Skip to main content

ಜಾತಕದಲ್ಲಿ ಗೃಹ ಬಲ

ಜಾತಕದಲ್ಲಿ ಚತುರ್ಥಾಧಿಪತಿಯು ಯಾವುದಾದರೊಂದು ಶುಭ ಗ್ರಹದ ಜತೆಯಲ್ಲಿದ್ದು 1-4-7-10-5-9ನೇ ಭಾವಗಳಲ್ಲಿ ಹಾಗೂ ಚತುರ್ಥಾಧಿಪತಿ ಜತೆಯಲ್ಲಿರುವ ಗ್ರಹ ಮಿತ್ರರಾಗಿದ್ದರೆ ಮತ್ತು ಮಿತ್ರ - ಸ್ವ ಕ್ಷೇತ್ರದಲ್ಲಿ ಇದ್ದರೆ ಉತ್ತಮವಾದ ಮನೆಯನ್ನು ಕಟ್ಟಲು ಸಾಧ್ಯವಾಗುತ್ತದೆ ಹಾಗೂ ಆ ಮನೆಯಲ್ಲಿ ಎಲ್ಲ ಪ್ರಕಾರದ ಅನುಕೂಲತೆಗಳು ಇರುತ್ತದೆ. ಸ್ವಕಷ್ಟರ್ಜಿತ ಮನೆಯ ಯೋಗ : ಲಗ್ನಾಧಿಪತಿ 4ನೇ ಭಾಗದಲ್ಲಿದ್ದು 4ನೇ ಅಧಿಪತಿ ಲಗ್ನದಲ್ಲಿದ್ದರೆ ಈ ಯೋಗ ಉಂಟಾಗುತ್ತದೆ. ಈ ಯೋಗದಲ್ಲಿ ಹುಟ್ಟಿದ ಜಾತಕನು ಸ್ವಕಷ್ಟದಿಂದ ುರುಷಾರ್ಥದಿಂದ ಸ್ವಂತ ಸಂಪಾದನೆಯಿಂದ ಸಂಪಾದಿಸಿದ ಹಣದಿಂದ ಮನೆಯನ್ನು ಕಟ್ಟಿಕೊಳ್ಳುವುದು. ವೈಶಿಷ್ಟ ಪೂರ್ಣ ಮನೆಯ ಯೋಗ : 4ನೇ ಅಧಿಪತಿ ಮತ್ತು 10ನೇ ಅಧಿಪತಿ ಹಾಗೂ ಚಂದ್ರ ಜತೆಯಲ್ಲಿ ಇದ್ದು ನಾಲ್ಕನೇ ಸ್ಥಾನದಲ್ಲಿ ಶುಭಗ್ರಹ ಇದ್ದರೆ. ವೈಶಿಷ್ಟ ಪೂರ್ಣ ಮನೆಯ ಯೋಗ ಉಂಟಾಗುತ್ತಿದೆ. ಈ ಯೋಗದಲ್ಲಿ ಹುಟ್ಟಿದ ಜಾತಕರು ಮನೆಯನ್ನು ಆಧುನಿಕ ರೀತಿಯಲ್ಲಿ ಸಜ್ಜುಗೊಳಿಸಲ್ಪಟ್ಟು ಪರಿಪೂರ್ಣ ಎನಿಸಿದ್ದು ಮತ್ತು ಸಾಮಾನ್ಯ ಜನರ ಮನೆುವರಿಗಿಂತ ಬೇರೆಯೇ ರೀತಿಯಾಗಿ ಇರುತ್ತದೆ. ದೊಡ್ಡ ಬಂಗಲೆಯ ಯೋಗ : ನಿಮ್ಮ ಜಾತಕದ ನಾಲ್ಕನೇ ಭಾವದಲ್ಲಿ ಚಂದ್ರ ಮತ್ತು ಶುಕ್ರ ಇಲ್ಲವೇ ನಾಲ್ಕನೇ ಭಾವದಲ್ಲಿ ಉಚ್ಚರಾಶಿಯ ಯಾವುದಾದರೂ ಒಂದು ಗ್ರಹ ಇದ್ದರೂ ಅರಂತೆ 4ನೇ ಅಧಿಪತಿಯು ಕೇಂದ್ರ ತ್ರಿಕೋಣ ಸ್ಥಾನದಲ್ಲಿ ಶುಭ ಸ್ಥಾನದಲ್ಲಿ ಇದ್ದರೆ ಈ ಯೋಗ ಉಂಟಾಗುತ್ತದೆ. ಇಂತಹ ಯೋಗವುಳ್ಳ ಜಾತಕರು ದೊಡ್ಡ ಬಂಗಲೆಯ ಮಾಲೀಕರಾಗುವರು. ಇಂತಹ ಜನರ ಮನೆಯ ಹೊರಗೆ ತೋಟ, ಗಾರ್ಡನ್, ಈಜುಕೊಳ ಇನ್ನು ಇತ್ಯಾದಿ ಇರುತ್ತದೆ. ಕಲಾತ್ಮಕ ರೀತಿಯಿಂದ ಈ ಮನೆಯನ್ನು ಕಟ್ಟಿರುತ್ತಾರೆ. ಅಕಸ್ಮಾತ್ ಮನೆ ಹೊಂದುವ ಯೋಗ : ನಿಮ್ಮ ಜಾತಕದಲ್ಲಿ 4ನೇ ಭಾವಾಧಿಪತಿ ಮತ್ತು ಲಗ್ನಾಧಿಪತಿ ಇಬ್ಬರು ನಾಲ್ಕನೇ ಭಾವದಲ್ಲಿದ್ದರೆ ಈ ಯೋಗ ಉಂಟಾಗುತ್ತದೆ. ಈ ಯೋಗವುಳ್ಳ ಜಾತಕರಿಗೆ ಕಲ್ಪನೆಯೇ ಇರದೆ ಸ್ವಂತ ಮನೆಯನ್ನು ಹೊಂದುವರು ಇಂತಹ ಜಾತಕರು ಬೇರೆಯವರು ಕಟ್ಟಿಸಿದ ಮನೆಯನ್ನು ತೆಗೆದುಕೊಳ್ಳುವ ಸಾಧ್ಯತೆ ಇರುತ್ತದೆ. ಆದರೆ ಲಗ್ನಾಧಿಪತಿ ಮತ್ತು ಚತುರ್ಥ ಸ್ಥಾನಾಧಿಪತಿ ಇಬ್ಬರು ಮಿತ್ರ ಗ್ರಹಗಳಾಗಿದ್ದು ನಾಲ್ಕನೇ ಸ್ಥಾನ ಸ್ವಕ್ಷೇತ್ರ ಅಥವಾ ಮಿತ್ರ ಕ್ಷೇತ್ರ ಆಗಿರಬೇಕು. ಅನಾಯಸ ಮನೆ ಹೊಂದುವ ಯೋಗ : ಜಾತಕದಲ್ಲಿ ಲಗ್ನಾಧಿಪತಿ ಮತ್ತು ಸಪ್ತಮಾಧಿಪತಿ ಲಗ್ನದಲ್ಲಿದ್ದರೆ ಮತ್ತು ನಾಲ್ಕನೇ ಭಾವದ ಮೇಲೆ ಶುಭ ಗ್ರಹಗಳಾದ ಬುಧ, ಗುರು, ಶುಕ್ರ,ಚಂ್ರರ ದೃಷ್ಟಿ ಇದ್ದರೆ ಈ ಯೋಗ ಇದ್ದವರು ವಿಶೇಷ ಪ್ರಯತ್ನ ಇಲ್ಲದೆಯೇ ಮನೆ ದೊರಕುತ್ತದೆ. ಲಗ್ನಾಧಿಪತಿ ಮತ್ತು ಚತುರ್ಥಾಧಿಪತಿ ಲಗ್ನದಲ್ಲಿದ್ದರೆ ಮತ್ತು ಚತುರ್ಥ ಸ್ಥಾನದ ಮೇಲೆ ಶುಭ ಗ್ರಹಗಳ ದೃಷ್ಟಿ ಇದ್ದರೆ ಅನಾಯಾಸದ ಮನೆ ದೊರಕುತ್ತದೆ. ಇಂತಹ ಜಾತಕರಿಗೆ ವಿಶೇಷ ಪ್ರಯತ್ನ ಇಲ್ಲದೆಯೇ ಮನೆ ದೊರಕುತ್ತದೆ. 