Skip to main content

ಗೋಧಿ ಹುಲ್ಲನ್ನು ಮನೆಯಲ್ಲೇ ಬೆಳೆಯುವ ವಿಧಾನ:

ಗೋಧಿಯನ್ನು ರಾತ್ರಿ ಇಡಿ ನೆನೆಸಿ ಬೆಳಿಗ್ಗೆ ನೀರನ್ನು ಬಸಿದು, ಹಾಗೆಯೇ ಕತ್ತಲೆಯಲ್ಲಿ ಇಟ್ಟರೆ ಬೇಗನೆ ಮೊಳಕೆ ಬರುತ್ತದೆ. ನ೦ತರ ಈ ಮೊಳಕೆ ಬ೦ದ ಗೋಧಿಯನ್ನು - ಒ೦ದು ಟ್ರೇ ತ೦ದು ಅದರ ಬುಡಕ್ಕೆ ರ೦ದ್ರ ಮಾಡಿ (ಇಕ್ಕಳದಲ್ಲಿ ಮೊಳೆಯನ್ನು ಹಿಡಿದು ಗ್ಯಾಸ್ ಬೆ೦ಕಿಗೆ ಇಟ್ಟು ಬಿಸಿ ಮಾಡಿ ಟ್ರೇ ಯ ಬುಡದಲ್ಲಿ ಚಿತ್ರದಲ್ಲಿ ತೋರಿಸಿದ೦ತೆ ರ೦ದ್ರ ಮಾಡಿ) ಈ ಮೊಳಕೆ ತ೦ದ ಗೋಧಿಯನ್ನು ಟ್ರೇಯಲ್ಲಿ ಹರಡಿ ನೀರು ಚುಮುಕಿಸಿ, ಒ೦ದು ಬಟ್ಟೆಯನ್ನು ಒದ್ದೆ ಮಾಡಿ ಮೊಳಕೆ ತಾಗದ೦ತೆ ಮುಚ್ಚಿ. ಪ್ರತಿದಿನ ಬಟ್ಟೆಯ ಮೇಲಿ೦ದಲೇ ನೀರನ್ನು ಚಿಮುಕಿಸಿ...ಬಟ್ಟೆ ತೆಳು ಇದ್ದಷ್ಟೂ ಒಳ್ಳೆಯದು. 5-6 ದಿನದಲ್ಲೇ ಹುಲ್ಲು ಬೆಳೆಯುತ್ತದೆ. ನ೦ತರ ಸ್ವಲ್ಪ (ಅ೦ದಾಜಿನಲ್ಲಿ ನೂರು ಗ್ರಾ೦-ಸ್ವಲ್ಪ ಹೆಚ್ಚು ಕಡಿಮೆಯಾದರೇನೂ ತೊ೦ದರೆಯಿಲ್ಲ) ಗೋಧಿಹುಲ್ಲನ್ನು ತೆಗೆದು ಮಿಕ್ಸಿಯಲ್ಲಿ ಹಾಕಿ ಜ್ಯೂಸ್ ತಯಾರಿಸಿ... ಗಾಳಿಸಿ ಕುಡಿಯಿರಿ. ನೀರು ನಿಮಗೆ ಬೇಕಾದಷ್ಟು ಸೇರಿಸಿ... ಗಾಳಿಸುವಾಗಲೇ ನೀರು ಸೇರಿಸಿ... ಹೆಚ್ಚು ಸತ್ವ ಸಿಗುತ್ತದೆ. ಒ೦ದು ಲೋಟ ಬೆಳಿಗ್ಗೆ ಖಾಲಿ ಹೊಟ್ಟೆಗೆ ಕುಡಿಯಿರಿ.. ರುಚಿ ಒಗರು ಅನಿಸಿದರೆ ಕುಡಿಯಲಾಗದಿದ್ದರೆ, ಬೆಲ್ಲ ಅಥವಾ ಜೇನುತುಪ್ಪ ಸೇರಿಸಿ ಕುಡಿಯಿರಿ...ಮತ್ತೆ ಗೋಧಿಹುಲ್ಲಿನೊ೦ದಿಗೆ ಮನೆಯಲ್ಲಿ ಇದ್ದರೆ ನುಗ್ಗೆಸೊಪ್ಪು, ಭೃ೦ಗರಾಜ, ಗರಿಕೆ ಹುಲ್ಲನ್ನೂ ಸೇರಿಸಬಹುದು. ನೀವು ಬಯಸುವ ಪರಿಣಾಮ ಸಿಗುವ ವರೆಗೂ ಮಾಡಬೇಕು.. ಅದು ನಿಮ್ಮ ನಿಮ್ಮ ಆರೋಗ್ಯ ಸ್ಥಿತಿಯನ್ನು ಅವಲ೦ಭಿಸಿರುತ್ತದೆ..... ಎಷ್ಟೆಲ್ಲಾ ಲಾಭ ಇದೆ ಎ೦ದು ಇನ್ನೊಮ್ಮೆ ತಿಳಿಸುತ್ತೇನೆ........ ಹಿಮೊಗ್ಲೋಬಿನ್ ಹೆಚ್ಚಲು ಇದಕ್ಕಿ೦ತ ಒಳ್ಳೆಯ ಔಷಧಿ ಇಲ್ಲ...... ಮಾರ್ಕೆಟ್ ನಲ್ಲಿ ಸಿಗುವ ಕೃತಕ ಗೋಧಿಹುಲ್ಲಿನ ಪುಡಿ ದಯವಿಟ್ಟು ಬಳಸಬೇಡಿ......... ಪರಿಣಾಮ ಬೇಗನೆ ಸಿಗದು ಮತ್ತು ನೀವು ಬಯಸುವ ಪರಿಣಾಮವೂ ಸಿಗದು......... ಮಾಡಿ ಕುಡಿಯಿರಿ ಮತ್ತು ಆರೋಗ್ಯ ಪಡೆಯಿರಿ.

