Skip to main content

ಔಷಧ ಗಿಡದಿಂದ ಪೊಸಿಟಿವ್ ಎನರ್ಜಿ

ಪ್ರಕೃತಿಯೇ ಹಾಗೆ ಆದರಲ್ಲಿ ಯಾವಾಗಲೂ ಆಧ್ಯಾತ್ಮಿಕ ಎನರ್ಜಿಯೊಂದು ಅಂತರ್ಗತವಾಗಿ ಹರಿಯುತ್ತಲೇ ಇರುತ್ತದೆ. ಆದರೆ ಮನೆಯೊಳಗೆ ಕೃತಕ ವಸ್ತುಗಳೇ ತುಂಬಿರುವುದರಿಂದ ಅಂತಹ ಶಕ್ತಿ ಒಳಗೆ ಹೆಚ್ಚಾಗಿ ಇರುವುದಿಲ್ಲ. ಹೀಗಾಗಿ ನೈಸರ್ಗಿಕ ಶಕ್ತಿ ಮನೆಯೊಳಗೆ ಹರಿಯುವಂತೆ ಮಾಡಲು ಇನ್ನಷ್ಟು ಯತ್ನಗಳನ್ನು ಮಾಡಬೇಕಾಗುತ್ತದೆ. ಇದಕ್ಕೆ ಅಷ್ಟೇನೂ ಕಷ್ಟ ಪಡಬೇಕಾಗಿಲ್ಲ. ಮನೆಯೊಳಗೆ ಗಿಡ, ಹೂ, ಗಿಡಮೂಲಿಕೆಗಳನ್ನು ಬೆಳೆದರೆ ಸಾಕು. ಸ್ವಲ್ಪವೇ ದಿನದಳಲ್ಲಿ ಮನೆಯೊಳಗೆ ಪೊಸೆಟಿವ್ ಎನರ್ಜಿ ಹರಿದಾಡುವುದು ನಿಮ್ಮ ಅನುಭವಕ್ಕೆ ಬಂದೇ ಬರುತ್ತದೆ. ಕರಿಬೇವು : ಅಡುಗೆ ಮನೆಯ ಯಾವುದೇ ತಿಂಡಿ ಇರಲಿ ಅದಕ್ಕೆ ಕರಿಬೇವು ಸೇರಿಸಿದರೆ ಘಮಘಮ. ಇದು ಮನೆಯೊಳಗೆ ಸುಲಭವಾಗಿ ಬೆಳೆಯುತ್ತದೆ. ಪಾಟ್‌ನಲ್ಲಿ ಕರಿಬೇವನ್ನುಬೆಳೆಯಬಹುದು. ಆರಂಭದಲ್ಲಿ ಇದಕ್ಕೆ ಒಂದು ಆಧಾರ ಸ್ತಂಭ ಬೇಕಾಗುತ್ತದೆ. ಇದಕ್ಕೆ ಸಾಕಷ್ಟು ಸೂರ್ಯನ ಬೆಳಕು ಬೀಳುತ್ತಿರಬೇಕು. ಜೊತೆಗೆ ದಿನಕ್ಕೊಮ್ಮೆ ನೀರು ಹಾಕಬೇಕು. ಪುದಿನಾ : ಪುದಿನಾ ಒಂದು ತಂಪುಕಾರಕ ಸೊಪ್ಪು. ಇದರ ಬಳಕೆ ಆಯುರ್ವೇದದಲ್ಲಿ ಸಾಕಷ್ಟಿದೆ. ಉತ್ತಮ ಮಣ್ಣು ಕಿಟಕಿಯಿಂದ ಒಂದಿಷ್ಟು ಸೂರ್ಯ ಬೆಳಕು ಇದರ ಬೆಳವಣಿಗೆಗೆ ಸಾಕು. ಇದು ಬೇಗನೆ ಬೆಳೆಯುತ್ತದೆ. ಚಿಕ್ಕ ಪಾಟ್‌ನಲ್ಲಿ ಇದರ ಬೀಜಗಳನ್ನು ಹರವಿ ಬಿಡಿ. ಆದರೆ ಪಾಟ್ ಇಡುವ ಜಾಗದಲ್ಲಿ ಸೂರ್ಯ ಬಿಸಿಲು ಪ್ರಖರವಾಗಿ ಬೀಳಬಾರದು. ಹಾಗೆಂದು ಕಡಿಮೆಯೂ ಆಗಬಾರದು. ಕೊತ್ತಂಬರಿ ಸೊಪ್ಪು : ಇದಂತೂ ಪ್ರತಿಯೊಂದು ಅಡುಗೆಗೂ ಬೇಕೇ ಬೇಕು. ದಿನ ನಿತ್ಯದ ಅಡುಗೆಗೆ ಬಳಸುವ ಕೊತ್ತಂಬರಿ ಸೊಪ್ಪನ್ನು ಕೂಡ ಮನೆಯೊಳಗೆ ಬೆಳೆಯಬಹುದು. ಅಗಲವಾದ ಪಾಟ್‌ನಲ್ಲಿ ಮಣ್ಣು ತುಂಬಿ ಅದರಲ್ಲಿ ದನಿಯಾ ಬೀಜಗಳನ್ನು ಹರಡಿ ಬಿಡಿ. ದಿನಕ್ಕೆ ಒಂದಿಷ್ಟು ನೀರು ಹಾಕುತ್ತಿರಿ. ಸೂರ್ಯನ ಬೆಳಕು ಪಾಟ್ ಮೇಲೆ ಬೀಳುವಂತಿರಲಿ. ಕೆಲವೇ ದಿನಗಳಲ್ಲಿ ಇದು ಮೊಳೆತು ಚಿಗುರು ಬಿಡುತ್ತದೆ. ಇದರ ಜೊತೆಗೆ ಲೆಮೆನ್ ಗಾಸ್ ಕೂಡ ಬೆಳೆಸಿ. ಪರ್ಸ್ಲೆ : ಕನ್ನಡದಲ್ಲಿ ಅಚ್ಚುಮೂಡ ಎಂದು ಕರೆಯಲಾಗುವ ಇದು ಕೂಡ ಮನೆಯಲ್ಲಿ ಎನರ್ಜಿ ಹೆಚ್ಚಿಸಲು ಕಾರಣವಾಗುತ್ತದೆ. ಪಾಟ್‌ನಲ್ಲಿ ಮಣ್ಣು ಹರಡಿ ಇದರಲ್ಲಿ ಬೀಜಗಳನ್ನು ಬಿತ್ತಬೇಕು. ಇದು ನಿಧಾನವಾಗಿ ಮೊಳಕೆಯೊಡುವ ಕಾರಣ ಸ್ವಲ್ಪ ತಾಳ್ಮೆಯಿಂದ ಕಾಯಿರಿ. ಗಾಳಿ ಮತ್ತು ಬೆಳಕು ಚೆನ್ನಾಗಿ ಆಡುವ ಪ್ರದೇಶದಲ್ಲಿ ಇದು ಬೆಳೆಯುತ್ತದೆ. ಹಾಗೆಂದು ನೇರ ಸೂರ್ಯ ಬೆಳಕು ಇದರ ಮೇಲೆ ಬೀಳಬಾರದು.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ವೃಶ್ಚಿಕರಾಶಿಯಲ್ಲಿ ಕುಜ-ರಾಹು ಯೋಗ

