Skip to main content

ಆರೋಗ್ಯಕರ ಜೀವನಕ್ಕಾಗಿ 12 ಸರಳ ಸೂತ್ರಗಳು

ಆರೋಗ್ಯಕರ ಜೀವನಕ್ಕಾಗಿ 12 ಸರಳ ಸೂತ್ರಗಳು ಜೀವನದಲ್ಲಿ ಕಾಯಿಲೆ ಕಸಾಲೆಗಳು ಸಾಮನ್ಯ. ಆದರೆ ನಮ್ಮ ಜೀವನ ಕ್ರಮ ಕಾಯಿಲೆಯನ್ನು ಹೆಚ್ಚು ಮಾಡುವಲ್ಲಿ ಅಥವಾ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಚಿಕ್ಕ ಪುಟ್ಟ ಕಾಯಿಲೆ ಬರುವಾಗಲೇ ಅದರ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣ ಪಡಿಸಬಹುದು. ಆದರೆ ಸಣ್ಣ ಪುಟ್ಟ ಕಾಯಿಲೆಗಳನ್ನು ಹಾಗೇ ಬಿಟ್ಟರೆ ಅವು ದೊಡ್ಡ ಸಮಸ್ಯೆಯಾಗಿ ಉದ್ಭವವಾಗುತ್ತದೆ. ಉದಾಹರಣೆಗೆ ನಿದ್ರಾ ಹೀನತೆ. ಇದನ್ನು ಆರಂಭದಲ್ಲಿಯೇ ಗುಣ ಪಡಿಸದಿದ್ದರೆ ಮುಂದೆ ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ಕೆಲವೊಂದು ಸಮಸ್ಯೆಗಳಿಗೆ ಮನೆ ಔಷಧಿಯಿಂದ ಪರಿಹಾರ ಕಾಣಬಹುದು. ಈ ಕೆಳಗ್ಗೆ ಕೆಲ ಸಲಹೆಗಳನ್ನು ನೀಡಲಾಗಿದೆ. ಅವುಗಳು ನಿಮ್ಮನ್ನು ಆರೋಗ್ಯವಂತರಾಗಿ ಇಡುವಲ್ಲಿ ಸಹಕಾರಿಯಾಗಿದೆ. 1. ಪ್ರತಿದಿನ ಹಸಿ ಕರಿ ಬೇವಿನ ಎಲೆ ತಿಂದರೆ ಅಕಾಲಿಕ ಮುಪ್ಪು ಉಂಟಾಗುವುದಿಲ್ಲ. ಅಲ್ಲದೆ ಇದನ್ನು ತಿಂದರೆ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ. 2. ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಇದ್ದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ಉತ್ತಮ ಪ್ರಯೋಜನವನ್ನು ಕಾಣಬಹುದು. 3. ಅಜೀರ್ಣತೆ ಉಂಟಾದರೆ 2-3 ಬೆಳ್ಳುಳ್ಳಿ ಎಸಳುಗಳನ್ನು ತೆಗೆದುಕೊಂಡು ಜಜ್ಜಿ, ಅದನ್ನು ಹಾಲಿನಲ್ಲಿ ಹಾಕಿ ಕುದಿಸಿ ಕುಡಿದರೆ ತಕ್ಷಣ ಗುಣವಾಗುವುದು. 4. ನಿದ್ದೆ ಸರಿಯಾಗಿ ಬರದಿದ್ದರೆ ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಅರೆದು ಅದರಿಂದ ಜ್ಯೂಸ್ ಮಾಡಿ ಕುಡಿದರೆ ತಕ್ಷಣ ನಿದ್ದೆ ಬರುತ್ತದೆ. 