್ನೂ ಸ್ವಾಭಾವಿಕವಾಗಿ ಕ್ರೂರಗ್ರಹರು ಎಂದೇ ಕರೆಯಲಾಗುತ್ತದೆ. “ಶನಿವತ್ ರಾಹು, ಕುಜವತ್ ಕೇತು” ಎಂಬ ಮಾತಿನಂತೆ ರಾಹುವು ಶನಿಗ್ರಹದ ಹಾಗೇ ಫಲವನ್ನು ಕೊಡುತ್ತಾನೆ. ಕುಜ, ಶನಿ ಮತ್ತು ರಾಹುಗಳಿಗೆ ಒಂದೇ ತರಹದ ಗೋಚಾರ ಮತ್ತು ವೇಧಸ್ಥಾನಗಳ ನಿರ್ದೇಶವನ್ನು ಹೇಳಲಾಗಿದೆ. ಎಂದರೆ ಈ ಮೂರೂ ಗ್ರಹಗಳು ಯಾರದೇ ಜನ್ಮರಾಶಿಯಿಂದ 3, 6 ಮತ್ತು 11 ನೇಯವರಾಗಿ ಸಂಚಾರಮಾಡಿದಾಗ ಶುಭಫಲವನ್ನು ಕೊಡುತ್ತಾರೆ, ಉಳಿದ ರಾಶಿಗಳಲ್ಲಿ ಶುಭಾಶುಭವನ್ನು ವಿಚಾರಿಸಿ ಹೇಳಬಹುದು. ಮೇಲೆ ಹೇಳಿದ ಸ್ಥಾನಗಳ ವೇಧಸ್ಥಾನಗಳನ್ನು ನೋಡಬೇಕು. ಈ ವೇಧಸ್ಥಾನಗಳು 12, 3 ಮತ್ತು 5. ಜನ್ಮರಾಶಿಯಿಂದ ಈ ಸ್ಥಾನಗಳಲ್ಲಿ ಒಂದು ವೇಳೆ ಯಾವುದೇ ಗ್ರಹವಿದ್ದರೂ ಕುಜ ಗೋಚಾರವು ಶುಭ ಫಲವನ್ನು ಕೊಡಲಾರದು. ಮಂಗಳನಿಂದ ವ್ಯಕ್ತಿಯ ಸಾಹಸ, ಶಕ್ತಿ, ಸಾಮರ್ಥ್ಯ, ಗುಣ, ವಿರೋಧ, ಸಿಟ್ಟು, ಅಸೂಯೆ, ಕ್ರೂರ ಸ್ವಭಾವ,...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...