Skip to main content

ಕಾಂತಿಯುತ ಹಾಗೂ ಮೊಡವೆ ಮುಕ್ತ ತ್ವಚೆಗಾಗಿ ಸರಳ ಪರಿಹಾರಗಳು

ಪ್ರತಿಯೊಬ್ಬರು 'ನಾನು ಅಂದವಾಗಿ ಕಾಣಬೇಕು' ಎಂದು ಆಸೆ ಪಡುವುದು ಸಹಜ. ಅಂದವಾಗಿ ಕಾಣಿಸಲು ಡ್ರೆಸ್ಸಿಂಗ್ ಚೆನ್ನಾಗಿರಬೇಕು, ಮೇಕಪ್ ಮಾಡಬೇಕು ಇವೆಲ್ಲಾ ನಿಜ. ಆದರೆ ಇವೆಲ್ಲಾಕ್ಕಿಂತ ಹೆಚ್ಚಾಗಿ ತ್ವಚೆ ಅಕರ್ಷಕವಾಗಿರಬೇಕು. ತ್ವಚೆ ಕಾಂತಿಯನ್ನು ಕಾಪಾಡಿಕೊಳ್ಳುವಲ್ಲಿ ನಮ್ಮ ಜೀವನ ಶೈಲಿ ಕೂಡ ಪ್ರಮುಖವಾದ ಅಂಶವಾಗಿರುತ್ತದೆ. ಕಾಂತಿಯುತ ಹಾಗೂ ಮೊಡವೆ ರಹಿತ ತ್ವಚೆ ಪಡೆಯಲು ಅತ್ಯಂತ ಸರಳ ಮದ್ದನ್ನು ಬಯಸುತ್ತಿರುವವರು ನೀವಾಗಿದ್ದೀರಾ? ಹಾಗಿದ್ದರೆ ನೀವು ಈ ಲೇಖನವನ್ನು ಪೂರ್ತಿಯಾಗಿ ಓದಿ ಅದನ್ನು ಅಳವಡಿಸಿಕೊಂಡರೆ ನಿಮಗೆ ಬೇಕಾಗಿರುವುದನ್ನು ಪಡೆಯಬಹುದು. ನಿಮ್ಮ ಮುಖದಲ್ಲಿ ಮೊಡವೆಗಳು ಕಾಣಿಸಿಕೊಂಡಿದೆಯಾ? ಆದರೆ ಇದು ಮಹಿಳೆಯರಿಗೆ ನಿರೀಕ್ಷಿತ. ಸಾಮಾನ್ಯವಾಗಿ ಅವರು ವೈದ್ಯರಲ್ಲಿಗೆ ಚಿಕಿತ್ಸೆಗೆ ಹೋಗುತ್ತಾರೆ ಮತ್ತು ಮದ್ದಿಗೆ ಲೆಕ್ಕವಿಲ್ಲದಷ್ಟು ಹಣ ವ್ಯಯಿಸುತ್ತಾರೆ. ಮೊಡವೆ ಮುಕ್ತ ತ್ವಚೆಗೆ ನೀವು ಕೆಲವೊಂದು ಸರಳ ಸಲಹೆಗಳನ್ನು ಪಾಲಿಸಿದರೆ ನಿಮ್ಮ ಹಣ ಉಳಿಸಬಹುದು. ಮೊಡವೆ ಸಮಸ್ಯೆಯನ್ನು ಮನೆಯಲ್ಲೇ ನಿವಾರಿಸಲು ಇಲ್ಲಿ ಕೆಲವೊಂದು ಉಪಯುಕ್ತ ವಿಧಾನಗಳಿವೆ. ಆಗಾಗ ಮುಖ ತೊಳೆಯಿರಿ ಬೇಸಿಗೆ ಕಾಲದಲ್ಲಿ ನಿಮ್ಮ ತ್ವಚೆಯ ತೈಲ ಗ್ರಂಥಿಗಳು ಹೆಚ್ಚು ಕೆಲಸ ಮಾಡುವ ಪರಿಣಾಮ ನಿಮ್ಮ ಮುಖದಲ್ಲಿ ಎಣ್ಣೆಯಾಂಶ ಕಂಡುಬರಬಹುದು. ಇದು ನಿಮ್ಮ ಮುಖದಲ್ಲಿ ಮೊಡವೆ ಕಾಣಿಸಿಕೊಳ್ಳಲು ಮೊದಲ ಕಾರಣ. ಯಾವುದಾದರೂ ಒಳ್ಳೆಯ ಕ್ಲೀನ್ಸರ್ ನಿಂದ ಮುಖವನ್ನು ದಿನದಲ್ಲಿ ಎರಡು ಸಲವಾದರೂ ತೊಳೆಯಿರಿ. ಒಮ್ಮೆ ತೊಳೆದರೂ ಇದು ಕೆಲಸ ಮಾಡಬಹುದು. ದಿನದಲ್ಲಿ ಎಷ್ಟು ಸಲ ಮುಖ ತೊಳೆಯಬೇಕೆಂದು ನೀವು ನೋಡಲು ಪ್ರಯತ್ನಿಸಿ. ಮೇಕಪ್ ತೆಗೆಯಿರಿ ಸುಂದರವಾಗಿ ಕಾಣಿಸಿಕೊಳ್ಳಲು ಮಹಿಳೆಯರು ಮೇಕಪ್ ಮೊರೆ ಹೋಗುವುದು ಹೊಸತೇನಲ್ಲ. ಇದನ್ನು ಸರಿಯಾದ ರೀತಿ ನಿಭಾಯಿಸದಿದ್ದರೆ ಆಗ ಮೊಡವೆ ಉಂಟಾಗಬಹುದು. ಮಲಗುವ ಮೊದಲು ನೀವು ಮೇಕಪ್ ತೆಗೆಯಿರಿ. ಹೀಗೆ ಮಾಡದಿದ್ದರೆ ನೀವು ಉದ್ದೇಶಪೂರ್ವಕವಾಗಿ ಮುಖದಲ್ಲಿ ಮೊಡವೆಗಳನ್ನು ಆಹ್ವಾನಿಸುತ್ತಿದ್ದೀರಿ. ದಯವಿಟ್ಟು ಧೂಮಪಾನ ನಿಲ್ಲಿಸಿ ಹೌದು. ನಿಮಗೆ ನಾನು ಹೇಳುವುದು ಕೇಳಿದೆ. ಮೊಡವೆಯಿಂದ ಮುಕ್ತರಾಗಬೇಕಾದರೆ ನೀವು ಧೂಮಪಾನ ತ್ಯಜಿಸಲೇಬೇಕು. ಧೂಮಪಾನವು ನಿಮ್ಮ ಆರೋಗ್ಯಕ್ಕೆ ಹಾನಿಯನ್ನುಂಟುಮಾಡುವುದು ಮಾತ್ರವಲ್ಲದೆ ಮೊಡವೆಯ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಹಾಲನ್ನು ಕುಡಿಯಿರಿ ಒಂದು ಲೋಟ ಹಾಲನ್ನು ಕುಡಿಸಿ ಗಟ್ಟಿಯಾದ ನಂತರ ಅದಕ್ಕೆ ಒಂದು ಹನಿ ನಿಂಬೆ ರಸ ಹಿಂಡಿ ಮತ್ತು ಒಲೆಯಿಂದ ಇಳಿಸಿ, ಕದಡುತ್ತಿರಿ. ಬಿಸಿ ತಣಿದ ನಂತರ ಮಲಗುವ ಸಮಯದಲ್ಲಿ ಇದನ್ನು ಮುಖಕ್ಕೆ ಹಚ್ಚಿ ಒಂದು ಗಂಟೆಯ ನಂತರ ಮತ್ತು ಮರುದಿನ ಬೆಳಗ್ಗೆ ನಿಮ್ಮ ಮುಖವನ್ನು ತೊಳೆಯಿರಿ.ಇದು ಮೊಡವೆ ನಿವಾರಿಸಿ ಮೃದು ಕಾಂತಿ ನೀಡುತ್ತದೆ. ಎಣ್ಣೆ ಅಂಶಗಳಿರುವ ಆಹಾರವನ್ನು ದೂರವಿರಿಸಿ ಎಣ್ಣೆ ಅಂಶಗಳಿರುವ ಆಹಾರವನ್ನು ನಿಮ್ಮಿಂದ ದೂರವಿರಿಸುವುದು ಮೊಡವೆ ತ್ವಚೆಯಿಂದ ನಿಮಗೆ ಮುಕ್ತಿ ನೀಡುತ್ತದೆ. ತ್ವಚೆಯಲ್ಲಿ ಮೊಡವೆಗಳಿಲ್ಲದೆ ನೀವು ಜನರ ಮಧ್ಯೆ ತುಂಬಾ ಆತ್ಮವಿಶ್ವಾಸದಿಂದ ತಿರುಗಾಡಲು ಇದು ಕೆಲವೊಂದು ಸರಳ ಹಾಗೂ ಪರಿಣಾಮಕಾರಿ ಸಲಹೆಗಳು. ಇಲ್ಲಿ ನೀಡಲಾಗಿರುವ ಕೆಲವೊಂದು ಸಲಹೆಗಳನ್ನು ಹೆಚ್ಚಿನ ಮಹಿಳೆಯರು ಕಡೆಗಣಿಸುತ್ತಾರೆ. ಯಾಕೆಂದರೆ ಅವರಿಗೆ ಇದರಿಂದ ಹೆಚ್ಚು ಪರಿಣಾಮವಾಗುವುದಿಲ್ಲವೆಂದು ಭಾವಿಸುತ್ತಾರೆ. ಹೀಗಿದ್ದರೆ ಅದು ತಪ್ಪು. ಈ ಸಲಹೆಗಳನ್ನು ಪಾಲಿಸಿದರೆ ಬೇಸಿಗೆ ಕಾಲದಲ್ಲಿ ನೀವು ಮೊಡವೆ ಮುಕ್ತ ತ್ವಚೆ ಪಡೆಯಬಹುದು.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ವೃಶ್ಚಿಕರಾಶಿಯಲ್ಲಿ ಕುಜ-ರಾಹು ಯೋಗ