5. ಕೊತ್ತಂಬರಿ ಸೊಪ್ಪಿನ ರಸವನ್ನು ಮೊಸರಿನಲ್ಲಿ ಹಾಕಿ ಮಿಶ್ರ ಮಾಡಿ ಕುಡಿದರೆ ಅಜೀರ್ಣ ಸಮಸ್ಯೆ ನಿವಾರಣೆಯಾಗುವುದು. 6. ರಕ್ತಹೀನತೆ ಉಂಟಾಗಿದ್ದರೆ ಮೆಂತೆಯನ್ನು ನೀರಿನಲ್ಲಿ ನೆನೆ ಹಾಕಿ ಪ್ರತಿದಿನ ಬೆಳಗ್ಗೆ ತಿಂದರೆ ಒಳ್ಳೆಯದು. ಬೀಟ್ ರೂಟ್ ತಿನ್ನುವುದು ಮತ್ತು ಕಬ್ಬಿಣದಂಶವಿರುವ ಆಹಾರಗಳ ಸೇವನೆ ಒಳ್ಳೆಯದು. 7. ಶೀತವಾಗಿದ್ದರೆ ಶುಂಠಿ ರಸವನ್ನು ಜೇನು ಮತ್ತು ತುಳಸಿ ರಸದ ಜೊತೆ ಮಿಶ್ರ ಮಾಡಿ ಅದಕ್ಕೆ ಎರಡು ಕಾಳು ಕರಿಮೆಣಸಿನ ಪುಡಿ ಹಾಕಿ ಮಿಶ್ರ ಮಾಡಿದರೆ ಸೇವಿಸಿದರೆ ಒಳ್ಳೆಯದು. 8. ಅಸಿಡಿಟಿ ಇದ್ದರೆ ನಿಂಬೆ ಪಾನಕದ ಜೊತೆ ಶೂಂಠಿ ರಸ ಮಿಶ್ರ ಮಾಡಿ ಕುಡಿಯುವುದು ಒಳ್ಳೆಯದು. 9. ಪುದೀನಾ ಜೀರ್ಣ ಕ್ರಿಯೆಗೆ ಒಳ್ಳೆಯದು. 10. ಅಸ್ತಮಾ ಖಾಯಿಲೆಗೆ 3-4 ಎಸಳು ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿಗೆ ಹಾಕಿ ಕಾಯಿಸಿ ರಾತ್ರಿ ಕುಡಿಯುವುದು ಒಳ್ಳೆಯದು. 11. ಬಾಳೆ ಹಣ್ಣು ಕಿಡ್ನಿಯಲ್ಲಿರುವ ಕಶ್ಮಲಗಳನ್ನು ತೆಗೆದುಹಾಕಲು ಮತ್ತು ಮಲಬದ್ಧತೆ ಸಮಸ್ಯೆಯನ್ನು ತೊಡೆದು ಹಾಕಲು ಸಹಕಾರಿಯಾಗಿದೆ. ಪ್ರತಿನಿತ್ಯ ಒಂದು ಬಾಳೆಹಣ್ಣು ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರೆಯುತ್ತದೆ. ಆದರೆ ತುಂಬಾ ಬಾಳೆಹಣ್ಣು ತಿಂದರೆ ದೇಹದ ತೂಕ ಹೆಚ್ಚಾಗುವುದು. ಬಾಳೆಹಣ್ಣು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. 12. ಓಟ್ ಮೀಲ್ಸ್ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆ ಮಾಡಲು ಸಹಕಾರಿಯಾಗಿದೆ.ಇದನ್ನು ಬೆಳಗ್ಗಿನ ತಿಂಡಿಯಾಗಿ ಸೇವಿಸಿದರೆ ಬೇಗನೆ ತೆಳ್ಳಗಾಗಬಹುದು. ಚಿಕ್ಕ ಪುಟ್ಟ ಕಾಯಿಲೆಗೆ ಆಸ್ಪತ್ರೆಗೆ ಹೋಗುವ ಬದಲು ಈ ಮೇಲಿನ ಸಲಹೆಗಳನ್ನು ಅನುಸರಿಸಿದರೆ ಕಾಯಿಲೆ ಗುಣಮುಖವಾಗುವುದು ಮತ್ತು ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ವೃಶ್ಚಿಕರಾಶಿಯಲ್ಲಿ ಕುಜ-ರಾಹು ಯೋಗ