4ನೇ ಅಧಿಪತಿ ಉಚ್ಚ ಸ್ಥಾನದಲ್ಲಿ ಅಥವಾ ಮೂಲ ತ್ರಿಕೋಣದಲ್ಲಿ ಇಲ್ಲವೇ ಸ್ವ ಕ್ಷೇತ್ರದಲ್ಲಿ ಇದ್ದರೆ 9ನೇ ಅಧಿಪತಿ ಕೇಂದ್ರದಲ್ಲಿ ಇದ್ದರೆ ಅನಾಯಸದ ಮನೆ ದೊರಕುತ್ತದೆ. ಒಂದಕ್ಕಿಂತ ಹೆಚ್ಚು ಮನೆಗಳನ್ನು ಹೊಂದುವ ಯೋಗ : ನಿಮ್ಮ ಜಾತಕದಲ್ಲಿ 4ನೇ ಸ್ಥಾನ ಮತ್ತು 4ನೇ ಅಧಿಪತಿ ಇಬ್ಬರು ಚರ ರಾಶಿಯಲ್ಲಿ (ಮೇಷ,ಕಟಕ,ತುಲಾ,ಮಕರ) ಇದ್ದು 4ನೇ ಅಧಿತಿಯು ಶುಭ ಗ್ರಹದಿಂದ ಕೂಡಿದ್ದು ಇಲ್ಲವೇ ಶುಭ ಗ್ರಹಗಳಾದ ಬುಧ, ಗುರು, ಶುಕ್ರ, ಚ0ದ್ರರ ದೃಷ್ಟಿ ಇದ್ದರೆ ಒಂದಕ್ಕಿಂತ ಹೆಚ್ಚು ಮನೆಯನ್ನು ಹೊಂದುವ ಯೋಗ ಇರುತ್ತದೆ. ಇಂತಹ ಯೋಗದ ಜಾತಕರು ಹೆಚ್ಚು ಮನೆಯಲ್ಲಿ ಇರುತ್ತಾರೆ. ಮತ್ತು ಮೇಲೆಂದ ಮೇಲೆ ಮನೆಯನ್ನು ಬದಲಾಯಿಸುತ್ತಾರೆ. ಚತುರ್ಥ ಸ್ಥಾನ ಮತ್ತು ಚತುರ್ಥಾಧಿಪತಿ ಸ್ಥಿರ ರಾಶಿಯಲ್ಲಿ (ವೃಷಭ, ಸಿಂಹ, ವೃಶ್ಚಿಕ, ಕುಂಭ) ಇದ್ದರೆ ಜಾತಕರಿಗೆ ಅನೇಕ ಸ್ಥಳಗಳಲ್ಲಿ ಮನೆ ಇರುತ್ತದೆ. 4ನೇ ಅಧಿಪತಿ ಬಲಿಷ್ಠನಾಗಿದ್ದು ಮತ್ತು ಲಗ್ನಾಧಿಪತಿ 4ನೇ ಅಧಿಪತಿ ಧನಾಧಿಪತಿ ಈ ಮೂವರಲ್ಲಿ ಎಷ್ಟು ಗ್ರಹಗಳು ಮೂಲ ತ್ರಿಕೋಣದಲ್ಲಿದ್ದರೆ ಹೆಚ್ಚಿನ ಸಂಖ್ಯೆಯ ಮನೆಯನ್ನು ಹೊಂದಿರುತ್ತಾರೆ. ಉತ್ತಮ ಮನೆಯ ಯೋಗ : ಜಾತಕದಲ್ಲಿ 4ನೇ ಅಧಿಪತಿ ಮತ್ತು 10ನೇ ಅಧಿಪತಿ ಇಬ್ಬರು ಕೇಂದ್ರ ತ್ರಿಕೋಣಗಳಲ್ಲಿದ್ದರೆ ಉತ್ತಮ ಮನೆಯ ಯೋಗ ಇರುತ್ತದೆ. ಈ ಯೋಗದಿಂದ ಜಾತಕರಿಗೆ ಉತ್ತಮ ದರ್ಜೆಯ ಮನೆ ಲಭಿಸುತ್ತದೆ. -ಸಂಗ್ರಹ

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ವೃಶ್ಚಿಕರಾಶಿಯಲ್ಲಿ ಕುಜ-ರಾಹು ಯೋಗ