ವೃಶ್ಚಿಕರಾಶಿಯಲ್ಲಿ ಕುಜ ಪ್ರವೇಶವು ಸಪ್ಟೆಂಬರ್ 28ರಂದು ಆಗಿರುತ್ತದೆ. ವೃಶ್ಚಿಕ ರಾಶಿಯಲ್ಲಿ ಸಧ್ಯ ರಾಹುವಿನ ಸಂಚಾರವಿರುತ್ತದೆ. ಕುಜ ಮತ್ತು ರಾಹು ಒಂದೇ ರಾಶಿಯಲ್ಲಿ ಗೋಚಾರ ಒಂದು ವಿಶಿಷ್ಟವಾದ ಯೋಗವನ್ನು ಉಂಟುಮಾಡುತ್ತದೆ. ಈ ಯೋಗದ ಪರಿಣಾಮವು ವಿಶೇಷವಾಗಿ ವೃಶ್ಚಿಕ, ತುಲಾ, ಮೇಷ, ವೃಷಭ ಮತ್ತು ಧನು ರಾಶಿಗಳ ಮೇಲೆ ಆಗಲಿದೆ. ಜಾತಕದಲ್ಲಿ ಕುಜ-ರಾಹುವಿನ ಯೋಗವನ್ನು ಕುಯೋಗವೆಂದೇ ವರ್ಣಿಸಲಾಗುತ್ತದೆ, ಆದರೆ ಗೋಚಾರದಲ್ಲಿ ಇದರ ಪ್ರಭಾವವು ಏನು ಎಂಬುವುದನ್ನು ನೋಡೋಣ. ಕುಜ ಮತ್ತು ರಾಹು ಇಬ್ಬರನ್ನೂ ಸ್ವಾಭಾವಿಕವಾಗಿ ಕ್ರೂರಗ್ರಹರು ಎಂದೇ ಕರೆಯಲಾಗುತ್ತದೆ. “ಶನಿವತ್ ರಾಹು, ಕುಜವತ್ ಕೇತು” ಎಂಬ ಮಾತಿನಂತೆ ರಾಹುವು ಶನಿಗ್ರಹದ ಹಾಗೇ ಫಲವನ್ನು ಕೊಡುತ್ತಾನೆ. ಕುಜ, ಶನಿ ಮತ್ತು ರಾಹುಗಳಿಗೆ ಒಂದೇ ತರಹದ ಗೋಚಾರ ಮತ್ತು ವೇಧಸ್ಥಾನಗಳ ನಿರ್ದೇಶವನ್ನು ಹೇಳಲಾಗಿದೆ. ಎಂದರೆ ಈ ಮೂರೂ ಗ್ರಹಗಳು ಯಾರದೇ ಜನ್ಮರಾಶಿಯಿಂದ 3, 6 ಮತ್ತು 11 ನೇಯವರಾಗಿ ಸಂಚಾರಮಾಡಿದಾಗ ಶುಭಫಲವನ್ನು ಕೊಡುತ್ತಾರೆ, ಉಳಿದ ರಾಶಿಗಳಲ್ಲಿ ಶುಭಾಶುಭವನ್ನು ವಿಚಾರಿಸಿ ಹೇಳಬಹುದು. ಮೇಲೆ ಹೇಳಿದ ಸ್ಥಾನಗಳ ವೇಧಸ್ಥಾನಗಳನ್ನು ನೋಡಬೇಕು. ಈ ವೇಧಸ್ಥಾನಗಳು 12, 3 ಮತ್ತು 5. ಜನ್ಮರಾಶಿಯಿಂದ ಈ ಸ್ಥಾನಗಳಲ್ಲಿ ಒಂದು ವೇಳೆ ಯಾವುದೇ ಗ್ರಹವಿದ್ದರೂ ಕುಜ ಗೋಚಾರವು ಶುಭ ಫಲವನ್ನು ಕೊಡಲಾರದು. ಮಂಗಳನಿಂದ ವ್ಯಕ್ತಿಯ ಸಾಹಸ, ಶಕ್ತಿ, ಸಾಮರ್ಥ್ಯ, ಗುಣ, ವಿರೋಧ, ಸಿಟ್ಟು, ಅಸೂಯೆ, ಕ್ರೂರ ಸ್ವಭಾವ,...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...