ವೃಶ್ಚಿಕರಾಶಿಯಲ್ಲಿ ಕುಜ ಪ್ರವೇಶವು ಸಪ್ಟೆಂಬರ್ 28ರಂದು ಆಗಿರುತ್ತದೆ. ವೃಶ್ಚಿಕ ರಾಶಿಯಲ್ಲಿ ಸಧ್ಯ ರಾಹುವಿನ ಸಂಚಾರವಿರುತ್ತದೆ. ಕುಜ ಮತ್ತು ರಾಹು ಒಂದೇ ರಾಶಿಯಲ್ಲಿ ಗೋಚಾರ ಒಂದು ವಿಶಿಷ್ಟವಾದ ಯೋಗವನ್ನು ಉಂಟುಮಾಡುತ್ತದೆ. ಈ ಯೋಗದ ಪರಿಣಾಮವು ವಿಶೇಷವಾಗಿ ವೃಶ್ಚಿಕ, ತುಲಾ, ಮೇಷ, ವೃಷಭ ಮತ್ತು ಧನು ರಾಶಿಗಳ ಮೇಲೆ ಆಗಲಿದೆ. ಜಾತಕದಲ್ಲಿ ಕುಜ-ರಾಹುವಿನ ಯೋಗವನ್ನು ಕುಯೋಗವೆಂದೇ ವರ್ಣಿಸಲಾಗುತ್ತದೆ, ಆದರೆ ಗೋಚಾರದಲ್ಲಿ ಇದರ ಪ್ರಭಾವವು ಏನು ಎಂಬುವುದನ್ನು ನೋಡೋಣ. ಕುಜ ಮತ್ತು ರಾಹು ಇಬ್ಬರನ್ನೂ ಸ್ವಾಭಾವಿಕವಾಗಿ ಕ್ರೂರಗ್ರಹರು ಎಂದೇ ಕರೆಯಲಾಗುತ್ತದೆ. “ಶನಿವತ್ ರಾಹು, ಕುಜವತ್ ಕೇತು” ಎಂಬ ಮಾತಿನಂತೆ ರಾಹುವು ಶನಿಗ್ರಹದ ಹಾಗೇ ಫಲವನ್ನು ಕೊಡುತ್ತಾನೆ. ಕುಜ, ಶನಿ ಮತ್ತು ರಾಹುಗಳಿಗೆ ಒಂದೇ ತರಹದ ಗೋಚಾರ ಮತ್ತು ವೇಧಸ್ಥಾನಗಳ ನಿರ್ದೇಶವನ್ನು ಹೇಳಲಾಗಿದೆ. ಎಂದರೆ ಈ ಮೂರೂ ಗ್ರಹಗಳು ಯಾರದೇ ಜನ್ಮರಾಶಿಯಿಂದ 3, 6 ಮತ್ತು 11 ನೇಯವರಾಗಿ ಸಂಚಾರಮಾಡಿದಾಗ ಶುಭಫಲವನ್ನು ಕೊಡುತ್ತಾರೆ, ಉಳಿದ ರಾಶಿಗಳಲ್ಲಿ ಶುಭಾಶುಭವನ್ನು ವಿಚಾರಿಸಿ ಹೇಳಬಹುದು. ಮೇಲೆ ಹೇಳಿದ ಸ್ಥಾನಗಳ ವೇಧಸ್ಥಾನಗಳನ್ನು ನೋಡಬೇಕು. ಈ ವೇಧಸ್ಥಾನಗಳು 12, 3 ಮತ್ತು 5. ಜನ್ಮರಾಶಿಯಿಂದ ಈ ಸ್ಥಾನಗಳಲ್ಲಿ ಒಂದು ವೇಳೆ ಯಾವುದೇ ಗ್ರಹವಿದ್ದರೂ ಕುಜ ಗೋಚಾರವು ಶುಭ ಫಲವನ್ನು ಕೊಡಲಾರದು. ಮಂಗಳನಿಂದ ವ್ಯಕ್ತಿಯ ಸಾಹಸ, ಶಕ್ತಿ, ಸಾಮರ್ಥ್ಯ, ಗುಣ, ವಿರೋಧ, ಸಿಟ್ಟು, ಅಸೂಯೆ, ಕ್ರೂರ ಸ್ವಭಾವ,...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...