Skip to main content

*ಗ್ರಹಗಳು ಜಾತಕನ ಕುಂಡಲಿಯಲ್ಲಿ ಬಲಹೀನರಾಗಿದ್ದರೆ ಉಂಟಾಗುವ ತೊಂದರೆಗಳು ಇವುಗಳ ಪರಿಹಾರಗಳು* ಶುಕ್ರ:-

ಶುಕ್ರ:- ಕುರೂಪಿ,ಕಳಾಹೀನತೆ,ಪ್ರೀತಿವಾತ್ಸಲ್ಯಗಳಿರುವುದಿಲ್ಲ,ಒರಟುತನ,ನೀಚತ್ವ,ವೈವಾಹಿಕ ಅಥವ ದಾಂಪತ್ಯ ಸಮಸ್ಯೆಗಳು,ಪುರುಷರಿಗೆ ಸ್ತ್ರೀಯೊಡನೆ ವಿರಸ,ಸಂಬಂದಗಳು,ಸ್ತ್ರೀಯರಲ್ಲಿ ಕೋಮಲತೆಯ ಗುಣಗಳು ಇಲ್ಲದಿರುವುದು,ದೈಹಿಕ,ಮೂತ್ರಪಿಂಡ ತೊಂದರೆಗಳು,ಅತಿಯಾದ ಲೈಂಗಿಕತೆ,ಮಿತಿಮೀರಿದ ತಿನ್ನುವಿಕೆ,ಕುಡಿತ,ವಯಸ್ಸಾದ ನಂತರವೂ ಇತರ ಹೆಂಗಸ ರೊಡನೆ ಸಂಬಂದಗಳು,ಪತ್ನಿ ಅಥವ ಪರಸ್ತ್ರೀಯರಿಂದ ಸಂಪತ್ತಿನ ಹಾನಿ,ಜಾತಕರಿಗೆ ಹೆಚ್ಚಾಗಿ ಹೆಣ್ಣು ಸಂತಾನ,ಮಾದಕ ದ್ರವ್ಯ ವ್ಯಸನಿ,ತಕ್ಕ ಮಟ್ಟಿಗೆ ಸಂಪಾದನೆ ಇದ್ದರೂ ಸದಾ ಸಾಲಗಾರರು,ಲೈಂಗಿಕ ವ್ಯಾಧಿಗಳು,ತಮ್ಮ ಸ್ಥಾನ ಮಾನಗಳು,ಅಧಿಕಾರಿಗಳಿಂದ ಎಂದೂ ತೃಪ್ತರಲ್ಲ,ಶುಭಸಮಾರಂಭಗಳಲ್ಲಿ ಅನಿರೀಕ್ಷಿತ ಅಪಘಾತಗಳು,ಕಲೆಗಳಲ್ಲಿ ಅಡಚಣೇಗಳು,ಅಶುಭರಿಂದ ೬ ಅಥವ ೮ರಲ್ಲಿ ಶುಕ್ರನು ಬಲಹೀನನಾಗಿರುವುದು. ಪರಿಹಾರಗಳು:- *ಶಚಿದೇವಿ ಅಥವ ಲಕ್ಷ್ಮಿಯನ್ನು ಪೂಜಿಸಿರಿ. *ಸದಾ ಶುಭ್ರರಾಗಿರಿ. *ಪತ್ನಿಯನ್ನು ಸಂತೋಷದಿಂದ ಇರಿಸಿಕೊಳ್ಳಿ. *೮ಕಿಲೋ ಮೂಲಂಗಿಯನ್ನು ದೇವಾಲಯಕ್ಕೆ ದಾನ ಮಾಡಿ. *೨೫ ನೇ ವಯಸ್ಸಿನ ನಂತರ ವಿವಾಹ ಮಾಡಿಕೊಳ್ಳಿ. *ಹಸುವಿನ ತುಪ್ಪ,ಮೊಸರು,ಕರ್ಪೂರ,ಮುತ್ತು,ಬಿಳಿಯ ಬಟ್ಟೆ ಅಥವ ಸೌಂದರ್ಯ ಸಾಧನಗಳನ್ನು ದಾನಮಾಡಿ. *ಕರಿ ಹಸುವಿಗೆ ಜೋಳ,ಹಸಿಹುಲ್ಲು,೨ಕಿಲೋ ಆಲೂಗಡ್ಡೆ ಅಥವ ಅರಿಸಿನ ಮಿಶ್ರಿತ ಹಿಟ್ಟನ್ನು ತಿನ್ನಿಸಿ. *ಚಿಕ್ಕ ಬೆಳ್ಳಿಯ ಗುಂಡನ್ನು ಮನೆಯಲ್ಲಿ ಇಟ್ಟುಕೊಳ್ಳಿ. *ಮನೆಗೆ ಪಶ್ಚಿಮ ದಿಕ್ಕಿನಲ್ಲಿ ಕಸಕ್ಕಾಗಿ ಒಂದು ಬುಟ್ಟಿಯನ್ನು ಇಡಿ. *ಮಗುವನ್ನು ದತ್ತು ತೆಗೆದುಕೊಳ್ಳಬೇಡಿ. *ಪತ್ನಿಗೆ ಅನಾರೋಗ್ಯವಾಗಿದ್ದರೆ ಆಕೆಯ ತೂಕದಷ್ಟು ಬೆಲ್ಲವನ್ನು ದೇವಾಲಯಕ್ಕೆ ದಾನ ಮಾಡಿ. *೬ದಿನಗಳ ಕಾಲ ಕನ್ಯಾಮುತೈದೆಯರಿಗೆ ಹಾಲು ಮತ್ತು ಜೇನು ನೀಡಿರಿ. *ಯಾವುದೇ ಕೆಲಸದ ಪ್ರಾರಂಭದಲ್ಲಿಯೂ ಸ್ವಲ್ಪ ಸಿಹಿ ಮತ್ತು ನೀರನ್ನು ಸೇವಿಸಿರಿ. *ಬೆಳ್ಳಿಯ ಚಿಕ್ಕ ಫಲಕವನ್ನು ಬೇವಿನ ಮರದಡಿ ಹುದುಗಿಸಿ. *ಬೆಳ್ಳಿಯ ಚೂರನ್ನು ಜೇನಿನೊಂದಿಗೆ ನೆಲದಲ್ಲಿ ಹುದುಗಿಸಿ,ಮಗಳ ಮದುವೆಯಕಾಲದಲ್ಲಿ ಅಳಿಯನಿಗೆ ೨ಬಂಗಾರದ ಚೂರುಗಳನ್ನು ಸಂಕಲ್ಪಿಸಿಕೊಡಬೇಕು.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ವೃಶ್ಚಿಕರಾಶಿಯಲ್ಲಿ ಕುಜ-ರಾಹು ಯೋಗ

