Skip to main content

*ಗ್ರಹಗಳು ಜಾತಕನ ಕುಂಡಲಿಯಲ್ಲಿ ಬಲಹೀನರಾಗಿದ್ದರೆ ಉಂಟಾಗುವ ತೊಂದರೆಗಳು ಇವುಗಳ ಪರಿಹಾರಗಳು* ಕೇತು:-

ಕೇತು:- ವಿವೇಚನಾ ರಹಿತರು,ತಮ್ಮಲ್ಲೇ ನಂಬಿಕೆಯನ್ನು ಕಲೆದುಕೊಂಡವರು,ಆತ್ಮಘಾತುಕ ಮನೋಬಾವ,ಕ್ರೌರ್ಯದಿಂದ ಗಾಯಗೊಳ್ಳುವವರು,ಗುಂಪುಘರ್ಷಣೆಯಲ್ಲಿ ತೊಂದರೆಗೆ ಸಿಲುಕುತ್ತಾರೆ.ನಿರರ್ಥಕ ಕೆಲಸಗಳಲ್ಲಿ ಕಾಲಕಳೆಯುವವರು,ಅಲ್ಸರ್,ಅಜೀರ್ಣ,ಎಲ್ಲಾ ರೀತಿಯ ಹುಳುಗಳಿಂದ ಹೊಟ್ಟೆಯಲ್ಲಿ ತೊಂದರೆ ದೀರ್ಘಕಾಲಿಕ ಕಾಯಿಲೆಗಳಿಂದ ನರಳುವವರು ಮಗನಿಗೆ ಅಪಾಯ ವಿರುತ್ತದೆ,ಭ್ರಮೆಗಳಿಂದ ಭೀತರು,ಮೊಣಕಾಲುಗಳಿಗೆ ಆಗಾಗ ಅಪಾಯ ಉಂಟಾಗುತ್ತಿರುತ್ತದೆ,೧೦೦ದಿನಗಳಿಗೂ ಹೆಚ್ಚಾಗಿ ಕೆಲಸದ ಮೇಲೆ ಹೋಗಬೇಕಾಗುವುದು.ಮೂತ್ರದ ಅಥವ ಮಾನಸಿಕ ತೊಂದರೆಗಳಿಂದ ಅಥವ ತಿಳಿಯಲಾರದ ಕಾಯಿಲೆಗಳಿಂದ ನರಳುವರು.ಆಗಾಗ ಆತ್ಮಹತ್ಯ ಮನೋಬಾವನೆ,ಸುಳಿಯುತ್ತಿರುತ್ತದೆ,ಪ್ಲೀಹದ ತೊಂದರೆ,ಜಲೋದರ,ಸಾಂಕ್ರಾಮಿಕ ತೀವ್ರತರವಾದ ಜ್ವರ,ಗಾಯಗಳಿಂದ ಪಾದಗಳಲ್ಲಿ ಉರಿ,ಸಂದಿವಾತ,ಕುಷ್ಟ ಅಥವ ಚರ್ಮವ್ಯಾಧಿಗಳಿಂದ ಬೆನ್ನು ನೋವು,ಕಿವಿನೋವು,ಹರ್ನಿಯಾ,ಗಡ್ಡೆ ಅಥವ ನಾಭಿಯ ಕೆಳಗೆಡೆಯ ಕಾಯಿಲೆಗಳಿಂದ ನರಳುವವರು,ಕೇತುವು ೨,೮,೧೧ನೇ ಸ್ಥಾನಗಳಲ್ಲಿ ಬಲಹೀನನಾಗುತ್ತಾನೆ. ಪರಿಹಾರೋಪಾಯಗಳು:- *ಗಣಪತಿಯನ್ನು ಆರಾಧಿಸಿರಿ *ಕರಿ ನಾಯಿ ಸಾಕಿಕೊಳ್ಳಿರಿ *ಬಿಳಿ ಅಥವ ಕಪ್ಪು ಕಂಬಳಿಯನ್ನು ದೇವಾಲಯಕ್ಕೆ ಅಥವ ಸಾಧುವಿಗೆ ನೀಡಿ. *ಮಕ್ಕಳ ಒಳಿತಿಗಾಗಿ ಹಾಲು,ಅಕ್ಕಿ,ಕೆಂಪು ಬೇಳೆ,ಕಲ್ಲು ಸಕ್ಕರೆ,ಜೇನು ತುಪ್ಪ, ದಾನ ಮಾಡಿ. *ವರದಕ್ಷಿಣೆಯಾಗಿ ಬಂದ ಹಾಸಿಗೆಯ ಮೇಲೆ ಮಲಗಿರಿ *ಕಿವಿಯನ್ನು ಚುಚ್ಚಿಸಿಕೊಂಡು ಬಂಗಾರದ ಉಂಗುರವನ್ನು ಹಾಕಿಕೊಳ್ಳಿ. *ಎರಡು ಒಂದೇ ಆಕಾರದ ಬೆಣಚಕಲ್ಲುಗಳನ್ನು ತಗೆದುಕೊಂಡು ಒಂದನ್ನು ಹರಿಯುವ ನೀರಲ್ಲಿ ಹಾಕಿ ಮತ್ತೊಂದನ್ನು ನಿಮ್ಮ ಬಳಿಯೇ ಇಟ್ಟುಕೊಳ್ಳಿ (ರವಿಯು ೪ನೇ ಸ್ಥಾನದಲ್ಲಿದ್ದರೆ ಬಾವಿಯಲ್ಲಿ ಹಾಕಿ. *ಕಾಲಿನ ಹೆಬ್ಬೆರಳಿಗೆ ಬೆಳ್ಳಿಯ ಉಂಗುರವನ್ನು ಹಾಕಿಕೊಳ್ಳಿ. *ಬಂಗಾರದ ಸರವನ್ನು ಕೊರಳಿಗೆ ಹಾಕಿಕೊಳ್ಳಿ,ಕೇಸರಿಯನ್ನು ಹಣೆಗೆ ಹಚ್ಚಿಕೊಳ್ಳಿ. *ಮನೆಯ ಗೇಟಿನ ಕಂಬಕ್ಕೆ ತಾಮ್ರದ ತಗಡನ್ನು ಹಾಕಿರಿ. *ನಿಮ್ಮ ಸಂಪಾದನೆಯಲ್ಲಿ ಸ್ವಲ್ಪ ನಿಮ್ಮ ಬಾವಮೈದುನ,ಸೋದರಿಯ ಮಗ/ಮಗಳಿಗೆ ನೀಡಿ. *ಮಕ್ಕಳ ಒಳಿತಿಗಾಗಿ ಕಡಲೆಕಾಳು ಮತ್ತು ಕೇಸರಿಯನ್ನು ದೇವಸ್ಥಾನಕ್ಕೆ ಗುರುವಾರ ದಂದು ದಾನ ಕೊಡಿ ೧೦೦ ದಿನಗಳಿಗೂ ಹೆಚ್ಚಾಗಿ ಕೆಲಸದ ಮೇಲೆ ಹೊರಗೆ ಹೋಗಬೇಕಾಗಿ ಬಂದರೆ ಹರಿವ ನೀರಿನಲ್ಲಿ ತಾಮ್ರದ ನಾಣ್ಯಗಳನ್ನು ಹಾಕಿರಿ. *ಬೆಳ್ಳಿಯ ಕೊಡದಲ್ಲಿ ಜೇನು ತುಪ್ಪವನ್ನು ತುಂಬಿ ಮನೆಯ ಹೊರಗಡೆ ಹುದುಗಿಸಿ. *ಮಕ್ಕಳಿಲ್ಲದವರಿಂದ ಭೂಮಿಯನ್ನು ಕೊಂಡು ಅಲ್ಲಿ ಮನೆಯನ್ನು ಕಟ್ಟದಿರಿ. *೮ನೇ ಸ್ಥಾನದಲ್ಲಿ ಕೇತುವು ಕಲುಶಿತನಾಗಿದ್ದರೆ ಶಿವನಿಗೆ ಕ್ಷೀರಾಭಿಷೇಕ ಮಾಡಿಸಿರಿ.ಅಥವ ನಿಂಬೇ ಹಣ್ಣನ್ನು ದಾರ್ಮಿಕ ಸ್ಥಳಗಳಲ್ಲಿ ದಾನ ಮಾಡಿ,ನಾಯಿಗೆ ೧೫ ದಿನಗಳ ಕಾಲ ಹಾಲನ್ನು ಹಾಕಿರಿ.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ವೃಶ್ಚಿಕರಾಶಿಯಲ್ಲಿ ಕುಜ-ರಾಹು ಯೋಗ

