ಮಾರಕ ರೋಗಕ್ಕೂ ಮೃತ್ತಿಕಾ ಚಿಕಿತ್ಸೆ
ಮೃತ್ತಿಕಾ ಚಿಕಿತ್ಸೆಗೆ ಆಯರ್ವೇದದಲ್ಲಿ ಮಹತ್ವದ ಸ್ಥಾನವಿದೆ. ಮೃತ್ತಿಕಾ ಚಿಕಿತ್ಸೆಯಲ್ಲಿ ಪ್ರಾಕೃತಿಕವಾಗಿ ದೊರೆಯುವ ಮಣ್ಣನ್ನು ಸಂಸ್ಕರಿಸಿ ಬಳಸಲಾಗುತ್ತದೆ.
ಕಪ್ಪು ಮಣ್ಣನ್ನು ಚರ್ಮರೋಗಗಳಿಗೆ, ಕೆಂಪು ಮಣ್ಣನ್ನು ಉದರ ಶೂಲೆ, ಗಂಟು ಬೇನೆಗೆ, ಹುತ್ತದ ಮಣ್ಣನ್ನು ಚರ್ಮ ರೋಗ ಗುಣ ಪಡಿಸಲು ಮತ್ತು ಬಿಳಿ ಮಣ್ಣನ್ನು ಯಕೃತ್ ತೊಂದರೆ ನಿವಾರಿಸಲು ಹಾಗೂ ಹಳದಿ ಮಣ್ಣನ್ನು ಪಚನ ಕ್ರಿಯೆ ತೊಂದರೆ ಮತ್ತು ಮಧುಮೇಹ ಕಾಯಿಲೆಗೆ ಬಳಸಲಾಗುತ್ತದೆ.
ಮಣ್ಣನ್ನು ಎರಡು ರೀತಿಯಲ್ಲಿ ಬಳಸಿಕೊಳ್ಳಲಾಗುತ್ತದೆ. ಸರ್ವಾಂಗ ಲೇಪನ ಮತ್ತು ಸ್ಥಾನಿಕ ತೊಂದರೆಗಳಿಗೆ ಉಪಯೋಗಿಸಿಕೊಳ್ಳಲಾಗುತ್ತದೆ. ಮಣ್ಣಿನ ಲೇಪ ಹಾಕಿಕೊಂಡು 20-30 ನಿಮಿಷ ಕಾಲ ಒಣಗಲು ಹಾಗೆಯೇ ಬಿಡಬೇಕು. ಮೃತ್ತಿಕಾ ಚಿಕಿತ್ಸೆಯ 24 ತಾಸುಗಳ ಮೊದಲು ಸಂಗ್ರಹಿಸಿದ ಮಣ್ಣನ್ನು ನೀರಿನಲ್ಲಿ ನೆನೆಸಿಡಬೇಕು. ಅದನ್ನು ನೇರವಾಗಿ ಬಳಸಬಹುದು ಅಥವಾ ಬಿಳಿ ಬಟ್ಟೆಯಲ್ಲಿ ಸುತ್ತಿ ದೇಹದ ಭಾಗಕ್ಕೆ ಹಚ್ಚಬಹುದು.
ಮಣ್ಣಿನ ಚಿಕಿತ್ಸೆಯ ಪ್ರಯೋಜನ
* ಮೃತ್ತಿಕಾ ಸ್ನಾನದಿಂದ ದೇಹ ರಿಫ್ರೆಶ್ ಆಗುತ್ತದೆ.
* ಮಣ್ಣಿನ ಪ್ಯಾಕ್ ಹಾಕಿಸಿಕೊಂಡರೆ ತಣ್ಣೀರಿನ ಪ್ಯಾಕ್ ಹಾಕಿಸಿಕೊಳ್ಳುವದಕ್ಕಿಂತಲೂ ಹೆಚ್ಚಾಗಿ, ದೇಹದಲ್ಲಿ ನೀರಿನಂಶ ದೀರ್ಘ ಕಾಲ ಉಳಿಯುತ್ತದೆ.
* ಚರ್ಮದ ಪಿಎಚ್ ಮೌಲ್ಯವನ್ನು ಸರಿಯಾಗಿರಿಸುತ್ತದೆ.
* ದೇಹದಲ್ಲಿ ಸುಗಮ ರಕ್ತ ಸಂಚಾರಕ್ಕೆ ಎಡೆ ಮಾಡಿಕೊಡುತ್ತದೆ.
* ಮಡ್ ಥೆರಪಿಯಿಂದ ಮೊಡವೆಯನ್ನು ಕಡಿಮೆ ಮಾಡುತ್ತದೆ ಮತ್ತು ಮೊಡವೆಯಿಂದ ಉಂಟಾದ ಕಲೆಯನ್ನು ಹೋಗಲಾಡಿಸುತ್ತದೆ.
* ಚರ್ಮವನ್ನು ನುಣುಪಾಗಿರಿಸುತ್ತದೆ.
* ಉರಿಯೂತವನ್ನು ತಡೆಯುತ್ತದೆ. ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಸತ್ತ ಚರ್ಮವನ್ನು ನಾಶ ಮಾಡಿ ಹೊಸ ಚರ್ಮ ಬೆಳೆಯುವುದಕ್ಕೆ ಸಹಕರಿಸುತ್ತದೆ.
* ಕಜ್ಜಿ, ಸಣ್ಣ ಗುಳ್ಳೆಗಳಿಂದ ದೇಹದಲ್ಲಾದ ಕಲೆಗಳನ್ನು ಮಡ್ಥೆರಪಿಯಿಂದ ಬಹು ಬೇಗ ಕಡಿಮೆ ಮಾಡಿಕೊಳ್ಳಬಹುದು.
* ಕಣ್ಣಿನ ಆಯಾಸವನ್ನು ಕಡಿಮೆ ಮಾಡುತ್ತದೆ.
* ಕುಷ್ಠರೋಗ, ಅಲರ್ಜಿ, ಸೋರಿಯಾಸಿಸ್ ಹಾಗೂ ಇತರ ಚರ್ಮರೋಗಗಳಿಗೆ ಮಡ್ ಥೆರಪಿಯಿಂದ ಪರಿಹಾರ ಕಂಡುಕೊಳ್ಳಬಹುದು.
* ಸಾಮಾನ್ಯ ವೀಕ್ನೆಸ್, ನರ ದುರ್ಬಲತೆಯನ್ನು ಸರಿಪಡಿಸಲು ಮಡ್ ಥೆರಪಿ ಮಾಡುತ್ತಾರೆ.
* ಅಜೀರ್ಣ ಆಗಿದ್ದರೆ ಹೊಟ್ಟೆಯ ಮೇಲ್ಭಾಗದಲ್ಲಿ ಮಣ್ಣಿನ ಪ್ಯಾಕ್ ಹಾಕಿಸಿಕೊಳ್ಳಬಹುದು. ಸಣ್ಣ ಕರುಳಿನ ಉಷ್ಣತೆಯನ್ನು ಕಡಿಮೆ ಮಾಡುತ್ತದೆ. ವಿಪರೀತ ತಲೆನೋವಿಗೆ ತಲೆಗೆ ಮಣ್ಣಿನ ಪ್ಯಾಕ್ ಹಾಕಿಸಿಕೊಳ್ಳಬಹುದು. ಇದರಿಂದ ನೋವು ಬಹುಬೇಗ ಶಮನಗೊಳ್ಳುತ್ತದೆ.
-ಸಂಗ್ರಹ
Comments