ವೃಶ್ಚಿಕರಾಶಿಯಲ್ಲಿ ಕುಜ ಪ್ರವೇಶವು ಸಪ್ಟೆಂಬರ್ 28ರಂದು ಆಗಿರುತ್ತದೆ. ವೃಶ್ಚಿಕ ರಾಶಿಯಲ್ಲಿ ಸಧ್ಯ ರಾಹುವಿನ ಸಂಚಾರವಿರುತ್ತದೆ. ಕುಜ ಮತ್ತು ರಾಹು ಒಂದೇ ರಾಶಿಯಲ್ಲಿ ಗೋಚಾರ ಒಂದು ವಿಶಿಷ್ಟವಾದ ಯೋಗವನ್ನು ಉಂಟುಮಾಡುತ್ತದೆ. ಈ ಯೋಗದ ಪರಿಣಾಮವು ವಿಶೇಷವಾಗಿ ವೃಶ್ಚಿಕ, ತುಲಾ, ಮೇಷ, ವೃಷಭ ಮತ್ತು ಧನು ರಾಶಿಗಳ ಮೇಲೆ ಆಗಲಿದೆ. ಜಾತಕದಲ್ಲಿ ಕುಜ-ರಾಹುವಿನ ಯೋಗವನ್ನು ಕುಯೋಗವೆಂದೇ ವರ್ಣಿಸಲಾಗುತ್ತದೆ, ಆದರೆ ಗೋಚಾರದಲ್ಲಿ ಇದರ ಪ್ರಭಾವವು ಏನು ಎಂಬುವುದನ್ನು ನೋಡೋಣ. ಕುಜ ಮತ್ತು ರಾಹು ಇಬ್ಬರನ್ನೂ ಸ್ವಾಭಾವಿಕವಾಗಿ ಕ್ರೂರಗ್ರಹರು ಎಂದೇ ಕರೆಯಲಾಗುತ್ತದೆ. “ಶನಿವತ್ ರಾಹು, ಕುಜವತ್ ಕೇತು” ಎಂಬ ಮಾತಿನಂತೆ ರಾಹುವು ಶನಿಗ್ರಹದ ಹಾಗೇ ಫಲವನ್ನು ಕೊಡುತ್ತಾನೆ. ಕುಜ, ಶನಿ ಮತ್ತು ರಾಹುಗಳಿಗೆ ಒಂದೇ ತರಹದ ಗೋಚಾರ ಮತ್ತು ವೇಧಸ್ಥಾನಗಳ ನಿರ್ದೇಶವನ್ನು ಹೇಳಲಾಗಿದೆ. ಎಂದರೆ ಈ ಮೂರೂ ಗ್ರಹಗಳು ಯಾರದೇ ಜನ್ಮರಾಶಿಯಿಂದ 3, 6 ಮತ್ತು 11 ನೇಯವರಾಗಿ ಸಂಚಾರಮಾಡಿದಾಗ ಶುಭಫಲವನ್ನು ಕೊಡುತ್ತಾರೆ, ಉಳಿದ ರಾಶಿಗಳಲ್ಲಿ ಶುಭಾಶುಭವನ್ನು ವಿಚಾರಿಸಿ ಹೇಳಬಹುದು. ಮೇಲೆ ಹೇಳಿದ ಸ್ಥಾನಗಳ ವೇಧಸ್ಥಾನಗಳನ್ನು ನೋಡಬೇಕು. ಈ ವೇಧಸ್ಥಾನಗಳು 12, 3 ಮತ್ತು 5. ಜನ್ಮರಾಶಿಯಿಂದ ಈ ಸ್ಥಾನಗಳಲ್ಲಿ ಒಂದು ವೇಳೆ ಯಾವುದೇ ಗ್ರಹವಿದ್ದರೂ ಕುಜ ಗೋಚಾರವು ಶುಭ ಫಲವನ್ನು ಕೊಡಲಾರದು. ಮಂಗಳನಿಂದ ವ್ಯಕ್ತಿಯ ಸಾಹಸ, ಶಕ್ತಿ, ಸಾಮರ್ಥ್ಯ, ಗುಣ, ವಿರೋಧ, ಸಿಟ್ಟು, ಅಸೂಯೆ, ಕ್ರೂರ ಸ್ವಭಾವ,...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...