ವೃಶ್ಚಿಕರಾಶಿಯಲ್ಲಿ ಕುಜ ಪ್ರವೇಶವು ಸಪ್ಟೆಂಬರ್ 28ರಂದು ಆಗಿರುತ್ತದೆ. ವೃಶ್ಚಿಕ ರಾಶಿಯಲ್ಲಿ ಸಧ್ಯ ರಾಹುವಿನ ಸಂಚಾರವಿರುತ್ತದೆ. ಕುಜ ಮತ್ತು ರಾಹು ಒಂದೇ ರಾಶಿಯಲ್ಲಿ ಗೋಚಾರ ಒಂದು ವಿಶಿಷ್ಟವಾದ ಯೋಗವನ್ನು ಉಂಟುಮಾಡುತ್ತದೆ. ಈ ಯೋಗದ ಪರಿಣಾಮವು ವಿಶೇಷವಾಗಿ ವೃಶ್ಚಿಕ, ತುಲಾ, ಮೇಷ, ವೃಷಭ ಮತ್ತು ಧನು ರಾಶಿಗಳ ಮೇಲೆ ಆಗಲಿದೆ. ಜಾತಕದಲ್ಲಿ ಕುಜ-ರಾಹುವಿನ ಯೋಗವನ್ನು ಕುಯೋಗವೆಂದೇ ವರ್ಣಿಸಲಾಗುತ್ತದೆ, ಆದರೆ ಗೋಚಾರದಲ್ಲಿ ಇದರ ಪ್ರಭಾವವು ಏನು ಎಂಬುವುದನ್ನು ನೋಡೋಣ. ಕುಜ ಮತ್ತು ರಾಹು ಇಬ್ಬರನ್ನೂ ಸ್ವಾಭಾವಿಕವಾಗಿ ಕ್ರೂರಗ್ರಹರು ಎಂದೇ ಕರೆಯಲಾಗುತ್ತದೆ. “ಶನಿವತ್ ರಾಹು, ಕುಜವತ್ ಕೇತು” ಎಂಬ ಮಾತಿನಂತೆ ರಾಹುವು ಶನಿಗ್ರಹದ ಹಾಗೇ ಫಲವನ್ನು ಕೊಡುತ್ತಾನೆ. ಕುಜ, ಶನಿ ಮತ್ತು ರಾಹುಗಳಿಗೆ ಒಂದೇ ತರಹದ ಗೋಚಾರ ಮತ್ತು ವೇಧಸ್ಥಾನಗಳ ನಿರ್ದೇಶವನ್ನು ಹೇಳಲಾಗಿದೆ. ಎಂದರೆ ಈ ಮೂರೂ ಗ್ರಹಗಳು ಯಾರದೇ ಜನ್ಮರಾಶಿಯಿಂದ 3, 6 ಮತ್ತು 11 ನೇಯವರಾಗಿ ಸಂಚಾರಮಾಡಿದಾಗ ಶುಭಫಲವನ್ನು ಕೊಡುತ್ತಾರೆ, ಉಳಿದ ರಾಶಿಗಳಲ್ಲಿ ಶುಭಾಶುಭವನ್ನು ವಿಚಾರಿಸಿ ಹೇಳಬಹುದು. ಮೇಲೆ ಹೇಳಿದ ಸ್ಥಾನಗಳ ವೇಧಸ್ಥಾನಗಳನ್ನು ನೋಡಬೇಕು. ಈ ವೇಧಸ್ಥಾನಗಳು 12, 3 ಮತ್ತು 5. ಜನ್ಮರಾಶಿಯಿಂದ ಈ ಸ್ಥಾನಗಳಲ್ಲಿ ಒಂದು ವೇಳೆ ಯಾವುದೇ ಗ್ರಹವಿದ್ದರೂ ಕುಜ ಗೋಚಾರವು ಶುಭ ಫಲವನ್ನು ಕೊಡಲಾರದು. ಮಂಗಳನಿಂದ ವ್ಯಕ್ತಿಯ ಸಾಹಸ, ಶಕ್ತಿ, ಸಾಮರ್ಥ್ಯ, ಗುಣ, ವಿರೋಧ, ಸಿಟ್ಟು, ಅಸೂಯೆ, ಕ್ರೂರ ಸ್ವಭಾವ,...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...