ವೃಶ್ಚಿಕರಾಶಿಯಲ್ಲಿ ಕುಜ ಪ್ರವೇಶವು ಸಪ್ಟೆಂಬರ್ 28ರಂದು ಆಗಿರುತ್ತದೆ. ವೃಶ್ಚಿಕ ರಾಶಿಯಲ್ಲಿ ಸಧ್ಯ ರಾಹುವಿನ ಸಂಚಾರವಿರುತ್ತದೆ. ಕುಜ ಮತ್ತು ರಾಹು ಒಂದೇ ರಾಶಿಯಲ್ಲಿ ಗೋಚಾರ ಒಂದು ವಿಶಿಷ್ಟವಾದ ಯೋಗವನ್ನು ಉಂಟುಮಾಡುತ್ತದೆ. ಈ ಯೋಗದ ಪರಿಣಾಮವು ವಿಶೇಷವಾಗಿ ವೃಶ್ಚಿಕ, ತುಲಾ, ಮೇಷ, ವೃಷಭ ಮತ್ತು ಧನು ರಾಶಿಗಳ ಮೇಲೆ ಆಗಲಿದೆ. ಜಾತಕದಲ್ಲಿ ಕುಜ-ರಾಹುವಿನ ಯೋಗವನ್ನು ಕುಯೋಗವೆಂದೇ ವರ್ಣಿಸಲಾಗುತ್ತದೆ, ಆದರೆ ಗೋಚಾರದಲ್ಲಿ ಇದರ ಪ್ರಭಾವವು ಏನು ಎಂಬುವುದನ್ನು ನೋಡೋಣ. ಕುಜ ಮತ್ತು ರಾಹು ಇಬ್ಬರನ್ನೂ ಸ್ವಾಭಾವಿಕವಾಗಿ ಕ್ರೂರಗ್ರಹರು ಎಂದೇ ಕರೆಯಲಾಗುತ್ತದೆ. “ಶನಿವತ್ ರಾಹು, ಕುಜವತ್ ಕೇತು” ಎಂಬ ಮಾತಿನಂತೆ ರಾಹುವು ಶನಿಗ್ರಹದ ಹಾಗೇ ಫಲವನ್ನು ಕೊಡುತ್ತಾನೆ. ಕುಜ, ಶನಿ ಮತ್ತು ರಾಹುಗಳಿಗೆ ಒಂದೇ ತರಹದ ಗೋಚಾರ ಮತ್ತು ವೇಧಸ್ಥಾನಗಳ ನಿರ್ದೇಶವನ್ನು ಹೇಳಲಾಗಿದೆ. ಎಂದರೆ ಈ ಮೂರೂ ಗ್ರಹಗಳು ಯಾರದೇ ಜನ್ಮರಾಶಿಯಿಂದ 3, 6 ಮತ್ತು 11 ನೇಯವರಾಗಿ ಸಂಚಾರಮಾಡಿದಾಗ ಶುಭಫಲವನ್ನು ಕೊಡುತ್ತಾರೆ, ಉಳಿದ ರಾಶಿಗಳಲ್ಲಿ ಶುಭಾಶುಭವನ್ನು ವಿಚಾರಿಸಿ ಹೇಳಬಹುದು. ಮೇಲೆ ಹೇಳಿದ ಸ್ಥಾನಗಳ ವೇಧಸ್ಥಾನಗಳನ್ನು ನೋಡಬೇಕು. ಈ ವೇಧಸ್ಥಾನಗಳು 12, 3 ಮತ್ತು 5. ಜನ್ಮರಾಶಿಯಿಂದ ಈ ಸ್ಥಾನಗಳಲ್ಲಿ ಒಂದು ವೇಳೆ ಯಾವುದೇ ಗ್ರಹವಿದ್ದರೂ ಕುಜ ಗೋಚಾರವು ಶುಭ ಫಲವನ್ನು ಕೊಡಲಾರದು. ಮಂಗಳನಿಂದ ವ್ಯಕ್ತಿಯ ಸಾಹಸ, ಶಕ್ತಿ, ಸಾಮರ್ಥ್ಯ, ಗುಣ, ವಿರೋಧ, ಸಿಟ್ಟು, ಅಸೂಯೆ, ಕ್ರೂರ ಸ್ವಭಾವ,...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...