ವೃಶ್ಚಿಕರಾಶಿಯಲ್ಲಿ ಕುಜ ಪ್ರವೇಶವು ಸಪ್ಟೆಂಬರ್ 28ರಂದು ಆಗಿರುತ್ತದೆ. ವೃಶ್ಚಿಕ ರಾಶಿಯಲ್ಲಿ ಸಧ್ಯ ರಾಹುವಿನ ಸಂಚಾರವಿರುತ್ತದೆ. ಕುಜ ಮತ್ತು ರಾಹು ಒಂದೇ ರಾಶಿಯಲ್ಲಿ ಗೋಚಾರ ಒಂದು ವಿಶಿಷ್ಟವಾದ ಯೋಗವನ್ನು ಉಂಟುಮಾಡುತ್ತದೆ. ಈ ಯೋಗದ ಪರಿಣಾಮವು ವಿಶೇಷವಾಗಿ ವೃಶ್ಚಿಕ, ತುಲಾ, ಮೇಷ, ವೃಷಭ ಮತ್ತು ಧನು ರಾಶಿಗಳ ಮೇಲೆ ಆಗಲಿದೆ. ಜಾತಕದಲ್ಲಿ ಕುಜ-ರಾಹುವಿನ ಯೋಗವನ್ನು ಕುಯೋಗವೆಂದೇ ವರ್ಣಿಸಲಾಗುತ್ತದೆ, ಆದರೆ ಗೋಚಾರದಲ್ಲಿ ಇದರ ಪ್ರಭಾವವು ಏನು ಎಂಬುವುದನ್ನು ನೋಡೋಣ. ಕುಜ ಮತ್ತು ರಾಹು ಇಬ್ಬರನ್ನೂ ಸ್ವಾಭಾವಿಕವಾಗಿ ಕ್ರೂರಗ್ರಹರು ಎಂದೇ ಕರೆಯಲಾಗುತ್ತದೆ. “ಶನಿವತ್ ರಾಹು, ಕುಜವತ್ ಕೇತು” ಎಂಬ ಮಾತಿನಂತೆ ರಾಹುವು ಶನಿಗ್ರಹದ ಹಾಗೇ ಫಲವನ್ನು ಕೊಡುತ್ತಾನೆ. ಕುಜ, ಶನಿ ಮತ್ತು ರಾಹುಗಳಿಗೆ ಒಂದೇ ತರಹದ ಗೋಚಾರ ಮತ್ತು ವೇಧಸ್ಥಾನಗಳ ನಿರ್ದೇಶವನ್ನು ಹೇಳಲಾಗಿದೆ. ಎಂದರೆ ಈ ಮೂರೂ ಗ್ರಹಗಳು ಯಾರದೇ ಜನ್ಮರಾಶಿಯಿಂದ 3, 6 ಮತ್ತು 11 ನೇಯವರಾಗಿ ಸಂಚಾರಮಾಡಿದಾಗ ಶುಭಫಲವನ್ನು ಕೊಡುತ್ತಾರೆ, ಉಳಿದ ರಾಶಿಗಳಲ್ಲಿ ಶುಭಾಶುಭವನ್ನು ವಿಚಾರಿಸಿ ಹೇಳಬಹುದು. ಮೇಲೆ ಹೇಳಿದ ಸ್ಥಾನಗಳ ವೇಧಸ್ಥಾನಗಳನ್ನು ನೋಡಬೇಕು. ಈ ವೇಧಸ್ಥಾನಗಳು 12, 3 ಮತ್ತು 5. ಜನ್ಮರಾಶಿಯಿಂದ ಈ ಸ್ಥಾನಗಳಲ್ಲಿ ಒಂದು ವೇಳೆ ಯಾವುದೇ ಗ್ರಹವಿದ್ದರೂ ಕುಜ ಗೋಚಾರವು ಶುಭ ಫಲವನ್ನು ಕೊಡಲಾರದು. ಮಂಗಳನಿಂದ ವ್ಯಕ್ತಿಯ ಸಾಹಸ, ಶಕ್ತಿ, ಸಾಮರ್ಥ್ಯ, ಗುಣ, ವಿರೋಧ, ಸಿಟ್ಟು, ಅಸೂಯೆ, ಕ್ರೂರ ಸ್ವಭಾವ,...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...