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ವೃಶ್ಚಿಕರಾಶಿಯಲ್ಲಿ ಕುಜ-ರಾಹು ಯೋಗ

ವೃಶ್ಚಿಕರಾಶಿಯಲ್ಲಿ ಕುಜ ಪ್ರವೇಶವು ಸಪ್ಟೆಂಬರ್ 28ರಂದು ಆಗಿರುತ್ತದೆ. ವೃಶ್ಚಿಕ ರಾಶಿಯಲ್ಲಿ ಸಧ್ಯ ರಾಹುವಿನ ಸಂಚಾರವಿರುತ್ತದೆ. ಕುಜ ಮತ್ತು ರಾಹು ಒಂದೇ ರಾಶಿಯಲ್ಲಿ ಗೋಚಾರ ಒಂದು ವಿಶಿಷ್ಟವಾದ ಯೋಗವನ್ನು ಉಂಟುಮಾಡುತ್ತದೆ. ಈ ಯೋಗದ ಪರಿಣಾಮವು ವಿಶೇಷವಾಗಿ ವೃಶ್ಚಿಕ, ತುಲಾ, ಮೇಷ, ವೃಷಭ ಮತ್ತು ಧನು ರಾಶಿಗಳ ಮೇಲೆ ಆಗಲಿದೆ. ಜಾತಕದಲ್ಲಿ ಕುಜ-ರಾಹುವಿನ ಯೋಗವನ್ನು ಕುಯೋಗವೆಂದೇ ವರ್ಣಿಸಲಾಗುತ್ತದೆ, ಆದರೆ ಗೋಚಾರದಲ್ಲಿ ಇದರ ಪ್ರಭಾವವು ಏನು ಎಂಬುವುದನ್ನು ನೋಡೋಣ. ಕುಜ ಮತ್ತು ರಾಹು ಇಬ್ಬರನ್ನೂ ಸ್ವಾಭಾವಿಕವಾಗಿ ಕ್ರೂರಗ್ರಹರು ಎಂದೇ ಕರೆಯಲಾಗುತ್ತದೆ. “ಶನಿವತ್ ರಾಹು, ಕುಜವತ್ ಕೇತು” ಎಂಬ ಮಾತಿನಂತೆ ರಾಹುವು ಶನಿಗ್ರಹದ ಹಾಗೇ ಫಲವನ್ನು ಕೊಡುತ್ತಾನೆ. ಕುಜ, ಶನಿ ಮತ್ತು ರಾಹುಗಳಿಗೆ ಒಂದೇ ತರಹದ ಗೋಚಾರ ಮತ್ತು ವೇಧಸ್ಥಾನಗಳ ನಿರ್ದೇಶವನ್ನು ಹೇಳಲಾಗಿದೆ. ಎಂದರೆ ಈ ಮೂರೂ ಗ್ರಹಗಳು ಯಾರದೇ ಜನ್ಮರಾಶಿಯಿಂದ 3, 6 ಮತ್ತು 11 ನೇಯವರಾಗಿ ಸಂಚಾರಮಾಡಿದಾಗ ಶುಭಫಲವನ್ನು ಕೊಡುತ್ತಾರೆ, ಉಳಿದ ರಾಶಿಗಳಲ್ಲಿ ಶುಭಾಶುಭವನ್ನು ವಿಚಾರಿಸಿ ಹೇಳಬಹುದು. ಮೇಲೆ ಹೇಳಿದ ಸ್ಥಾನಗಳ ವೇಧಸ್ಥಾನಗಳನ್ನು ನೋಡಬೇಕು. ಈ ವೇಧಸ್ಥಾನಗಳು 12, 3 ಮತ್ತು 5. ಜನ್ಮರಾಶಿಯಿಂದ ಈ ಸ್ಥಾನಗಳಲ್ಲಿ ಒಂದು ವೇಳೆ ಯಾವುದೇ ಗ್ರಹವಿದ್ದರೂ ಕುಜ ಗೋಚಾರವು ಶುಭ ಫಲವನ್ನು ಕೊಡಲಾರದು. ಮಂಗಳನಿಂದ ವ್ಯಕ್ತಿಯ ಸಾಹಸ, ಶಕ್ತಿ, ಸಾಮರ್ಥ್ಯ, ಗುಣ, ವಿರೋಧ, ಸಿಟ್ಟು, ಅಸೂಯೆ, ಕ್ರೂರ ಸ್ವಭಾವ,...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...